ಟೆಸ್ಟ್‌ ರ್‍ಯಾಂಕಿಂಗ್‌: ಅಗ್ರಸ್ಥಾನ ಕಳೆದುಕೊಂಡ ಭಾರತ

2016-17ರ ಬಳಿಕ ಮೊದಲ ಸಲ ನಂ.1 ಸ್ಥಾನ ನಷ್ಟ ; ಆಸ್ಟ್ರೇಲಿಯ ನಂ.1; ಭಾರತ ನಂ.3

Team Udayavani, May 2, 2020, 6:00 AM IST

ಟೆಸ್ಟ್‌ ರ್‍ಯಾಂಕಿಂಗ್‌: ಅಗ್ರಸ್ಥಾನ ಕಳೆದುಕೊಂಡ ಭಾರತ

ದುಬಾೖ: ಭಾರತ 2016-17ರ ಬಳಿಕ ಮೊದಲ ಸಲ ಟೆಸ್ಟ್‌ ರ್‍ಯಾಂಕಿಂಗ್‌ನ ಅಗ್ರಸ್ಥಾನವನ್ನು ಕಳೆದುಕೊಂಡಿದೆ. ಶುಕ್ರ ವಾರ ಪರಿಷ್ಕರಿಸಲಾದ ರ್‍ಯಾಂಕಿಂಗ್‌ನಲ್ಲಿ ಟೀಮ್‌ ಇಂಡಿಯಾ 3ನೇ ಸ್ಥಾನಕ್ಕೆ ಕುಸಿದಿದೆ. ಆಸ್ಟ್ರೇಲಿಯ ಮರಳಿ ಅಗ್ರಸ್ಥಾನ ಅಲಂಕರಿಸಿದೆ.

2016ರ ಅಕ್ಟೋಬರ್‌ನಲ್ಲಿ ಅಗ್ರಮಾನ್ಯ ಟೆಸ್ಟ್‌ ತಂಡವೆನಿಸಿಕೊಂಡ ಭಾರತ, ಅನಂತರ ತಾನೇ ಈ ಸ್ಥಾನದಲ್ಲಿ ವಿರಾಜಮಾನವಾಗುತ್ತ ಬಂದಿತ್ತು. ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಪಟ್ಟವನ್ನು ತನ್ನಲ್ಲೇ ಉಳಿಸಿಕೊಂಡಿತ್ತು. ಭಾರತ 2016-17ರಲ್ಲಿ ದಾಖಲೆ 12 ಟೆಸ್ಟ್‌ ಪಂದ್ಯಗಳ ಗೆಲುವು ಹಾಗೂ ಏಕೈಕ ಸೋಲನುಭವಿಸಿತ್ತು.

2016-17ರ ಅವಧಿಯಲ್ಲಿ ಭಾರತ ತಂಡ ಆಡಿದ ಎಲ್ಲ 5 ಟೆಸ್ಟ್‌ ಸರಣಿಗಳನ್ನು ಗೆದ್ದಿತ್ತು. ಆಸ್ಟ್ರೇಲಿಯ, ಇಂಗ್ಲೆಂಡ್‌ ತಂಡಗಳನ್ನು ಭಾರತ ಮಣಿಸಿತ್ತು.

ನೂತನ ಮಾನದಂಡ
ಪರಿಷ್ಕೃತ ರ್‍ಯಾಂಕಿಂಗ್‌ ಯಾದಿಗೆ ನೂತನ ಮಾನದಂಡವನ್ನು ಅನುಸರಿಸಲಾಗಿದೆ. 2019ರ ಮೇ ಬಳಿಕ ಆಡಲಾದ ಟೆಸ್ಟ್‌ ಪಂದ್ಯಗಳಿಗೆ ಶೇ. 100ರಷ್ಟು ಹಾಗೂ ಇದಕ್ಕೂ ಹಿಂದಿನ 2 ವರ್ಷಗಳ ಟೆಸ್ಟ್‌ ಪಂದ್ಯಗಳಿಗೆ ಶೇ. 50ರಷ್ಟು ಅಂಕವನ್ನಷ್ಟೇ ನೀಡಲಾಗಿದೆ. ಇದು ಭಾರತಕ್ಕೆ ಹಿನ್ನಡೆಯಾಗಿ ಪರಿಣಮಿಸಿತು. ಆಸ್ಟ್ರೇಲಿಯ ಅಗ್ರಸ್ಥಾನಕ್ಕೆ ನೆಗೆಯಿತು. ಕಾಂಗರೂ ಪಡೆಯೀಗ 116 ಅಂಕಗಳನ್ನು ಹೊಂದಿದೆ. ದ್ವಿತೀಯ ಸ್ಥಾನಿಯಾಗಿರುವ ನ್ಯೂಜಿಲ್ಯಾಂಡ್‌ ಬಳಿ 115 ಅಂಕವಿದೆ. ಭಾರತದ ಖಾತೆಯಲ್ಲಿ 114 ಅಂಕಗಳಿವೆ. 2016ರ ಜನವರಿ ಬಳಿಕ ಅಗ್ರ 3 ಸ್ಥಾನ ಪಡೆದ ತಂಡಗಳ ನಡುವೆ ಕೇವಲ ಒಂದು ಅಂಕದ ಅಂತರದ ನಿಕಟ ಪೈಪೋಟಿ ಕಂಡುಬಂದದ್ದು ಇದೇ ಮೊದಲು.

ಇಂಗ್ಲೆಂಡ್‌ 4ನೇ (105), ಶ್ರೀಲಂಕಾ 5ನೇ ಸ್ಥಾನಿಯಾಗಿವೆ (94). ದಕ್ಷಿಣ ಆಫ್ರಿಕಾಕ್ಕೆ 8 ಅಂಕಗಳ ಭಾರೀ ನಷ್ಟ ಸಂಭವಿಸಿದ್ದು, ಅದು 6ನೇ ಸ್ಥಾನದಲ್ಲಿದೆ (90). ಅನಂತರದ ಸ್ಥಾನದಲ್ಲಿರುವ ತಂಡಗಳೆಂದರೆ ಪಾಕಿಸ್ಥಾನ (86), ವೆಸ್ಟ್‌ ಇಂಡೀಸ್‌ (79).

ಟಿ20ಯಲ್ಲೂ ನಂ.1
ಆಸ್ಟ್ರೇಲಿಯಕ್ಕೆ ಇನ್ನೊಂದು ಹೆಗ್ಗಳಿಕೆಯೂ ಲಭಿಸಿದೆ. ಅದು ಮೊದಲ ಸಲ ಟಿ20 ರ್‍ಯಾಂಕಿಂಗ್‌ನಲ್ಲೂ ಅಗ್ರಸ್ಥಾನ ಅಲಂಕರಿಸಿದೆ (278). ಇಂಗ್ಲೆಂಡ್‌ (268) ಮತ್ತು ಭಾರತ (266) ಅನಂತರದ ಸ್ಥಾನದಲ್ಲಿವೆ. ನಂಬರ್‌ ವನ್‌ ಸ್ಥಾನಿಯಾಗಿದ್ದ ಪಾಕಿಸ್ಥಾನವೀಗ 4ಕ್ಕೆ ಇಳಿದಿದೆ (260).
ಏಕದಿನ ರ್‍ಯಾಂಕಿಂಗ್‌ನಲ್ಲಿ ವಿಶ್ವ ಚಾಂಪಿಯನ್‌ ಇಂಗ್ಲೆಂಡ್‌ ನಂ.1 ಆಗಿದ್ದು, ಅದು ತನ್ನ ಅಂಕವನ್ನು 127ಕ್ಕೆ ಏರಿಸಿಕೊಂಡಿದೆ. ಭಾರತ ದ್ವಿತೀಯ (119) ಮತ್ತು ರನ್ನರ್ ಅಪ್‌ ನ್ಯೂಜಿಲ್ಯಾಂಡ್‌ (116) 3ನೇ ಸ್ಥಾನದಲ್ಲಿವೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.