ತಾಲೂಕು ರೇಷ್ಮೆ ಇಲಾಖೆ ಕಚೇರಿಗಳಿಗೆ ಬೀಗ

ದ.ಕ., ಉಡುಪಿ ಜಿಲೆಗಳಲ್ಲಿ ರೇಷ್ಮೆ ಬೆಳೆ ಕುಸಿತ

Team Udayavani, Mar 4, 2023, 2:43 PM IST

silk

ಬಂಟ್ವಾಳ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ರೇಷ್ಮೆ ಕೃಷಿಕರ ಸಂಖ್ಯೆ ಕುಸಿಯುತ್ತಿದ್ದಂತೆ ಉಭಯ ಜಿಲ್ಲೆಗಳ ತಾಲೂಕುಗಳಲ್ಲಿದ್ದ ರೇಷ್ಮೆ ಇಲಾಖೆಯ ಕಚೇರಿಗಳಿಗೆ ಬೀಗ ಬಿದ್ದಿದೆ. ಈ ತನಕ ದ.ಕ. ಜಿಲ್ಲೆಯಲ್ಲಿ ಇದ್ದ ಏಕೈಕ ತಾಲೂಕು ಕಚೇರಿ ಬಂಟ್ವಾಳದ ಏಕೈಕ ಸಿಬಂದಿ ಜ. 31ರಂದು ನಿವೃತ್ತರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ ಕಾರ್ಕಳದಲ್ಲಿ ಮಾತ್ರ ತಾಲೂಕು ರೇಷ್ಮೆ ಇಲಾಖೆ ಕಚೇರಿ ಕಾರ್ಯಾಚರಿಸುತ್ತಿದೆ. ಉಭಯ ಜಿಲ್ಲೆಗಳಲ್ಲಿ ಜಿಲ್ಲಾ ಕಚೇರಿಗಳು ಮಾತ್ರ ಒಂದೆರಡು ಸಿಬಂದಿಯೊಂದಿಗೆ ಕಾರ್ಯಾಚರಿಸುತ್ತಿವೆ.

ತಲಾ 10 ಹೆಕ್ಟೇರ್‌ನಲ್ಲಿ ಬೆಳೆ

ಒಂದು ಕಾಲದಲ್ಲಿ ಗರಿಷ್ಠ ರೇಷ್ಮೆ ಬೆಳೆಗಾರರನ್ನು ಹೊಂದಿದ್ದ ಅವಿಭಜಿತ ದ.ಕ.ದಲ್ಲಿ ವರ್ಷ ಕಳೆದಂತೆ ಬೆಳೆಗಾರರು ಕಡಿಮೆಯಾಗುತ್ತಾ ಬಂದು ಸದ್ಯ ಉಭಯ ಜಿಲ್ಲೆಗಳಲ್ಲಿ ತಲಾ 10 ಹೆಕ್ಟೇರ್‌ನಷ್ಟು ಮಾತ್ರ ರೇಷ್ಮೆ ಬೆಳೆ ಉಳಿದಿರಬಹುದು. ಬೆಳೆಗಾರರ ಸಂಖ್ಯೆಯೂ 60ರಷ್ಟಿರಬಹುದು ಎಂದು ಇಲಾಖೆಯ ಮೂಲಗಳು ಹೇಳುತ್ತಿವೆ. 2020ರ ಆಗಸ್ಟ್‌ನಲ್ಲಿ ಇಲಾಖೆಯ ಮಾಹಿತಿ ಪ್ರಕಾರ ದ.ಕ.ದಲ್ಲಿ 30 ಎಕ್ರೆ ವ್ಯಾಪ್ತಿಯಲ್ಲಿ 43 ಮಂದಿ ಹಾಗೂ ಉಡುಪಿಯಲ್ಲಿ 59 ಕೃಷಿಕರು 60 ಎಕರೆ ಪ್ರದೇಶದಲ್ಲಿ ರೇಷ್ಮೆ ಬೆಳೆಯುತ್ತಿದ್ದರು. ಈಗ ಸಂಬಂಧಪಟ್ಟ ಸಿಬಂದಿ, ಕಚೇರಿ ಇಲ್ಲದ ಕಾರಣ ಸ್ಪಷ್ಟವಾದ ಮಾಹಿತಿ ಕೂಡ ಇಲ್ಲ. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹೆಚ್ಚಿನ ಬೆಳೆಗಾರರು, ದ.ಕ. ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿಗಳಲ್ಲಿ ಒಂದಷ್ಟು ಬೆಳೆಗಾರರು ಉಳಿದಿದ್ದಾರೆ.

ಕಾರ್ಕಳದಲ್ಲಿ ನೂಲು ಬಿಚ್ಚುವ ಕೇಂದ್ರ

ಈ ಹಿಂದೆ ಬೆಳ್ತಂಗಡಿಯ ಗೇರುಕಟ್ಟೆ ಮತ್ತು ಪುತ್ತೂರಿನ ಕೊಯಿಲದಲ್ಲಿ ರೇಷ್ಮೆ ಇಲಾಖೆಯ ಫಾರ್ಮ್ ಕಾರ್ಯಾಚರಿ ಸುತ್ತಿದ್ದು, ಕೋಯಿಲದ ಫಾರ್ಮ್ ಹಲವು ವರ್ಷಗಳ ಹಿಂದೆಯೇ ಬಂದ್‌ ಆಗಿತ್ತು. ಪ್ರಸ್ತುತ ಗೇರುಕಟ್ಟೆಯ ಫಾರ್ಮ್ನಲ್ಲಿ 1 ಡಿ ಗ್ರೂಪ್‌ ನೌಕರ ಮಾತ್ರ ಇದ್ದಾರೆ. ಕಾರ್ಕಳದಲ್ಲಿ ರೇಷ್ಮೆ ಖರೀದಿ ಸಂಬಂಧಿಸಿ ಚಿಕ್ಕ ಮಾರುಕಟ್ಟೆ ಜತೆಗೆ ರೇಷ್ಮೆ ನೂಲು ಬಿಚ್ಚುವ ಕೇಂದ್ರವೂ ಇರುವುದರಿಂದ ಅಲ್ಲಿ ಒಂದಷ್ಟು ಬೆಳೆಗಾರರು ಉಳಿದಿದ್ದಾರೆ.

ಹಾಸನ ಜಿಲ್ಲೆಯವರಿಗೆ ಪ್ರಭಾರ

ದ.ಕ., ಉಡುಪಿ ಜಿಲ್ಲೆಗಳಲ್ಲಿ ಸಿಬಂದಿ ನಿವೃತ್ತಿಯಾಗುತ್ತಿದ್ದಂತೆ ಇಲಾಖೆಯ ಕಚೇರಿಗಳನ್ನು ಮುಚ್ಚುತ್ತಾ ಬರಲಾಗಿದ್ದು, ಸುಳ್ಯ ಕಚೇರಿ ಮುಚ್ಚಿದ ಬಳಿಕ ಅದನ್ನು ಪುತ್ತೂರಿಗೆ ಸ್ಥಳಾಂತರಿಸಲಾಗಿತ್ತು. ಬಳಿಕ ಪುತ್ತೂರಿನ ಕಚೇರಿಯ ಜತೆಗೆ ಬೆಳ್ತಂಗಡಿಯ ಕಚೇರಿಯೂ ಮುಚ್ಚಿದೆ. ಬಂಟ್ವಾಳದ ಕಚೇರಿಯ ಏಕೈಕ ಸಿಬಂದಿ ಜ. 31ರಂದು ನಿವೃತ್ತರಾಗಿದ್ದಾರೆ. ಪ್ರಸ್ತುತ ಮಂಗಳೂರಿನಲ್ಲಿ ಮಾತ್ರ ಜಿಲ್ಲಾ ಕಚೇರಿ (ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿ) ಕಾರ್ಯಾಚರಿಸುತ್ತಿದೆ.

ಉಡುಪಿಯಲ್ಲಿ ಕುಂದಾಪುರ ಕಚೇರಿಯನ್ನು ಜಿಲ್ಲಾ ಕಚೇರಿಗೆ ಸ್ಥಳಾಂತರಿಸಲಾಗಿದ್ದು, ತಾಲೂಕಿನಲ್ಲಿ ಕಾರ್ಕಳದಲ್ಲಿ ಮಾತ್ರ ಕಚೇರಿ ಕಾರ್ಯಾಚರಿಸುತ್ತಿದೆ. ದ.ಕ. ಹಾಗೂ ಉಡುಪಿ ಸೇರಿ ಜಿಲ್ಲಾ ಮಟ್ಟಕ್ಕೆ ಒಂದೇ ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿ ಇದ್ದು, 2021ರ ಜುಲೈಯಲ್ಲಿ ಅವರ ನಿವೃತ್ತಿಯ ಬಳಿಕ ಪ್ರಸ್ತುತ ಹಾಸನ ಜಿಲ್ಲೆಯ ಸಹಾಯಕ ನಿರ್ದೇಶಕರು ಪ್ರಭಾರದಲ್ಲಿದ್ದಾರೆ.

ಕರಾವಳಿಯ ವಾತಾವರಣ ರೇಷ್ಮೆ ಬೆಳೆಗೆ ಸೂಕ್ತವಿಲ್ಲದೆ ಇರುವುದರಿಂದ ಬೆಳೆಗಾರರ ಸಂಖ್ಯೆ ಕ್ಷೀಣಿಸಿ, ಪ್ರಸ್ತುತ ಉಭಯ ಜಿಲ್ಲೆಗಳಲ್ಲಿ ತಲಾ 10 ಹೆಕ್ಟೇರ್‌ನಷ್ಟು ರೇಷ್ಮೆ ಬೆಳೆ ಇರಬಹುದು. ಸಿಬಂದಿ ನಿವೃತ್ತಿಯಾಗುತ್ತಿದ್ದಂತೆ ಕಚೇರಿಗಳನ್ನು ಕೂಡ ಮುಚ್ಚಿ ಇಲಾಖೆ ಬೇರೆ ಹತ್ತಿರದ ಕಚೇರಿಗೆ ಸ್ಥಳಾಂತರ ಮಾಡುತ್ತಿದೆ.
-ದೇವೇಂದ್ರ ಕುಮಾರ್‌, ರೇಷ್ಮೆ ಸಹಾಯಕ ನಿರ್ದೇಶಕರು, ಹಾಸನ (ದ.ಕ., ಉಡುಪಿ ಜಿಲ್ಲೆಯ ಪ್ರಭಾರಿ

 ಬೆಲೆ ಕುಸಿತಕ್ಕೆ ಕಾರಣವೇನು?

ಕರಾವಳಿ ಜಿಲ್ಲೆಯಲ್ಲಿ ಮಾರುಕಟ್ಟೆ ಸಮಸ್ಯೆ ಸೇರಿದಂತೆ ಹಲವು ಕಾರಣಕ್ಕೆ ರೇಷ್ಮೆ ಬೆಳೆ ಕುಸಿತ ಕಂಡಿದೆ. ಗೂಡುಗಳನ್ನು ಮಾರಾಟಕ್ಕೆ ಬೇರೆ ಜಿಲ್ಲೆಗಳಿಗೆ ಕೊಂಡು ಹೋಗಬೇಕಿದೆ. ಇಲ್ಲಿನ ವಾತಾವರಣ ಕೂಡ ಬೆಳೆಗೆ ಸೂಕ್ತವಿಲ್ಲದೆ ಇರುವುದು ಕುಸಿತಕ್ಕೆ ಕಾರಣ. ಅತಿಯಾದ ಮಳೆ ಹಾಗೂ ಬಿಸಿಲಿನ ಪರಿಣಾಮ ಕೃಷಿಕರು ರೇಷ್ಮೆಯಿಂದ ನಷ್ಟ ಅನುಭವಿಸುತ್ತಿದ್ದಾರೆ. ಇತರ ಕೆಲವು ಜಿಲ್ಲೆಗಳಲ್ಲಿ 10 ಬೆಳೆಗಳನ್ನು ಬೆಳೆದರೆ, ಕರಾವಳಿಯಲ್ಲಿ 2 ಬೆಳೆಯನ್ನೇ ಕಷ್ಟದಲ್ಲಿ ಬೆಳೆಯುತ್ತಿದ್ದಾರೆ ಎಂದು ಇಲಾಖೆ ಮೂಲಗಳು ತಿಳಿಸಿದೆ.

~ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.