ಕಲಬುರಗಿ: ಗ್ರಾಮ ಪಂಚಾಯತ್ ಚುನಾವಣೆ ಗೆದ್ದ ತಾಲೂಕು ಪಂಚಾಯತ್ ಸದಸ್ಯ!


Team Udayavani, Dec 30, 2020, 1:13 PM IST

ಕಲಬುರಗಿ: ಗ್ರಾಮ ಪಂಚಾಯತ್ ಚುನಾವಣೆ ಗೆದ್ದ ತಾಲೂಕ್ ಪಂಚಾಯತ್ ಸದಸ್ಯ!

ಕಲಬುರಗಿ: ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ 11 ಕೇಂದ್ರಗಳಲ್ಲಿ ನಡೆಯುತ್ತಿದ್ದು, ತಾಲೂಕು ಪಂಚಾಯಿತಿ ಸದಸ್ಯರೊಬ್ಬರು ಗೆಲುವು ಸಾಧಿಸಿದ್ದಾರೆ.

ಚಿಂಚೋಳಿ ತಾಲೂಕಿನ ಜಟ್ಟೂರು ಗ್ರಾಮ ಪಂಚಾಯಿತಿಯಲ್ಲಿ ಸ್ಪರ್ಧಿಸಿದ್ದ ತಾಲೂಕು ಪಂಚಾಯಿತಿ ಸದಸ್ಯ ವೆಂಕಟರೆಡ್ಡಿ ಸಾಯಿರೆಡ್ಡಿ ಗೆಲುವಿನ ನಗೆ ಬೀರಿದರು.

121 ಮತಗಳ ಅಂತರದಿಂದ ವೆಂಕಟರೆಡ್ಡಿ ಜಯ ಗಳಿಸಿದರು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಇವರು 2015ರಲ್ಲಿ ಶಿರೋಳ್ಳಿ ತಾಪಂ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು.

ಇತರ ಕ್ಷೇತ್ರಗಳ ಫಲಿತಾಂಶ: ಕಲಬುರಗಿ ತಾಲೂಕಿನ ಫರಹತಾಬಾದ್ ಗ್ರಾಮ ಪಂಚಾಯಿತಿ ವಾರ್ಡ್ ನಂ.2ರಲ್ಲಿ ಮೂವರು ಆಯ್ಕೆಯಾದರು. ರಾಚಮ್ಮ ಶರಣಬಸಪ್ಪ 386 ಮತ, ವಿಶ್ವರಾಜ ಹಿರೇಮಠ 381 ಮತ ಹಾಗೂ ಕಾಳಮ್ಮ ಭಂಕೂರ 292‌ ಮತಗಳಿಂದ ಜಯ ಗಳಿಸಿದರು.

ಇದನ್ನೂ ಓದಿ:ರಾತ್ರಿ ಕರ್ಫ್ಯೂ ವಿಚಾರ: ಸಚಿವರುಗಳ ಭಿನ್ನ ಹೇಳಿಕೆ, ಬಗೆಹರಿಯದ ಗೊಂದಲ!

ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮ ಪಂಚಾಯಿತಿ ವಾರ್ಡ್ ನಂ.1ರಲ್ಲಿ ಮಲ್ಲಿನಾಥ ತುಪ್ಪದ 341 ಮತ, ಮಲ್ಲಿಕಾರ್ಜುನ ‌ಅಳ್ಳೊಳ್ಳಿ 394 ಮತ, ಮೋನಮ್ಮ ಭಜಂತ್ರಿ 303 ಮತಗಳನ್ನು ಪಡೆದು ಆಯ್ಕೆಯಾದರು.

ಇದೇ ಗ್ರಾಮ ಪಂಚಾಯಿತಿಯ ವಾರ್ಡ್ ನಂ‌.2ರಲ್ಲಿ ಮೂವರು ಗೆಲುವು ಸಾಧಿಸಿದರು. ರಾಜೇಶ್ವರಿ ಅಖಂಡಪ್ಪ ಶಿರವಾಳ 394 ಮತ, ಮಲ್ಲಿನಾಥ ಕೆ.ಭೂಸಾ 393 ಮತ ಹಾಗೂ ವಿರೂಪಾಕ್ಷಪ್ಪ 335 ಮತಗಳನ್ನು ಪಡೆದು ಗೆಲುವು ಸಾಧಿಸಿದರು.

ಕಲಬುರಗಿ ತಾಲೂಕಿನ ನಂದೂರ (ಕೆ) ಗ್ರಾಮ ಪಂಚಾಯಿತಿಯ ವಾರ್ಡ್ ನಂ.2ರಿಂದ ಸೀತಾಬಾಯಿ ರಾಠೋಡ 282 ಮತ, ಗೀತಾ ರವಿ ಪವಾರ 279 ಮತ ಹಾಗೂ ಗಂಗಾಧರ ಸಾವಕಾರ 255 ಮತಗಳನ್ನು ಪಡೆದು ಆಯ್ಕೆಯಾದರು.

ಕಲಬುರಗಿ ತಾಲೂಕಿನ ಸರಡಗಿ (ಬಿ) ಗ್ರಾಮ ‌ಪಂಚಾಯಿತಿಯ ವಾರ್ಡ್ ನಂ.2ರಲ್ಲಿ ಚಂದನಕುಮಾರ ಬಾಬು ಬುಳ್ಳಾ 394 ಮತ, ಚಂದ್ರಕಾಂತ ಸಣಬು‌ 313 ಮತ, ಲಕ್ಷ್ಮಣ ಹೂವಣ್ಣ ಲಗಬೊ 332 ಮತಗಳಿಂದ ಗೆಲುವು ಪಡೆದರು.

ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮ ಪಂಚಾಯಿತಿಯ ವಾರ್ಡ್ ನಂ.1ರಿಂದ ಅಣ್ಣಾರಾಯ ಗೊಲ್ಲಾಳಪ್ಪ 578 ಮತಗಳನ್ನು ಪಡೆದು ಆಯ್ಕೆಯಾದರು.

ಕಾಳಗಿ ತಾಲೂಕಿನ ಅರಣಕಲ್ ಗ್ರಾಮ ಪಂಚಾಯಿತಿಯ ಗೊಣಗಿ ಗ್ರಾಮದ ಅಪ್ಪರಾವ ರುದ್ರಪ್ಪ 92 ಮತಗಳಿಂದ ಗೆಲುವು ‌ಸಾಧಿಸಿದರು. ವಿಜೇತ ಅಭ್ಯರ್ಥಿಗಳು ಮತ್ತು ಬೆಂಬಲಿಗರು ವಿಜಯೋತ್ಸವದಲ್ಲಿ ತೊಡಗಿದ್ದಾರೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.