ಕೆಎಸ್ಸಾರ್ಟಿಸಿ ಜತೆ ಸಹಕಾರ ಸಾರಿಗೆ ವಿಲೀನ?
ಇಲಾಖೆ, ತಜ್ಞರ ಚರ್ಚೆ; ಹೊರೆ 70 ಲ.ರೂ., ಲಾಭ ಹಲವು ಪಟ್ಟು
Team Udayavani, Feb 24, 2020, 6:30 AM IST
ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಸಂಚಾರ ಸ್ಥಗಿತಗೊಳಿಸಿರುವ ಮಲೆನಾಡಿನ ಸಹಕಾರ ಸಾರಿಗೆಯನ್ನು ಕೆಎಸ್ಸಾರ್ಟಿಸಿ ಜತೆಗೆ ವಿಲೀನಗೊಳಿಸಬಹುದು ಎಂಬ ಅಭಿಪ್ರಾಯ ಸಾರಿಗೆ ಅಧಿಕಾರಿಗಳು ಮತ್ತು ತಜ್ಞರ ವಲಯದಿಂದ ಕೇಳಿಬರುತ್ತಿದೆ. ಸರಕಾರ ಮನಸ್ಸು ಮಾಡಿದರೆ ಈ ಸಾಧ್ಯತೆ ಕಾರ್ಯರೂಪಕ್ಕೆ ಬರಬಹುದಾಗಿದೆ.
ಸಹಕಾರ ಸಾರಿಗೆ ಬಸ್ಗಳ ಮಾರ್ಗಗಳಲ್ಲಿ ಸರಕಾರಿ ಬಸ್ಗಳು ಸಂಚರಿಸುತ್ತಿಲ್ಲ. ಅದನ್ನು ಕೆಎಸ್ಸಾರ್ಟಿಸಿ ಸುಪರ್ದಿಗೆ ವಹಿಸುವುದರಿಂದ ಸಾರಿಗೆ ಸೇವೆ ಉತ್ತಮಗೊಳ್ಳುವುದರ ಜತೆಗೆ ನಿಗಮಕ್ಕೂ ಲಾಭದಾಯಕವಾಗಲಿದೆ. ಈ ಹಿನ್ನೆಲೆಯಲ್ಲಿ ಸರಕಾರ ಚಿಂತನೆ ನಡೆಸುವ ಆವಶ್ಯಕತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಚಿಕ್ಕಮಗಳೂರು, ಶೃಂಗೇರಿ, ಕೊಪ್ಪ, ತೀರ್ಥಹಳ್ಳಿ, ಸುತ್ತಲಿನ ಮಾರ್ಗಗಳಲ್ಲಿ ಸಹಕಾರ ಸಾರಿಗೆ ನೂರಾರು ಟ್ರಿಪ್ಗಳನ್ನು ನಡೆಸುತ್ತದೆ. ನಿತ್ಯ 6-7 ಲಕ್ಷ ರೂ. ಆದಾಯ ಬರುತ್ತದೆ. ವಿಲೀನ ಅಥವಾ ಸ್ವಾಧೀನದಿಂದ ಅದೆಲ್ಲವೂ ಕೆಎಸ್ಸಾರ್ಟಿಸಿಗೆ ವರ್ಗಾವಣೆ ಆಗುತ್ತದೆ. ಕೊಪ್ಪದಲ್ಲಿ ನಿಗಮಕ್ಕೆ 5 ಎಕರೆ ಜಾಗ ವಿದ್ದು, ಅದನ್ನೇ ಘಟಕವಾಗಿಸಬಹುದು ಎಂದು ನಿಗಮದ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.
ಆರ್ಥಿಕ ಮುಗ್ಗಟ್ಟಿನಿಂದ ಸಹಕಾರ ಸಾರಿಗೆಯ ಬಸ್ಗಳೆಲ್ಲವೂ ಆರು ತಿಂಗಳುಗಳಿಂದ ಮೂಲೆ ಗುಂಪಾಗಿವೆ. ಅವುಗಳನ್ನು ದುರಸ್ತಿಪಡಿಸಿ, ಕೆಎಸ್ಸಾರ್ಟಿಸಿಯಿಂದ ಮರು ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಬಹುದು.
ಇಲ್ಲವೇ ಹರಾಜು ಹಾಕಿ, ಅದೇ ಹಣದಲ್ಲಿ ಸಾಲ ಮತ್ತಿತರ ಹೊರೆಯನ್ನು ನೀಗಿಸಬಹುದು. ಅನಂತರ ಆ ಮಾರ್ಗಗಳಲ್ಲಿ ಸರಕಾರಿ ಬಸ್ಗಳನ್ನು ರಸ್ತೆಗಿಳಿಸಬಹುದು.
ಸಂಸ್ಥೆಯ ಸಿಬಂದಿಗೆ ಮುಂದಿನ ದಿನಗಳಲ್ಲಿ ನೇಮಕಾತಿ ವೇಳೆ ಆದ್ಯತೆ ನೀಡಬೇಕು ಎಂದು ಹೆಸರು ಹೇಳಲಿಚ್ಛಿಸದ ನಿಗಮದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಲೀನಕ್ಕೆ ಅಭ್ಯಂತರವಿಲ್ಲ. ಇದು ಸಹಕಾರ ತತ್ವದಡಿ ನಡೆದ ಸಂಸ್ಥೆ ಯಾಗಿದ್ದು, ಸರಕಾರ ಸುಪರ್ದಿಗೆ ಪಡೆದರೆ ಸೇವಾ ಮನೋ ಭಾವದಿಂದ ಕಾರ್ಯ ನಿರ್ವಹಿಸುತ್ತದೆ ಎಂದು ಸಹಕಾರ ಸಾರಿಗೆ ನಿರ್ದೇಶಕ ಸಿ. ವಿಜಯಕುಮಾರ್ ಹೇಳಿದ್ದಾರೆ.
ವಿಲೀನದಿಂದ ಲಾಭ ಏನು?
- ಪ್ರಯಾಣಿಕರಿಗೆ
ಚಿಕ್ಕಮಗಳೂರು, ಶೃಂಗೇರಿ, ಕೊಪ್ಪ , ತೀರ್ಥಹಳ್ಳಿ, ಬೀರೂರು ಮಾರ್ಗಗಳಲ್ಲಿ ನಿತ್ಯ ಸಂಚರಿಸುವ ಐದಾರು ಸಾವಿರ ಜನರಿಗೆ ಅನುಕೂಲ.
- ಕೆಎಸ್ಆರ್ಟಿಸಿಗೆ
ನಿತ್ಯ 6-7 ಲಕ್ಷ ರೂ. ಆದಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ