ವರ್ಗಾವಣೆ ಕಾಯ್ದೆಗೆ ಸರ್ಜರಿ
50 ದಾಟಿದ ಶಿಕ್ಷಕಿ, 55 ದಾಟಿದ ಶಿಕ್ಷಕರಿಗಿಲ್ಲ ಕಡ್ಡಾಯ ಭೀತಿ
Team Udayavani, Oct 5, 2019, 6:00 AM IST
ಬೆಂಗಳೂರು: ಐವತ್ತು ವರ್ಷ ದಾಟಿದ ಎಲ್ಲ ಮಹಿಳಾ ಶಿಕ್ಷಕಿಯರಿಗೆ ಹಾಗೂ 55 ವರ್ಷ ದಾಟಿದ ಪುರುಷ ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರ ವರ್ಗಾವಣೆ ಕಾಯ್ದೆ ಯಲ್ಲಿ ಕಡ್ಡಾಯ ಎಂಬ ಪದವನ್ನು ತೆಗೆದು “ವಲಯ ವರ್ಗಾವಣೆ’ ಎಂದು ಪರಿ ಗಣಿಸು ವಂತೆ ಹಾಗೂ “ಸಿ’ ವಲಯ ದಲ್ಲಿ 15 ವರ್ಷ ಒಟ್ಟಿಗೆ ಅಥವಾ ಆಗಾಗ 15 ವರ್ಷ ಕೆಲಸ ಮಾಡಿದ ಶಿಕ್ಷಕರಿಗೆ “ಸಿ’ ವಲಯದಿಂದ ವಿನಾಯಿತಿ ನೀಡಲಾಗಿದೆ.
ಕೋರಿಕೆ ವರ್ಗಾವಣೆಯಲ್ಲಿ ವಿಚ್ಛೇದನ ಪಡೆದಿ ರುವ ಶಿಕ್ಷಕರಿಗೆ ವಿನಾಯಿತಿ ಇತ್ತು. ಆದರೆ ಕಡ್ಡಾಯ ವರ್ಗಾವಣೆಯಲ್ಲಿ ವಿನಾಯಿತಿ ಇರ ಲಿಲ್ಲ. ಆದರೆ ಈಗ ಬುದ್ಧಿಮಾಂದ್ಯ ಮತ್ತು ವಿಶೇಷ ಚೇತನ ಮಕ್ಕಳನ್ನು ಹೊಂದಿರುವ ಪೋಷಕರಿಗೆ ವಿನಾ ಯಿತಿ ಕೊಡಬೇಕೆಂಬ ಉದ್ದೇಶದಿಂದ ತಿದ್ದು ಪಡಿ ತರಲು ಚಿಂತನೆ ನಡೆಸಿರುವುದಾಗಿ ಸಚಿವರು ತಿಳಿಸಿದರು.
ತಿದ್ದುಪಡಿಯ ಪ್ರಮುಖಾಂಶಗಳು
– 2018-19ರಲ್ಲಿ ಕಡ್ಡಾಯ ವರ್ಗಾವಣೆಗೊಳಗಾದ ಶಿಕ್ಷಕರಿಗೆ ಮುಂದಿನ ವರ್ಷ ವರ್ಗಾವಣೆ ಪ್ರಕ್ರಿಯೆಗೂ ಮೊದಲೇ ಲಭ್ಯವಿರುವ ಖಾಲಿ ಹುದ್ದೆಗಳಿಗೆ ಅನುಸಾರವಾಗಿ ಒಂದು ಬಾರಿ ಕೋರಿಕೆ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗುವುದು.
– ಸಿ ವಲಯಕ್ಕೆ ಸಂಬಂಧಪಟ್ಟಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಹೆಚ್ಚುವರಿ ಹಾಗೂ ಕಡ್ಡಾಯ ವರ್ಗಾವಣೆಗಳನ್ನು ಮೊದಲು ತಾಲೂಕು ಹಂತದಲ್ಲಿ, ಅನಂತರ ನಗರ ಜಿಲ್ಲಾ ಹಂತದಲ್ಲಿ ಆದ್ಯತೆಗೆ ಅನುಗುಣವಾಗಿ ಮಾಡಲಾಗುವುದು.
– ಸಿ ವಲಯದ ಪ್ರೌಢ ಶಾಲಾ ಶಿಕ್ಷಕರ ಹೆಚ್ಚುವರಿ ಹಾಗೂ ಕಡ್ಡಾಯ ವರ್ಗಾವಣೆಗಳನ್ನು ಮೊದಲು ತಾಲೂಕು, ಬಳಿಕ ನಗರ ಜಿಲ್ಲೆ , ವಲಯವಾರು ವರ್ಗಾವಣೆಗೆ ಅವಕಾಶ ನೀಡಲಾಗುತ್ತದೆ.
– ಯಾವುದೇ ವಲಯದ ಶಿಕ್ಷಕರಿಗೆ ಇನ್ನು ಮುಂದೆ ಕೋರಿಕೆ ವರ್ಗಾವಣೆಗೆ ಅವಕಾಶ ನೀಡಲಾಗುತ್ತದೆ.
– ಯಾವುದೇ ತಾಲೂಕಿನಲ್ಲಿ ಶೇ.20ಕ್ಕಿಂತ ಹೆಚ್ಚು ಖಾಲಿ ಹುದ್ದೆಗಳು ಇದ್ದಲ್ಲಿ, ಅಂತಹ ತಾಲೂಕುಗಳ ಶಿಕ್ಷಕರಿಗೆ ಕೋರಿಕೆ ವರ್ಗಾವಣೆಗೆ ಅವಕಾಶ ಇರಲಿಲ್ಲ. ಇದನ್ನು ಶೇ.25ಕ್ಕೆ ಏರಿಕೆ ಮಾಡಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ