ಶಿಕ್ಷಕರ ವರ್ಗಾವಣೆಗೆ ಅಧ್ಯಾದೇಶ : ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Team Udayavani, Apr 27, 2021, 7:10 AM IST
ಬೆಂಗಳೂರು: ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಸಲೀಸಾಗಿ ನಡೆಸಲು ವರ್ಗಾವಣೆ ಕಾಯ್ದೆಗೆ ಅಧ್ಯಾದೇಶದ ಮೂಲಕ ತಿದ್ದುಪಡಿ ತರಲಾಗಿದೆ. ಸೋಮವಾರ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಶಿಕ್ಷಕರ ವರ್ಗಾವಣೆ ಸಂಬಂಧ ಹೊಸ ಕಾಯ್ದೆ ರೂಪಿಸಿ, ಉಭಯ ಸದನಗಳಲ್ಲಿ ಅಂಗೀಕರಿಸಿ, ನಿಯಮ ರಚಿಸಿ, ಪ್ರಕ್ರಿಯೆ ಆರಂಭಿಸಲಾಗಿತ್ತು. ಕಡ್ಡಾಯ ವರ್ಗಾವಣೆ ಮತ್ತು ಹೆಚ್ಚುವರಿ ವರ್ಗಾವಣೆ ಪಡೆದವರಿಗೆ ಆದ್ಯತೆ ನೀಡುವ ಸಂಬಂಧ ನಿಯಮದಲ್ಲಿ ಉಲ್ಲೇಖೀಸಲಾಗಿದ್ದರೂ ಕಾಯ್ದೆಯಲ್ಲಿ ಈ ಅಂಶ ಇರಲಿಲ್ಲ.
ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆ ಪಡೆದವರಿಗೆ ಮೊದಲ ಆದ್ಯತೆ ನೀಡಿದರೆ ಉಳಿದ ಶಿಕ್ಷಕರಿಗೆ ಅನ್ಯಾಯವಾಗಲಿದೆ ಎಂದು ಕೆಲವರು ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಮೆಟ್ಟಿಲೇರಿದ್ದರು. ಕೆಎಟಿಯು ಕಾಯ್ದೆಯಲ್ಲಿ ಇರುವಂತೆಯೇ ವರ್ಗಾವಣೆ ನಡೆಸುವಂತೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಶಿಕ್ಷಣ ಇಲಾಖೆ ಹೈಕೋರ್ಟ್ ಮೆಟ್ಟಿಲೇರಿತ್ತು. ಹೈಕೋರ್ಟ್ ಕೂಡ ಕೆಎಟಿ ಆದೇಶವನ್ನು ಮಾನ್ಯ ಮಾಡಿತ್ತು. ಇದರಿಂದ ವರ್ಗಾವಣೆ ನಡೆಸುವುದು ಕಷ್ಟ ಎಂದು ಶಿಕ್ಷಣ ಇಲಾಖೆ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆ ಪಡೆದವರಿಗೆ ಮೊದಲ ಆದ್ಯತೆ ನೀಡುವ ಅಂಶವನ್ನು ಕಾಯ್ದೆಯಲ್ಲೇ ಸೇರಿಸಿ ತಿದ್ದುಪಡಿ ರೂಪದಲ್ಲಿ ಅನುಷ್ಠಾನಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.
ಕಾಯ್ದೆಗೆ ತಿದ್ದುಪಡಿ ತಂದು, ಅಧ್ಯಾ ದೇಶವನ್ನು ರಾಜ್ಯಪಾಲರಿಗೆ ಕಳುಹಿಸ ಲಾಗುತ್ತದೆ. ರಾಜ್ಯಪಾಲರ ಅಂಕಿತದ ಬಳಿಕ ತಿದ್ದುಪಡಿ ಕಾಯ್ದೆ ಅನುಷ್ಠಾನಕ್ಕೆ ಬರಲಿದೆ. ಮುಂದಿನ 6 ತಿಂಗಳಲ್ಲಿ ಕಾಯ್ದೆಗೆ ಸದನದ ಅನುಮೋದನೆ ಪಡೆಯಬೇಕಿದೆ. ಇದರಿಂದಾಗಿ ಮುಂದಿನ ಒಂದೆರಡು ತಿಂಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸುವುದು ಸಾಧ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು