Team India: ಕ್ರಿಕೆಟ್‌ ಆಯ್ಕೆ ಸಮಿತಿಯೊಂದಿಗೆ ಗಂಭೀರ್‌, ಜಯ್‌ ಶಾ ಚರ್ಚೆ

ಅನೌಪಚಾರಿಕ ಸಭೆಗೆ ಹೊಸದಿಲ್ಲಿ ನಿವಾಸದಿಂದಲೇ ಭಾಗವಹಿಸಿದ ನೂತನ ಕೋಚ್‌ ಗೌತಮ್‌

Team Udayavani, Jul 18, 2024, 7:35 AM IST

Gambir

ಹೊಸದಿಲ್ಲಿ: ಟೀಮ್‌ ಇಂಡಿಯಾದ ನೂತನ ಕೋಚ್‌ ಗೌತಮ್‌ ಗಂಭೀರ್‌ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ರಾಷ್ಟ್ರೀಯ ಆಯ್ಕೆ ಸಮಿತಿ ಜತೆ ಚರ್ಚೆ ನಡೆಸಿದ್ದಾರೆ. ಆನ್‌ಲೈನ್‌ನಲ್ಲಿ ಸುಮಾರು ಒಂದು ಗಂಟೆ ಕಾಲ ಇವರ ನಡುವೆ ಮಾತುಕತೆ ನಡೆದಿತ್ತು ಎಂಬುದಾಗಿ ಕ್ರಿಕೆಟ್‌ ವೆಬ್‌ಸೈಟ್‌ ಒಂದು ವರದಿ ಮಾಡಿದೆ.

ಅಜಿತ್‌ ಅಗರ್ಕರ್‌ ನೇತೃತ್ವದ ಆಯ್ಕೆ ಸಮಿತಿ ಸದಸ್ಯರೆಲ್ಲ ಇದರಲ್ಲಿ ಪಾಲ್ಗೊಂಡಿದ್ದರು. ಗಂಭೀರ್‌ ತಮ್ಮ ಹೊಸದಿಲ್ಲಿ ನಿವಾಸದಿಂದಲೇ ಈ ಅನೌಪಚಾರಿಕ ಸಭೆಯಲ್ಲಿ ಭಾಗವಹಿಸಿದರು. ಭವಿಷ್ಯದ ಟೀಮ್‌ ಇಂಡಿಯಾ, ತನ್ನ ಅಪೇಕ್ಷೆಯ ತಂಡ ಹಾಗೂ ನಾಯಕತ್ವದ ಕುರಿತು ಮಾತುಕತೆ ನಡೆಯಿತು. ಆಯ್ಕೆ ವಿಷಯದಲ್ಲಿ ತಾನು ಕೈಯಾಡಿಸುವುದಿಲ್ಲ, ಆದರೆ ತನ್ನ ಬಯಕೆಯ ತಂಡ ಹೇಗಿರಬೇಕು ಎಂಬ ಕುರಿತು ಗಂಭೀರ್‌ ಹೇಳಿಕೊಂಡರು ಎಂದು ವರದಿಯಾಗಿದೆ. ಮೂರೂ ಮಾದರಿಗಳಲ್ಲಿ ಆಡಬಲ್ಲ ಕ್ರಿಕೆಟಿಗರನ್ನು ತಾನು ಬಯಸುವುದಾಗಿ ಕೋಚ್‌ ಆದ ಬಳಿಕ ಗಂಭೀರ್‌ ಹೇಳಿದ್ದನ್ನು ನೆನಪಿಸಿಕೊಳ್ಳಬಹುದು.

ನಾಯಕರಾರು ಲಂಕಾ ಸರಣಿಗೆ?
ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದ ನಾಯಕತ್ವದ ಕುರಿತು ಏನೇನು ಮಾತುಕತೆ ನಡೆಯಿತು ಎಂದು ತಿಳಿದು ಬಂದಿಲ್ಲ. ಟಿ20 ಹಾಗೂ ಏಕದಿನ ತಂಡಗಳು ಶೀಘ್ರದಲ್ಲೇ ಪ್ರಕಟಗೊಳ್ಳಲಿವೆ. ಟಿ20 ಸರಣಿಗೆ ಹಾರ್ದಿಕ್‌ ಪಾಂಡ್ಯ ಅಥವಾ ಸೂರ್ಯಕುಮಾರ್‌ ಯಾದವ್‌, ಏಕದಿನ ಸರಣಿಗೆ ರೋಹಿತ್‌ ಶರ್ಮ ನಾಯಕರಾಗುವ ಸಾಧ್ಯತೆ ಇದೆ.

ಏಕದಿನ ಆಡಲಿರುವ ರೋಹಿತ್‌
ರೋಹಿತ್‌ ಶರ್ಮ ಶ್ರೀಲಂಕಾ ಪ್ರವಾಸದ ಏಕದಿನ ಸರಣಿಯಲ್ಲಿ ಆಡು ವು ದಾಗಿ ಹೇಳಿರುವ ಬಗ್ಗೆ ಈ ಸಭೆ  ಯಲ್ಲಿ ಸುಳಿವು ಲಭಿಸಿದೆ. ಐಸಿಸಿ ಚಾಂಪಿ ಯನ್ಸ್‌ ಟ್ರೋಫಿ ಪಂದ್ಯಾ ವಳಿಗೂ ಮುನ್ನ ಹೆಚ್ಚಿನ ಏಕದಿನ ಪಂದ್ಯ ಗಳಿಲ್ಲದ ಕಾರಣ ರೋಹಿತ್‌ ಈ ಸರಣಿ ಯಲ್ಲಿ ಆಡುವುದು ಬಹುತೇಕ ಖಚಿತ.

ಅಯ್ಯರ್‌ ಪುನರಾಗಮನ?
ವಿರಾಟ್‌ ಕೊಹ್ಲಿ ಮತ್ತು ಜಸ್‌ಪ್ರೀತ್‌ ಬುಮ್ರಾ ಅವರಿಗೆ ವಿಶ್ರಾಂತಿ ಲಭಿಸುವ ಕಾರಣ ಶ್ರೇಯಸ್‌ ಅಯ್ಯರ್‌ ಏಕದಿನ ತಂಡವನ್ನು ಪ್ರವೇಶಿಸುವ ಸಾಧ್ಯತೆ ಇದೆ. ಹಾಗೆಯೇ ಕೆ.ಎಲ್‌. ರಾಹುಲ್‌ ಕೂಡ.

ಅಭ್ಯಾಸ ಆರಂಭಿಸಿದ ಶಮಿ
ಹೊಸದಿಲ್ಲಿ: ಮೊಹಮ್ಮದ್‌ ಶಮಿ ಬೌಲಿಂಗ್‌ ಅಭ್ಯಾಸ ಆರಂಭಿಸಿದ್ದಾರೆ. ತಮ್ಮ ಬೌಲಿಂಗ್‌ ವೀಡಿಯೋವನ್ನು ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ಕಳೆದ ಏಕದಿನ ವಿಶ್ವಕಪ್‌ ವೇಳೆ ಹಿಮ್ಮಡಿ ಗಾಯಕ್ಕೀಡಾಗಿದ್ದ ಶಮಿ, 9 ತಿಂಗಳಿನಿಂದ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಟಿ20 ವಿಶ್ವಕಪ್‌ನಲ್ಲೂ ಅವರಿಗೆ ಆಡಲಾಗಿರಲಿಲ್ಲ. ಶಸ್ತ್ರಚಿಕಿತ್ಸೆ ಮಾಡಿಕೊಂಡ ಬಳಿಕ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯಲ್ಲಿ ಪುನಶ್ಚೇತನ ಪ್ರಕ್ರಿಯೆಯಲ್ಲಿ ತೊಡಗಿದ್ದರು.

Ad

ಟಾಪ್ ನ್ಯೂಸ್

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಆನಂದಪುರ; ಕಾರು-ಬಸ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

ಆನಂದಪುರ; ಕಾರು-ಬಸ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂ*ದು ಆತ್ಮಹ*ತ್ಯೆಗೆ ಶರಣಾದ ಕೇರಳದ ಮಹಿಳೆ

9-moodbidri

ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ:ಇಬ್ಬರು ಉಪನ್ಯಾಸಕರು, ಗೆಳೆಯ ಸೇರಿ ಮೂವರು ಆರೋಪಿಗಳ ಬಂಧನ

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

Devanahalli: ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

ʼಕೂಲಿʼ ಟ್ರೇಲರ್‌ ರಿಲೀಸ್, ಆಮಿರ್‌ ಖಾನ್‌ ಜತೆಗಿನ ಸಿನಿಮಾದ ಬಗ್ಗೆ ಅಪ್ಡೇಟ್‌ ಕೊಟ್ಟ ಲೋಕೇಶ್

ʼಕೂಲಿʼ ಟ್ರೇಲರ್‌ ರಿಲೀಸ್, ಆಮಿರ್‌ ಖಾನ್‌ ಜತೆಗಿನ ಸಿನಿಮಾದ ಬಗ್ಗೆ ಅಪ್ಡೇಟ್‌ ಕೊಟ್ಟ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spinner Shoaib Bashir has been ruled out of the Test series against India

INDvsENG: ಭಾರತ ವಿರುದ್ದದ ಟೆಸ್ಟ್‌ ಸರಣಿಯಿಂದ ಹೊರಬಿದ್ದ ಸ್ಪಿನ್ನರ್‌ ಶೋಯೆಬ್‌ ಬಶೀರ್‌

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

Karnataka: 173 ಕಿ.ಮೀ. ಓಡಿ ಜಪಾನ್‌ ರೇಸ್‌ ಗೆದ್ದ ಕನ್ನಡತಿ ಅಶ್ವಿ‌ನಿ ಗಣಪತಿ!

Karnataka: 173 ಕಿ.ಮೀ. ಓಡಿ ಜಪಾನ್‌ ರೇಸ್‌ ಗೆದ್ದ ಕನ್ನಡತಿ ಅಶ್ವಿ‌ನಿ ಗಣಪತಿ!

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Brahmavar ಬೈಕ್‌ ಅಪಘಾತ: ಮೂವರಿಗೆ ಗಾಯ

Brahmavar ಬೈಕ್‌ ಅಪಘಾತ: ಮೂವರಿಗೆ ಗಾಯ

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

11-sagara

Sagara: ಲಿಂಗನಮಕ್ಕಿ ಜಲಾಶಯ; ಪ್ರವಾಹದ ಮೊದಲ ಮುನ್ಸೂಚನೆ

supreme-Court

ಜಯತೀರ್ಥರ ಆರಾಧನೆ: ಮಂತ್ರಾಲಯ ರಾಯರ ಮಠದ ಅರ್ಜಿ ವಜಾ

ಆನಂದಪುರ; ಕಾರು-ಬಸ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

ಆನಂದಪುರ; ಕಾರು-ಬಸ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.