Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
Team Udayavani, Apr 17, 2024, 2:46 PM IST
ಲಕ್ನೋ: ರಾಮನವಮಿ ಸಂಭ್ರಮದ ನಡುವೆ ಬುಧವಾರ (ಏ.17) ಅಯೋಧ್ಯೆಯ ರಾಮಮಂದಿರದಲ್ಲಿನ ಬಾಲರಾಮನ ಹಣೆಯ ಮೇಲೆ ಸೂರ್ಯರಶ್ಮಿ ಸ್ಪರ್ಶಿಸಿದ್ದು, ನೆರೆದಿದ್ದ ಸಾವಿರಾರು ಭಕ್ತರು ಈ ಕೌತುಕಕ್ಕೆ ಸಾಕ್ಷಿಯಾದರು.
ಇದನ್ನೂ ಓದಿ:ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
ನೂತನವಾಗಿ ನಿರ್ಮಾಣಗೊಂಡಿದ್ದ ರಾಮಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22ರಂದು ಉದ್ಘಾಟಿಸಿದ್ದು, ರಾಮಲಲ್ಲಾ ಪ್ರಾಣಪ್ರತಿಷ್ಠೆಯ ನಂತರ ನಂದ ಮೊದಲ ರಾಮನವಮಿ ದಿನದಂದೇ ಬಾಲರಾಮನ ಹಣೆಯ ಮೇಲೆ ಸೂರ್ಯರಶ್ಮಿ ಸ್ಪರ್ಶಿಸಿದೆ.
ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠೆಗೊಂಡ ಬಾಲರಾಮನ ಹಣೆಯ ಮೇಲೆ 12ಗಂಟೆ 1 ನಿಮಿಷಕ್ಕೆ ಸೂರ್ಯ ತಿಲಕ ಕಂಗೊಳಿಸಿದ್ದು, ಸುಮಾರು ಎರಡೂವರೆ ನಿಮಿಷಗಳ ಕಾಲ ಸೂರ್ಯರಶ್ಮಿ ಸ್ಪರ್ಶಿಸಿರುವುದಾಗಿ ವರದಿ ತಿಳಿಸಿದೆ.
ಬಾಲರಾಮನ ಹಣೆಯ ಮೇಲೆ ಸೂರ್ಯರಶ್ಮಿ ಸ್ಪರ್ಶಿಸಿರುವ ಅಪೂರ್ವ ವಿದ್ಯಮಾನವನ್ನು ಅಯೋಧ್ಯೆಯಾದ್ಯಂತ ಸುಮಾರು 100 ಸ್ಥಳಗಳಲ್ಲಿ ಬೃಹತ್ ಎಲ್ ಇಡಿ ಪರದೆಗಳ ಮೂಲಕ ಪ್ರದರ್ಶಿಸಲಾಗಿತ್ತು.
खत्म हुआ इंतजार, शुरू हुआ रामलला का सूर्याभिषेक, कीजिए EXCLUSIVE दर्शन #RamNavami #Ramlalla #AyodhyaRamMandir #Ayodhya #AyodhyaDham #AyodhyaRamTemple pic.twitter.com/IdDySVMqQT
— India TV (@indiatvnews) April 17, 2024
ರೂರ್ಕಿಯ ಐಐಟಿ ವಿಜ್ಞಾನಿಗಳು ಈ ಕೌತುಕದ ವಿದ್ಯಮಾನದ ಕೌಶಲವನ್ನು ಕಾರ್ಯಗತಗೊಳಿಸಲು ಶ್ರಮಿಸಿದ್ದರು. ಪ್ರತಿವರ್ಷ ರಾಮನವಮಿ ದಿನದಂದು ಬಾಲರಾಮನ ಹಣೆಯ ಮೇಲೆ ಸೂರ್ಯರಶ್ಮಿ ಬೀಳುವಂತೆ ಮಾಡಲಾಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ