ವಿವಾಹ ಸಮಾರಂಭದಲ್ಲಿ ವಧು ಡ್ಯಾನ್ಸ್…ವರನಿಂದ ಕಪಾಳಮೋಕ್ಷ…ಮುಂದೆ ನಡೆದಿದ್ದೇನು ಗೊತ್ತಾ?

ಏತನ್ಮಧ್ಯೆ ವಧುವಿನ ಸಹೋದರ ಸಂಬಂಧಿಯೊಬ್ಬ ಬಂದು ಆಕೆಯ ಕೈಹಿಡಿದು ಡ್ಯಾನ್ಸ್ ನಲ್ಲಿ ತೊಡಗಿದ್ದ.

Team Udayavani, Jan 22, 2022, 2:51 PM IST

ವಿವಾಹ ಸಮಾರಂಭದಲ್ಲಿ ಕುಣಿದ ವಧುಗೆ ವರನಿಂದ ಕಪಾಳಮೋಕ್ಷ; ಸೋದರ ಸಂಬಂಧಿ ಜೊತೆ ವಧು ವಿವಾಹ!

ತಮಿಳುನಾಡು: ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡಿರುವ ಘಟನೆ ಮೂವರ ಜೀವನದ ದಿಕ್ಕನ್ನೇ ಬದಲಿಸಿರುವ ಅಪರೂಪದ ಪ್ರಸಂಗವೊಂದು ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ವಿವಾಹ ಸಮಾರಂಭದಲ್ಲಿ ಮದುಮಗಳು ಡ್ಯಾನ್ಸ್ ಮಾಡಿದ್ದು, ಈ ಸಂದರ್ಭದಲ್ಲಿ ಆಕ್ರೋಶಗೊಂಡ ವರ ಆಕೆಯ ಕೆನ್ನೆಗೆ ಹೊಡೆದಿದ್ದ, ಇದರ ಪರಿಣಾಮ ಮಧುಮಗಳು ತನ್ನ ಸಹೋದರ ಸಂಬಂಧಿಯನ್ನು ವಿವಾಹವಾಗಿರುವ ಪ್ರಕರಣ ಇದಾಗಿದೆ.

ಇದನ್ನೂ ಓದಿ:ಯೋಗ್ಯತೆ ಇಲ್ಲ, ಧಂ ಇಲ್ಲ,ವಿಷಸರ್ಪದಂತೆ : ಸಿದ್ದರಾಮಯ್ಯ ವಿರುದ್ಧ ಹೆಚ್ ಡಿಕೆ ಆಕ್ರೋಶ

ಏನಿದು ಘಟನೆ:

ಇದೊಂದು ಸಿನಿಮಾ ಶೈಲಿಯಲ್ಲಿ ನಡೆದ ಘಟನೆಯಂತಿದ್ದು, ಸ್ಥಳೀಯ ಪ್ರಸಿದ್ಧ ಉದ್ಯಮಿಯೊಬ್ಬರ ಮಗಳ ವಿವಾಹ ತಮಿಳುನಾಡಿನ ಕಡಂಪುಲಿಯೂರ್ ನಲ್ಲಿ ಜನವರಿ 20ರಂದು ನಡೆಯಬೇಕಾಗಿತ್ತು. ಪನ್ರುಟಿಯ ವಧು ಹಾಗೂ ಪೆರಿಯಕುಟ್ಟುಪಾಳ್ಯಂನ ವರ 2021ರ ನವೆಂಬರ್ 21ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರು.

2022ರ ಜನವರಿ 19ರಂದು ಜೋಡಿಯ ವಿವಾಹಕ್ಕೆ ಒಂದು ದಿನದ ಮೊದಲು ನಡೆದ ವಿವಾಹ ಸಮಾರಂಭದಲ್ಲಿ ವರ, ವಧು ಹಾಗೂ ಸಂಬಂಧಿಕರು ಪಾಲ್ಗೊಂಡಿದ್ದರು. ವಿವಾಹ ಸಮಾರಂಭದಲ್ಲಿ ನಡೆಯುತ್ತಿದ್ದ ಡ್ಯಾನ್ಸ್ ಗೆ ವಧು ಹೆಜ್ಜೆ ಹಾಕತೊಡಗಿದ್ದಳು, ಆರಂಭದಲ್ಲಿ ಎಲ್ಲರೂ ಸಂಭ್ರಮಿಸಿದ್ದರು. ಏತನ್ಮಧ್ಯೆ ವಧುವಿನ ಸಹೋದರ ಸಂಬಂಧಿಯೊಬ್ಬ ಬಂದು ಆಕೆಯ ಕೈಹಿಡಿದು ಡ್ಯಾನ್ಸ್ ನಲ್ಲಿ ತೊಡಗಿದ್ದ.

ಇದು ವರನಿಗೆ ಸಹಿಸಿಕೊಳ್ಳಲು ಸಾಧ್ಯವಾಗದೆ ತನ್ನ ಭಾವಿ ಪತ್ನಿ ಹಾಗೂ ಸಹೋದರ ಸಂಬಂಧಿಯನ್ನು ದೂರ ತಳ್ಳಿಬಿಟ್ಟಿದ್ದ. ಇದರ ಪರಿಣಾಮ ಇಬ್ಬರ ನಡುವೆ ವಾಗ್ವಾದ ನಡೆದಾಗ, ವರ ವಧುವಿನ ಕೆನ್ನೆಗೆ ಹೊಡೆದು ಬಿಟ್ಟಿದ್ದ. ಕೂಡಲೇ ಆಕೆಯು ವರನ ಕೆನ್ನೆಗೆ ಹೊಡೆದು ಬಿಟ್ಟಿದ್ದಳು. ಈ ಘಟನೆ ನಡೆಯುತ್ತಿದ್ದಂತೆಯೇ ಎರಡು ಕುಟುಂಬಗಳ ಸದಸ್ಯರ ನಡುವೆ ಜಗಳ ಆರಂಭವಾಗಿಬಿಟ್ಟಿತ್ತು. ಇವನನ್ನು ನನ್ನ ಅಳಿಯನನ್ನಾಗಿ ಒಪ್ಪಿಕೊಳ್ಳಲಾರೆ ಎಂದು ವಧುವಿನ ತಂದೆ ಹೇಳಿದ್ದು, ವಧು ಕೂಡಾ ವರನನ್ನು ವಿವಾಹವಾಗುವುದಿಲ್ಲ ಎಂದು ಹೇಳಿಬಿಟ್ಟಿದ್ದಳು!

ಅದೇ ವಿವಾಹ ಸಮಾರಂಭದಲ್ಲಿ ವಧುವಿನ ತಂದೆ ಕೈಹಿಡಿದು ಡ್ಯಾನ್ಸ್ ಮಾಡಿದ್ದ ಸಹೋದರ ಸಂಬಂಧಿ ಹಾಗೂ ಆತನ ಕುಟುಂಬದವರ ಜೊತೆ ಮಾಡಿ ವಿವಾಹ ನಿಶ್ಚಯಿಸಿ, ಜನವರಿ 20ರಂದು ನಿಗದಿಪಡಿಸಿದ್ದ ದಿನಾಂಕದಂದೇ ಮಗಳ ವಿವಾಹ ನೆರವೇರಿಸಿರುವುದಾಗಿ ವರದಿ ವಿವರಿಸಿದೆ.

ವರದಿಯ ಪ್ರಕಾರ, ವಧುವಿನ ಕುಟುಂಬದವರು ತಮಗೆ ಬೆದರಿಕೆ ಹಾಕಿದ್ದು, ಏಳು ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಬೇಡಿಕೆ ಇಟ್ಟಿರುವುದಾಗಿ ವರ ಪೊಲೀಸರಿಗೆ ದೂರು ನೀಡಿದ್ದಾನೆ. ಈತನ ಮೇಲೂ ವಧುವಿಗೆ ಕಪಾಳಮೋಕ್ಷ ಮಾಡಿರುವ ಆರೋಪವೂ ಇದ್ದು, ಈ ಬಗ್ಗೆ ತನಿಖೆ ನಡೆಸುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿರುವುದಾಗಿ ವರದಿ ಹೇಳಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.