
ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ
ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಯಾವುದೇ ಆಲೋಚನೆ ಇಲ್ಲ
Team Udayavani, Mar 27, 2023, 11:45 AM IST

ನವದೆಹಲಿ: ವಿದೇಶಾಂಗ ವ್ಯವಹಾರ ಖಾತೆ ಮಾಜಿ ಸಚಿವೆ, ದಿ.ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್ ಅವರನ್ನು ದೆಹಲಿಯ ಬಿಜೆಪಿ ಕಾನೂನು ಘಟಕದ ಸಹ ಸಂಚಾಲಕರನ್ನಾಗಿ ನೇಮಕ ಮಾಡುವ ಮೂಲಕ ಬಾನ್ಸುರಿ ರಾಜಕೀಯಕ್ಕೆ ಕಾಲಿಟ್ಟಂತಾಗಿದೆ.
ಇದನ್ನೂ ಓದಿ:ದಾಖಲೆಯಿಲ್ಲದೆ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 50 ಲಕ್ಷ ರೂ. ವಶ: ಮೂವರ ವಿರುದ್ಧ ಪ್ರಕರಣ
ಬಾನ್ಸುರಿ ಅವರು ಪ್ರಸ್ತುತ ಹರ್ಯಾಣದಲ್ಲಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಾನ್ಸುರಿ ವಾರ್ವಿಕ್ ಯೂನಿರ್ವಸಿಟಿಯಲ್ಲಿ ಇಂಗ್ಲಿಷ್ ಲಿಟರೇಚರ್ (ಇಂಗ್ಲಿಷ್ ಸಾಹಿತ್ಯ)ನಲ್ಲಿ ಪದವಿ ಪಡೆದಿದ್ದು, ಲಂಡನ್ ನ ಬಿಪಿಪಿ ಲಾ ಸ್ಕೂಲ್ ನಲ್ಲಿ ಕಾನೂನು ಪದವಿ ಪಡೆದಿದ್ದಾರೆ.
ಅಷ್ಟೇ ಅಲ್ಲದೇ ಆಕ್ಸ್ ಫರ್ಡ್ ಯೂನಿರ್ವಸಿಟಿಯಲ್ಲಿ ಬ್ಯಾರಿಸ್ಟರ್ ಲಾ ಹಾಗೂ ಮಾಸ್ಟರ್ ಡಿಗ್ರಿ ಪದವಿ ಪಡೆದಿದ್ದಾರೆ. ಕಾನೂನು ಪದವಿ ಪಡೆದ ಬಾನ್ಸುರಿ, ರಿಯಲ್ ಎಸ್ಟೇಟ್, ತೆರಿಗೆ, ಅಂತಾರಾಷ್ಟ್ರೀಯ ವಾಣಿಜ್ಯ ಆರ್ ಬಿಟ್ರೇಶನ್ ಹಾಗೂ ಕ್ರಿಮಿನಲ್ ವ್ಯಾಜ್ಯಗಳ ಕುರಿತು ಕಾನೂನು ಸಮರ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಬಿಜೆಪಿ ಕಾನೂನು ಘಟಕದಲ್ಲಿ ಸ್ಥಾನ ನೀಡುವ ಮೂಲಕ ಪಕ್ಷದಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿರುವುದಕ್ಕೆ ಪಕ್ಷದ ನಾಯಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಬಾನ್ಸುರಿ ಸ್ವರಾಜ್ ತಿಳಿಸಿದ್ದಾರೆ. ಯಾವುದಾದರು ಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆ ಇದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಬಾನ್ಸುರಿ, ನನಗೆ ಪ್ರಸ್ತುತ ನೀಡಿರುವ ಜವಾಬ್ದಾರಿ ಬಗ್ಗೆ ಹೆಚ್ಚು ಗಮನ ಹರಿಸುತ್ತೇನೆ. ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಯಾವುದೇ ಆಲೋಚನೆ ಇಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್ ಗಳು; ಆರೋಪಿಗಳಿಗೆ ಶೋಧ

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

Train Tragedy ಜವಾಬ್ದಾರರಿಗೆ ಕಠಿಣ ಶಿಕ್ಷೆಯಾಗುತ್ತದೆ: ಒಡಿಶಾದಲ್ಲಿ ಪ್ರಧಾನಿ ಮೋದಿ

India’s Train Tragedy: 1981-2023ರ ನಡುವೆ ಭಾರತದಲ್ಲಿ ನಡೆದ ಭೀಕರ ರೈಲು ದುರಂತಗಳಿವು…
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
