ನೇಪಾಲ ವಿಮಾನ ದುರಂತ; ಮಹಾರಾಷ್ಟ್ರದ ನಾಲ್ವರು ಸೇರಿ ಎಲ್ಲಾ 22 ಮಂದಿ ಸಾವು: ವರದಿ
ನೇಪಾಲದ ಮುಸ್ಟಾಂಗ್ ಜಿಲ್ಲೆಯ ಮನಾಪತಿ ಹಿಮಲ್ ಎಂಬ ಗುಡ್ಡಗಾಡು ಪ್ರದೇಶದಲ್ಲಿ ವಿಮಾನ ಪತನಗೊಂಡಿತ್ತು.
Team Udayavani, May 30, 2022, 4:56 PM IST
ಕಾಠ್ಮಂಡು: ನೇಪಾಲದಲ್ಲಿ ಸಂಭವಿಸಿದ್ದ ಭೀಕರ ವಿಮಾನ ದುರಂತದಲ್ಲಿ ನಾಲ್ವರು ಭಾರತೀಯರು ಸೇರಿದಂತೆ ಎಲ್ಲಾ 22 ಪ್ರಯಾಣಿಕರು ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ(ಮೇ 30) ತಿಳಿಸಿದ್ದಾರೆ.
ಇದನ್ನೂ ಓದಿ:ಈತ ಮಸಾಲೆ ರುಬ್ಬುವುದು,ಮೊಬೈಲ್ ಚಾರ್ಜ್ ಇಡುವುದು ಮೆಸ್ಕಾಂ ಆಫೀಸಲ್ಲೇ! ಏನಿದು ಪ್ರತಿಭಟನೆ
ವಿಮಾನ ದುರಂತರದಲ್ಲಿ ಮಹಾರಾಷ್ಟ್ರದ ಥಾಣೆಯ ಒಂದೇ ಕುಟುಂಬದ ನಾಲ್ವರು ಸಹಿತ 22 ಮಂದಿ ಪ್ರಯಾಣಿಕರು ಮೃತ ಪಟ್ಟಿರುವುದಾಗಿ ಶಂಕಿಸಲಾಗಿದೆ. ದುರಂತದಲ್ಲಿ ಯಾರೊಬ್ಬರೂ ಬದುಕುಳಿದಿರುವ ಸಾಧ್ಯತೆ ಇಲ್ಲ. ಆದರೆ ಈ ಬಗ್ಗೆ ಅಧಿಕಾರಿಗಳು ಅಧಿಕೃತವಾಗಿ ಖಚಿತಪಡಿಸಬೇಕಾಗಿದೆ ಎಂದು ಗೃಹ ಸಚಿವಾಲಯದ ವಕ್ತಾರ ಫದೀಂದ್ರ ಮಣಿ ಪೊಖ್ರೇಲ್ ತಿಳಿಸಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ಹೇಳಿದೆ.
ನೇಪಾಲದ ಮುಸ್ಟಾಂಗ್ ಜಿಲ್ಲೆಯ ಮನಾಪತಿ ಹಿಮಲ್ ಎಂಬ ಗುಡ್ಡಗಾಡು ಪ್ರದೇಶದಲ್ಲಿ ವಿಮಾನ ಪತನಗೊಂಡಿತ್ತು. ಪ್ರತಿಕೂಲ ಹವಾಮಾನದಿಂದಾಗಿ ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿದೆ ಎಂದು ವರದಿ ತಿಳಿಸಿದೆ.
ವಿಮಾನ ಪತನಗೊಂಡು ಸುಮಾರು 20 ಗಂಟೆಗಳ ನಂತರ ಘಟನೆ ನಡೆದ ಸ್ಥಳವನ್ನು ಪತ್ತೆಹಚ್ಚಲಾಗಿತ್ತು. ನೇಪಾಲದ ಪೊಖ್ರಾದಿಂದ ಜೊಮ್ಸಮ್ ಎಂಬಲ್ಲಿಗೆ ಬೆಳಗ್ಗೆ 9.55ಕ್ಕೆ ಪ್ರಯಾಣ ಬೆಳೆಸಿದ ವಿಮಾನ, ಕೆಲವೇ ನಿಮಿಷಗಳಲ್ಲಿ ವಿಮಾನ ನಿಲ್ದಾಣದ ನಿಯಂತ್ರಣ ಕೊಠಡಿಯ ರಾಡಾರ್ ಸಂಪರ್ಕ ಕಡಿದುಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ