ಸರಕಾರ ಉಳಿಯಬೇಕಿದ್ದರೆ ಮೈತ್ರಿ ಅಭ್ಯರ್ಥಿ ಗೆಲ್ಲಬೇಕು
Team Udayavani, Apr 15, 2019, 6:30 AM IST
ಮೈಸೂರು: ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸರಕಾರ ಉಳಿಯಬೇಕಾದರೆ ಮೈತ್ರಿಕೂಟದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಬೇಕು -ಇದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಿತ್ರಪಕ್ಷಗಳ ಕಾರ್ಯಕರ್ತರಿಗೆ ನೀಡಿದ ಗುರಿ.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಸಚಿವ ಜಿ.ಟಿ. ದೇವೇಗೌಡ ಜತೆಗಿನ ಮುನಿಸು ಮರೆತು ಜಂಟಿ ಪ್ರಚಾರ ನಡೆಸಿದ ಸಿದ್ದರಾಮಯ್ಯ ಈ “ಗುರಿ’ ನೀಡಿದರು. ಈ ಮಾತು ಕಾಂಗ್ರೆಸ್ ಅಭ್ಯರ್ಥಿ ವಿಜಯಶಂಕರ್ ಅವರನ್ನು ಗೆಲ್ಲಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ರೂಪದಲ್ಲಿದ್ದ ಜತೆಗೆ, ಭಿನ್ನಾಭಿಪ್ರಾಯ ಮರೆತು ಸಹಕರಿಸಿ ಎಂದು ಜೆಡಿಸ್ ಕಾರ್ಯಕರ್ತರಿಗೆ ನೀಡಿದ “ಎಚ್ಚರಿಕೆ’ಯ ದನಿಯೂ ಆಗಿತ್ತು.
“ಕಾಂಗ್ರೆಸ್ ಮತ್ತು ಜೆಡಿಎಸ್ ಒಗ್ಗಟ್ಟಿನಿಂದ ದುಡಿಯಬೇಕು. ಬಿಜೆಪಿ ಕರ್ನಾಟಕ ದಲ್ಲಿ ಅಧಿಕಾರಕ್ಕೇರಬಾರದು ಎಂದು ರಚಿಸಲಾಗಿರುವ ಮೈತ್ರಿಕೂಟ ಐದು ವರ್ಷ ಪೂರ್ತಿಗೊಳಿಸಬೇಕಾದರೆ, ಹೆಚ್ಚಿನ ಸಂಖ್ಯೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳು ಗೆಲ್ಲಬೇಕು. ಮೈತ್ರಿ ಕೂಟದ ಅಭ್ಯರ್ಥಿಗಳು ಸೋತರೆ ಸರಕಾರ ಇರಲು ಹೇಗೆ ಸಾಧ್ಯ ಎಂದು ಹೇಳಿದರು. ಟಿ.ಟಿ. ದೇವೇಗೌಡ ಕೂಡ ಇದನ್ನು ಬೆಂಬಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ