ಸಿರಿವಂತ ರೈತರಿಗೆ ತೆರಿಗೆ ಹೊರೆ? ಕೇಂದ್ರ ಸರಕಾರದಿಂದ ಚಿಂತನೆ
Team Udayavani, Apr 8, 2022, 11:27 PM IST
ಹೊಸದಿಲ್ಲಿ: ಎಲ್ಲವೂ ಅಂದುಕೊಂಡಂತಾದರೆ ಶೀಘ್ರದಲ್ಲೇ ದೇಶದಲ್ಲಿರುವ ಸಿರಿವಂತ ರೈತರ ಮೇಲೆ ತೆರಿಗೆ ಹೊರೆ ಬೀಳುವುದು ಖಚಿತ.
ಸದ್ಯ ಕೇಂದ್ರ ಸರಕಾರ ಈ ಬಗ್ಗೆ ಚಿಂತನೆ ನಡೆಸಿದ್ದು, ವಾರ್ಷಿಕವಾಗಿ 10 ಲಕ್ಷ ರೂ.ಗಳಿಗಿಂತ ಹೆಚ್ಚು ಗಳಿಸುತ್ತಿರುವ ರೈತರ ಮೇಲೆ ತೆರಿಗೆ ಹಾಕುವ ಬಗ್ಗೆ ಯೋಜನೆ ಹಾಕಿಕೊಳ್ಳಲಾಗಿದೆ. ಈ ವಿಚಾರ ಸಂಸತ್ನ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮುಂದೆ ಹೋಗಿದ್ದು, ಇದು ತೀರ್ಮಾನ ತೆಗೆದುಕೊಳ್ಳಬೇಕಾಗಿದೆ.
ಈವರೆಗೆ ದೇಶದ ಯಾವುದೇ ರೈತರಿಗೂ ತೆರಿಗೆ ವಿಧಿಸಲಾಗುತ್ತಿಲ್ಲ. ಅಂದರೆ ರೈತಾಪಿ ಉತ್ಪನ್ನದಿಂದ ಬರುವ ಆದಾಯಕ್ಕೆ ತೆರಿಗೆ ರಿಯಾಯಿತಿ ನೀಡಲಾಗಿದೆ. ಆದರೆ ವಾರ್ಷಿಕವಾಗಿ 10 ಲಕ್ಷ ರೂ.ಗಿಂತ ಹೆಚ್ಚು ಗಳಿಸುವವರಿಗೆ ಏಕೆ ತೆರಿಗೆ ವಿಧಿಸಬಾರದು ಎಂಬ ಚಿಂತನೆಯೂ ಈಗ ಶುರುವಾಗಿದೆ. ಆದರೆ ಆದಾಯ ತೆರಿಗೆ ಇಲಾಖೆಯಲ್ಲಿ ಇದಕ್ಕೆ ಬೇಕಾದ ಮಾನವ ಸಂಪನ್ಮೂಲವಿಲ್ಲ ಎಂಬ ಮಾತುಗಳೂ ಕೇಳಿಬರುತ್ತಿವೆ.
ಗುರುತಿಸುವುದು ಹೇಗೆ?: ವಿಚಿತ್ರವೆಂದರೆ ಈಗ ಕೇಂದ್ರ ಸರಕಾರ ಸಿರಿವಂತ ಶ್ರೀಮಂತರಿಗೆ ತೆರಿಗೆ ವಿಧಿಸಲು ಚಿಂತನೆ ನಡೆಸುತ್ತಿದೆ. ಆದರೆ, ಸಿರಿವಂತ ರೈತರನ್ನು ಗುರುತಿಸುವುದು ಹೇಗೆ ಎಂಬುದಕ್ಕೆ ಯಾವುದೇ ಮಾನದಂಡಗಳಿಲ್ಲ. ಕಳೆದ ವರ್ಷ ಸಂಸತ್ನಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಈ ಬಗ್ಗೆ ಮಾಹಿತಿ ನೀಡಿದ್ದರು. ರೈತರಲ್ಲಿ ಬಡವರು ಯಾರು, ಸಿರಿವಂತರು ಯಾರು ಎಂಬುದನ್ನು ಗುರುತಿಸುವುದು ಕಷ್ಟಕರ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…