ವಿಶ್ವಕಪ್ ಕದನ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
Team Udayavani, Jun 27, 2019, 2:38 PM IST
ಮ್ಯಾಂಚೆಸ್ಟರ್: ವಿಶ್ವಕಪ್ ಕೂಟದ 34ನೇ ಪಂದ್ಯಕ್ಕೆ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಮೈದಾನ ಸಜ್ಜಾಗಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಈ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದೆ.
ಭಾರತ ತಂಡ ಈ ಪಂದ್ಯಕ್ಕೆ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಕಳೆದ ಪಂದ್ಯಕ್ಕೆ ಆಡಿದ ತಂಡವನ್ನೇ ಇಲ್ಲಿ ಕಣಕ್ಕಿಳಿಸಲಾಗಿದೆ. ಆದರೆ ವಿಂಡೀಸ್ ಎರಡು ಬದಲಾವಣೆ ಮಾಡಿದೆ. ಇವಿನ್ ಲೂಯಿಸ್ ಬದಲು ಸುನೀಲ್ ಆಂಬ್ರಿಸ್ ಸ್ಥಾನ ಪಡೆದರೆ, ಆಶ್ಲೆ ನರ್ಸ್ ಬದಲು ಫ್ಯಾಭಿನ್ ಅಲೆನ್ ತಂಡ ಸೇರಿದ್ದಾರೆ.
ಭಾರತ ಈ ಪಂದ್ಯ ಗೆದ್ದರೆ ತನ್ನ ಸೆಮಿ ಹಾದಿಯನ್ನು ಇನ್ನಷ್ಟು ಸುಲಭಗೊಳಿಸಲಿದೆ. ಆದರೆ ವೆಸ್ಟ್ ಇಂಡೀಸ್ ಈ ಪಂದ್ಯ ಸೋತರೆ ಸೆಮಿ ರೇಸ್ ನಿಂದಲೇ ಹೊರ ಬೀಳಲಿದೆ.
ಈ ವಿಶ್ವಕಪ್ ಕೂಟದಲ್ಲಿ ಈ ಮೈದಾನದಲ್ಲಿ ಇದುವರೆಗೆ ಮೂರು ಪಂದ್ಯಗಳು ನಡೆದಿದ್ದು, ಮೂರು ಹೈ ಸ್ಕೋರಿಂಗ್ ಪಂದ್ಯಗಳಾಗಿವೆ. ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು 336, 397 ಮತ್ತು 291 ರನ್ ಗಳಿಸಿವೆ. ವಿಶೇಷವೇನೆಂದರೆ ಈ ಮೂರು ಪಂದ್ಯಗಳನ್ನು ಮೊದಲು ಬ್ಯಾಟಿಂಗ್ ಮಾಡಿದ ತಂಡವೇ ಜಯಿಸಿವೆ.
ತಂಡಗಳು
ಭಾರತ: ಲೋಕೇಶ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (ನಾ), ವಿಜಯ್ ಶಂಕರ್, ಮಹೇಂದ್ರ ಸಿಂಗ್ ಧೋನಿ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ.
ವೆಸ್ಟ್ ಇಂಡೀಸ್: ಕ್ರಿಸ್ ಗೇಲ್, ಸುನೀಲ್ ಆಂಬ್ರಿಸ್, ಶಾಯ್ ಹೋಪ್, ನಿಕೋಲಸ್ ಪೂರನ್, ಶಿಮ್ರನ್ ಹೆತ್ಮೈರ್, ಜೇಸನ್ ಹೋಲ್ಡರ್ (ನಾ), ಕಾರ್ಲೊಸ್ ಬ್ರಾಥ್ ವೇಟ್, ಫ್ಯಾಭಿನ್ ಆಲೇನ್, ಕೆಮರ್ ರೋಚ್, ಶೆಲ್ಡನ್ ಕಾಟ್ರೆಲ್, ಒಶಾನೆ ಥೋಮಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು