ಸಿಹಿ ಗೆಣಸು ಬೆಳೆಯುವುದು ಸುಲಭ; ಕೃಷಿ ಹೇಗೆ ?
ಪ್ರಾಣಿಗಳ ಉಪಟಳದ ಬಗ್ಗೆಯೂ ಕೃಷಿಕರು ಎಚ್ಚರ ವಹಿಸಬೇಕಾಗುತ್ತದೆ.
Team Udayavani, Jul 9, 2021, 2:54 PM IST
ಉಷ್ಣ ವಲಯದ ಪ್ರಮುಖ ತರಕಾರಿಗಳಲ್ಲಿ ಸಿಹಿಗೆಣಸು ಕೂಡ ಒಂದು. ಉಪಬೆಳೆಯಾಗಿ ಇದರಲ್ಲಿ ಉತ್ತಮ ಆದಾಯ ಗಳಿಸಬಹುದು. ಇದು ಒಂದು ಗೆಡ್ಡೆ ತರಕಾರಿಯಾಗಿದ್ದು, ಬಳ್ಳಿಯಂತೆ ಹಬ್ಬಿ ಬೆಳೆಯುವ ಸಸಿ. ಮುಖ್ಯವಾಗಿ ಬಿಳಿ, ಹೊಂಬಣ್ಣ, ಕಿತ್ತಳೆ, ಕೆಂಪು ಮಿಶ್ರಿತ ಕಂದು ಬಣ್ಣ ಇತ್ಯಾದಿ ಬಗೆಗಳಿವೆ.
ಕೃಷಿ ಹೇಗೆ ?
ಗೆಣಸು ಗೆಡ್ಡೆಗಳಲ್ಲಿ ಬರುವ ಮೊಳಕೆಗಳನ್ನು ನೆಡುವ ಮೂಲಕ ಅಥವಾ ಬಳ್ಳಿಯ ಕಾಂಡ (ಹಂಬು) ತುಂಡು ಮಾಡಿ ನಾಟಿ ಮಾಡುವ ಮೂಲಕ ಕೃಷಿ ಮಾಡಲಾಗುತ್ತದೆ. ಉತ್ತಮ ಇಳುವರಿಗೆ ಆಯ್ದ ಗೆಣಸಿನ ಮೊಳಕೆಗಳನ್ನು ನಾಟಿ ಮಾಡುವುದು ಉತ್ತಮ. ಆದರೆ ಹೆಚ್ಚಿನ ಕಡೆ ಸುಲಭ ವಿಧಾನವಾದ ಕಾಂಡ ತುಂಡರಿಸಿ ನಾಟಿ ಮಾಡುವುದನ್ನು ಅನುಸರಿಸಲಾಗುತ್ತದೆ.
ಸುಮಾರು ಎರಡು ಅಡಿ ಅಗಲಕ್ಕೆ ಒಂದು ಅಡಿ ಆಳ ಮಣ್ಣನ್ನು ಅಗೆದು ಅದಕ್ಕೆ ಸ್ವಲ್ಪ ಸುಡು ಮಣ್ಣು, ಒಣಗಿದ ಹಟ್ಟಿಗೊಬ್ಬರ ಸೇರಿ ಮಡಿ ತಯಾರಿಸಿ ಅದರಲ್ಲಿ ಮೂರು ಅಡಿ ದೂರಕ್ಕೆ ಗೆಣಸಿನ ಮೊಳಕೆ ಅಥವಾ 2ರಿಂದ 3 ಅಡಿ ಉದ್ದದ ಗೆಣಸಿನ ಬಳ್ಳಿಯ ಕಾಂಡ (ಹಂಬು)ಗಳನ್ನು ತುಂಡರಿಸಿ ನಾಟಿ ಮಾಡಬೇಕು. ಬಳಿಕ ಅದಕ್ಕೆ ಬೇರೆಡೆಯಿಂದ ಸ್ವಲ್ಪ ಮಣ್ಣು ಸೇರಿಸಿ ನೆಲದಿಂದ ಒಂದು ಅಡಿ ಎತ್ತರಿಸಬೇಕು. ಮಡಿ ಗಳು ಸುಮಾರು ಐದು ಅಡಿ ದೂರ ಇದ್ದರೆ ಬಳ್ಳಿ ಹಬ್ಬಿ ಬೆಳೆಯಲು ಸಹಕಾರಿ.
ಕಾಂಡ ತುಂಡುಗಳನ್ನು ನೆಟ್ಟ ಸುಮಾರು 10ರಿಂದ 15 ದಿನಗಳಲ್ಲಿ ಅವುಗಳು ಬೇರು ಬಿಟ್ಟು 3 ವಾರಗಳೊಳಗಾಗಿ ಹುಲುಸಾಗಿ ಬೆಳೆಯಲಾರಂಭಿಸುತ್ತವೆ. ಆಗ ಗೊಬ್ಬರ, ಸೊಪ್ಪು ನೀಡಿ ಅದರ ಮೇಲೆ ಮಣ್ಣು ಹಾಕಿ ಮುಚ್ಚಬೇಕು. ಮಡಿಯ ಮೇಲೆ ಹುಟ್ಟುವ ಕಳೆ ಕೀಳುವುದು
ಬಳ್ಳಿ ಚೆನ್ನಾಗಿ ಬೆಳೆಯಲು ಸಹಕಾರಿ. ಪ್ರತಿ ದಿನ ಸ್ವಲ್ಪ ನೀರು ಹಾಕಬೇಕು.
ನಾಟಿ ಮಾಡಿ 4ರಿಂದ 6 ತಿಂಗಳುಗಳಲ್ಲಿ ಗೆಣಸು ಕೊಯ್ಲಿಗೆ ಬರುತ್ತವೆ. ಗೆಣಸಿನ ಎಲೆಗಳು ಹಣ್ಣಾಗಲಾರಂಭಿಸುವುದೇ ಗೆಡ್ಡೆ ಕೊಯ್ಲಿಲಿಗೆ ಸಿದ್ಧವಾಗಿದೆ ಎಂಬುದರ ಸೂಚನೆ.
ರೋಗ, ಪ್ರಾಣಿಗಳ ಕಾಟ
ಸಿಹಿಗೆಣಸಿಗೆ ವಿವಿಧ ರೀತಿಯ ಶಿಲೀಂಧ್ರ ರೋಗಗಳು, ಕಪ್ಪುಕೊಳೆ ರೋಗ, ಕಾಂಡದ ಕೊಳೆಯುವಿಕೆ, ಕೀಟಗಳು, ಕಂಬಳಿ ಹುಳ, ಗೆದ್ದಲುಗಳ ಕಾಟ ಬಹಳಷ್ಟಿರುತ್ತದೆ ಮತ್ತು ಪ್ರಾಣಿಗಳ ಉಪಟಳದ ಬಗ್ಗೆಯೂ ಕೃಷಿಕರು ಎಚ್ಚರ ವಹಿಸಬೇಕಾಗುತ್ತದೆ.
ಹವಾಗುಣ ಮತ್ತು ಮಣ್ಣು
ವಿಪರೀತ ಮಳೆ ಬೀಳುವ, ಚಳಿ ಪ್ರದೇಶ ಸಿಹಿಗೆಣಸಿ ಕೃಷಿಗೆ ಅಷ್ಟು ಸೂಕ್ತವಲ್ಲ. ಇದು ಮುಖ್ಯವಾಗಿ ಉಷ್ಣ ವಲಯದ ಬೆಳೆ. 21-26 ಡಿಗ್ರಿ ಸೆ. ಉಷ್ಣಾಂಶ ಇರುವ ಪ್ರದೇಶವಾದರೆ ಉತ್ತಮ. ಜೂನ್ -ಜುಲೈ ಅಥವಾ ಡಿಸೆಂಬರ್ -ಜನವರಿ ಇದರ ನಾಟಿಗೆ ಸೂಕ್ತ ಸಮಯ. ಗೆಣಸು ಎಲ್ಲ ರೀತಿಯ ಮಣ್ಣುಗಳಲ್ಲಿ ಬೆಳೆಯಬಹುದಾದರೂ ಮರಳು ಮಿಶ್ರಿತ ಗೋಡು ಮಣ್ಣು ಅತ್ಯುತ್ತಮ. ಮಣ್ಣು ಸರಾಗವಾಗಿ ನೀರು ಬಸಿದು ಹೋಗುವಂತೆ ಇದ್ದರೆ ಇಳುವರಿ ಹೆಚ್ಚು. ಈ ಕೃಷಿಗೆ ಸಮತಟ್ಟಾದ ಬಿಸಿಲು ಬೀಳುವ ಬಯಲು ಪ್ರದೇಶ ಅಗತ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ
Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ
YouTube ಠಕ್ಕರ್ನೀಡಲು ಮಸ್ಕ್ ಹೊಸ ಟಿವಿ ಆ್ಯಪ್
Facebook, Instagram ಸರ್ವರ್ ಡೌನ್, ಸೇವೆಯಲ್ಲಿ ವ್ಯತ್ಯಾಸ; 829 ಕೋಟಿ ರೂಪಾಯಿ ನಷ್ಟ
Paytm; ಶೀಘ್ರವೇ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ನ ಪರವಾನಿಗೆ ರದ್ದು?
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್