ಜುಲೈ 25 ರಿಂದ ಧಾರ್ಮಿಕ ಸ್ಥಳಗಳು ಭಕ್ತರಿಗೆ ಮುಕ್ತ : ಎಲ್ಲ ಬಗೆಯ ಸೇವೆಗಳಿಗೆ ಅವಕಾಶ
Team Udayavani, Jul 24, 2021, 10:45 PM IST
ಬೆಂಗಳೂರು : ಕೊರೊನಾ ಎರಡನೇ ಅಲೆ ಪರಿಣಾಮ ಎರಡು ತಿಂಗಳುಗಳಿಂದ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದ್ದ ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಸಹಿತ ಎಲ್ಲ ಧಾರ್ಮಿಕ ಸ್ಥಳಗಳು ರವಿವಾರದಿಂದ ಭಕ್ತರಿಗೆ ಮುಕ್ತವಾಗಲಿವೆ.
ಈ ಸಂಬಂಧ ಶನಿವಾರ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಪತ್ತು ನಿರ್ವಹಣ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆಗಿರುವ ಎನ್. ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ಸಿಮೀತಗೊಳಿಸಿ ಜು. 3ರಂದು ಹೊರಡಿಸಲಾಗಿದ್ದ ಆದೇಶವನ್ನು ಮಾರ್ಪಡಿಸಿ ಹೊಸದಾಗಿ ಹೊರಡಿಸಲಾಗಿದೆ.
ರಾಜ್ಯಾದ್ಯಂತ ಮಂದಿರ, ಮಸೀದಿ, ಚರ್ಚ್, ಗುರುದ್ವಾರಗಳ ಸಹಿತ ಎಲ್ಲ ಬಗೆಯ ಧಾರ್ಮಿಕ ಸ್ಥಳಗಳಲ್ಲಿ ಸಂಬಂಧಿಸಿದ ಧಾರ್ಮಿಕ ಚಟುವಟಿಕೆಗಳು, ಪೂಜೆ, ಅರ್ಚನೆ, ಸೇವೆ ಮತ್ತು ಪ್ರಾರ್ಥನೆಗಳಿಗೆ ರವಿವಾರ (ಜು. 25)ದಿಂದ ತೆರೆಯಲು ಅನುಮತಿ ನೀಡಲಾಗಿದೆ. ಈ ವೇಳೆ ಸಂಬಂಧಪಟ್ಟ ಇಲಾಖೆಗಳು ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆದರೆ ಜಾತ್ರೆ, ದೇವಸ್ಥಾನ ಉತ್ಸವ, ಮೆರವಣಿಗೆ, ಸಭೆ-ಸಮಾರಂಭಗಳಿಗೆ ಅನುಮತಿ ಇರುವುದಿಲ್ಲ ಎಂದು ಕಂದಾಯ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ :ಪಾಕ್ ಜೊತೆ ವಿಲೀನವಾಗಲು ಕಾಶ್ಮೀರಿಗರಿಗೆ ಅವಕಾಶ : ಇಮ್ರಾನ್ ಖಾನ್ ವಿವಾದಾತ್ಮಕ ಹೇಳಿಕೆ
ಮನೋರಂಜನ ಪಾರ್ಕ್ಗಳಿಗೆ ಅನುಮತಿ
ರಾಜ್ಯಾದ್ಯಂತ ಮನೋರಂಜನ ಪಾರ್ಕ್ ಮತ್ತು ಇದೇ ರೀತಿಯ ಸ್ಥಳಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಇದಕ್ಕೆ ಆರೋಗ್ಯ ಇಲಾಖೆಯು 2020ರ ನ. 12ರಂದು ಹೊರಡಿಸಿದ್ದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಷರತ್ತು ವಿಧಿಸಲಾಗಿದೆ. ಆದರೆ ಜಲಕ್ರೀಡೆ ಸಹಿತ ಈ ಸಂಬಂಧದ ಎಲ್ಲ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ