ಪ್ರಕೃತಿ ಸೌಂದರ್ಯದ “ಈ ಮೇರುತಿ ಪರ್ವತ” ಚಾರಣಿಗರ ಸ್ವರ್ಗ

ಮೇತಿಕಾನ್ ಟೀ ಎಸ್ಟೇಟಿನಿಂದ ಅನುಮತಿಯನ್ನು ಪಡೆದು ಚಾರಣ ಪ್ರಾರಂಭಿಸಬೇಕು.

ಸುಧೀರ್, Nov 28, 2020, 6:25 PM IST

ಪ್ರಕೃತಿ ಸೌಂದರ್ಯದ “ಈ ಮೇರುತಿ ಪರ್ವತ” ಚಾರಣಿಗರ ಸ್ವರ್ಗ

ಪ್ರವಾಸಿಗರ ಸ್ವರ್ಗ ಎಂದೇ ಕರೆಯಬಹುದಾದ ಚಿಕ್ಕಮಗಳೂರು ಹಲವಾರು ಪ್ರವಾಸಿ ತಾಣಗಳನ್ನು ಹೊಂದಿರುವ ಜಿಲ್ಲೆ ಎಂದೇ ಹೆಸರುವಾಸಿಯಾಗಿದೆ. ಚಿಕ್ಕಮಗಳೂರು ಎಂದಾಕ್ಷಣ ನಮ್ಮ ಮನಸಿನಲ್ಲಿ ಬರುವಂತಹ ಪ್ರಮುಖ ಹೆಸರು ಕೆಮ್ಮಣ್ಣು ಗುಂಡಿ, ಬಾಬಾ ಬುಡನಗಿರಿ, ಮುಳ್ಳಯ್ಯನಗಿರಿಬೆಟ್ಟ, ಇವಿಷ್ಟು ತಾಣಗಳನ್ನು ಹೆಚ್ಚಿನ ಪ್ರವಾಸಿಗರು ಸಂದರ್ಶಿಸುವ ಸ್ಥಳಗಳು. ಆದರೆ ಈ ಜಿಲ್ಲೆಯಲ್ಲಿ ಇದೆ ರೀತಿಯ ಹತ್ತು ಹಲವು ಪ್ರವಾಸಿ ತಾಣಗಳು ತಮ್ಮ ಪ್ರಾಕೃತಿಕ ಸೌಂದರ್ಯದಿಂದ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸುತ್ತಿದೆ. ಅಂತಹ ಪ್ರಮುಖತಾಣಗಳ ಸಣ್ಣ ಪರಿಚಯವನ್ನು ನಾವು ಪರಿಚಯಿಸುತ್ತಿದ್ದೇವೆ. ಅಂದ ಹಾಗೆ ಇಂದು ನಾನು ಹೇಳಲು ಹೊರಟಿರುವ ಸುಂದರತಾಣದ ಹೆಸರು ಮುಳ್ಳಯ್ಯನ ಗಿರಿಬೆಟ್ಟದಷ್ಟೇ ಸೌಂದರ್ಯವನ್ನು ಮೈಗೆತ್ತಿಕೊಂಡಿರುವ ಇದೆ ಜಿಲ್ಲೆಯಲ್ಲಿ ಆಕಾಶದೆತ್ತರಕ್ಕೆ ತಲೆಯೆತ್ತಿ ನಿಂತಿರುವ ಗಿರಿಶಿಖರ ಮೇರುತಿ ಪರ್ವತ.

ಚಾರಣಿಗರ ಸ್ವರ್ಗ:

ಮೇರುತಿ ಪರ್ವತ ಸಮುದ್ರ ಮಟ್ಟದಿಂದ ಸುಮಾರು 5451 ಅಡಿಗಳಷ್ಟು ಎತ್ತರದಲ್ಲಿದೆ ಈ ಗಿರಿಶಿಖರವು ಶೃಂಗೇರಿ ಕಳಸ, ಹೊರನಾಡು ಪವಿತ್ರ ಯಾತ್ರಾ ಸ್ಥಳದ ಕೇಂದ್ರ ಭಾಗವಾದಲ್ಲಿ ಮೈದಳೆದು ನಿಂತಿದೆ.

ಬೆಟ್ಟದ ಮೇಲೆ ಹತ್ತಿ ನೋಡಿದರೆ ಸುತ್ತಲೂ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಕಾಫಿ, ಅಡಿಕೆ ತೋಟಗಳು, ಅಂದ ಹಾಗೆ ಮಾಗಿಯ ಕಾಲದಲ್ಲಿ ಈ ಬೆಟ್ಟಕ್ಕೆ ಹತ್ತಿದರೆ ನಮ್ಮ ಜೊತೆಗಿರುವವರು ಮುಸುಕು ಮಂಜಿನಲ್ಲಿ ಅವಿತು ಕುಳಿತಂತೆ ಭಾಸವಾಗುತ್ತದೆ ಒಮ್ಮಿಂದೊಮ್ಮೆಗೆ ನಾವು ಕಾಶ್ಮೀರದಲ್ಲಿದ್ದೇವೇನೋ ಎನ್ನುವ ಅನುಮಾನನೂ ಹುಟ್ಟುತ್ತದೆ. ಇಲ್ಲಿನ ಮತ್ತೊಂದು ವಿಶೇಷತೆ ಏನೆಂದರೆ ತಪಾಸಣೆ ಇಲ್ಲಿ ಬದರಿಮುನಿಗಳು ತಪಸ್ಸು ಮಾಡಿದ್ದಾರೆಂಬ ಕುರುಹುಗಳಿವೆ ಜೊತೆಗೆ ಇಲ್ಲಿ ಬಂಡೆಕಲ್ಲುಗಳನ್ನು ಕೊರೆದು ಬರುವಂತಹ ತೀರ್ಥ ಈ ಪ್ರದೇಶದ ಜನರ ಜೀವನಾಡಿಯಾಗಿದೆ.

ಮೇರುತಿ ಪರ್ವತಕ್ಕೆ ಭೇಟಿ ನೀಡುವವರು ಬಸರಿಕಟ್ಟೆಯಲ್ಲಿರುವ ಮೇತಿಕಾನ್ ಟೀ ಎಸ್ಟೇಟಿನಿಂದ ಅನುಮತಿಯನ್ನು ಪಡೆದು ಚಾರಣ ಪ್ರಾರಂಭಿಸಬೇಕು. ಸುತ್ತಲೂ ಹಚ್ಚಹಸುರಿನ ಸ್ವಚ್ಛಂದ ಕಾಫಿ ತೋಟದ ನಡುವೆ ಹೆಜ್ಜೆ ಹಾಕುತ್ತಾ ಸಾಗಿದರೆ ನಿಮ್ಮ ಉತ್ಸಾಹ ಇಮ್ಮಡಿಗೊಳ್ಳುವುದಂತೂ ಸತ್ಯ. ಮುಂದೆ ಸಾಗಿದರೆ ನಮಗೆ ನೆರಳು ನೀಡಲು ಆಳೆತ್ತರಕ್ಕೆ ಬೆಳೆದು ನಿಂತಿರುವ ಮರಗಳು, ಮರಗಳಲ್ಲಿ ಚಿಲಿಪಿಲಿ ಹಕ್ಕಿಗಳ ನಾದ ನಮ್ಮ ಚಾರಣದ ಹುಮ್ಮಸ್ಸನ್ನು ಹೆಚ್ಚಿಸಿದಂತಹ ಅನುಭವ. ಹೀಗೆ ಸಾಗುತ್ತ ಮುಂದೆ ಎದುರುಗೊಳ್ಳುವುದೇ ಹಸಿರು ಹುಲ್ಲುಗಳಿಂದ ಶೃಂಗಾರಗೊಂಡಿರುವ ಮೇರುತಿ ಪರ್ವತ.

ಬೆಟ್ಟದ ತುದಿಯಲ್ಲಿದೆ ಗಣಪತಿ ಮಂದಿರ:
ಮೇರುತಿ ಪರ್ವತದ ತುತ್ತತುದಿಯನ್ನು ತಲುಪಿದರೆ ಚಾರಣಿಗರಿಗೆ ಪ್ರಕೃತಿ ಸೌಂದರ್ಯದ ಜೊತೆ ದೇವರ ದರುಶನದ ಭಾಗ್ಯ ಕೂಡ ಇಲ್ಲಿ ಸಿಗುತ್ತದೆ, ಬೆಟ್ಟದ ತುದಿಯಲ್ಲಿ ಗಣಪತಿ ದೇವರ ಗುಡಿಯೊಂದಿದ್ದು ಇಲ್ಲಿ ಮಾರ್ಚ್ ತಿಂಗಳಿನಲ್ಲಿ ದೇವರಿಗೆ ವಿಶೇಷ ಪೂಜೆಯನ್ನು ಊರಿನ ಜನರೆಲ್ಲರೂ ಸೇರಿ ನಡೆಸುತ್ತಾರೆ. ಅಂತೆಯೇ ತಪಾಸಣೆಯಲ್ಲಿ ಹೋಮ ಹವನಗಳನ್ನು ನಡೆಸಿಕೊಂಡು ಬರುವುದು ಹಿಂದಿನಿಂದಲೂ ವಾಡಿಕೆಯಲ್ಲಿತ್ತು.

ಬೆಟ್ಟದ ತುದಿಯಲ್ಲಿ ನಿಂತು ಕಣ್ಣು ಹಾಯಿಸಿದರೆ ಒಂದುಕಡೆ ಕಳಸ ಹೊರನಾಡು ದೇವಸ್ಥಾನ ಕಾಣಸಿಗುತ್ತದೆ. ಜೊತೆಗೆ ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಗಿರಿಶಿಖರಗಳನ್ನು ಕಣ್ತುಂಬಿಕೊಳ್ಳಬಹುದು. ಬೆಟ್ಟದ ಬುಡದಲ್ಲಿ ನಿಂತು ಪರ್ವತದ ತುದಿಯನ್ನು ನೋಡಿದಾಗ ಬಾನುಭುವಿ ಸಂಗಮಿಸಿದಂತೆ ಗೋಚರಿಸುತ್ತದೆ.

ತಿಂಡಿ ತಿನಿಸು ನೀವೇ ತೆಗೆದುಕೊಂಡು ಹೋಗಿ:
ಚಾರಣಿಗರು ಇಲ್ಲಿಗೆ ಬರುವಾಗ ತಮಗೆ ಬೇಕಾಗಿರುವ ತಿಂಡಿ ತಿನಿಸುಗಳನ್ನು ತಾವೇ ತರಬೇಕು. ಇಲ್ಲಿ ಯಾವುದೇ ರೀತಿಯ ತಿಂಡಿ ತಿನಿಸುಗಳು ಸಿಗುವುದಿಲ್ಲ, ಬಸರಿಕಟ್ಟೆಯಲ್ಲಿ ತಿಂಡಿ ತಿನಿಸುಗಳನ್ನು ಪಡೆದುಕೊಳ್ಳಬಹುದು.

ಜನಾಕರ್ಷಣೆ ಕಡಿಮೆ :
ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಮುಳ್ಳಯ್ಯನ ಗಿರಿ, ಬಾಬಾಬುಡನ್ ಗಿರಿ, ಕೆಮ್ಮಣ್ಣು ಗುಂಡಿ ಹೀಗೆ ಹಲವಾರು ಗಿರಿಧಾಮಗಳು ಹೆಚ್ಚು ಪ್ರಚಲಿತದಲ್ಲಿ ಇದೆ. ಆದರೂ ಅಷ್ಟೇ ಪ್ರಾಮುಖ್ಯತೆಯನ್ನು ಪಡೆದಿರುವ ಮೇರುತಿ ಪರ್ವತ ಹೆಚ್ಚಿನ ಜನಾಕರ್ಷಣೆ ಪಡೆದಿಲ್ಲ. ಈ ಬೆಟ್ಟ ಇನ್ನಷ್ಟು ಜನಾಕರ್ಷಣೆಯನ್ನು ಪಡೆಯಬೇಕಾಗಿದೆ ಎನ್ನುತ್ತಾರೆ ಇಲ್ಲಿನ ಜನರು.

ಭೇಟಿ ಹೇಗೆ:
ಮೇರುತಿ ಪರ್ವತ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಹತ್ತಿರದ ಪ್ರದೇಶ, ಕಳಸದಿಂದ ಬಸ್ರಿಕಟ್ಟೆ ಮಾರ್ಗದಲ್ಲಿ ಪ್ರಯಾಣಿಸಿದರೆ ಮೇಥಿಖಾನ್ ಎಸ್ಟೇಟ್ ಎದುರುಗೊಳ್ಳುತ್ತದೆ ಇಲ್ಲಿಂದ ಅನುಮತಿಯನ್ನು ಪಡೆದು ಚಾರಣ ಮುಂದುವರಿಸಬೇಕು.

ಸ್ವಚ್ಛತೆ ಕಾಪಾಡಿ :
ಇಲ್ಲಿಗೆ ಬರುವ ಚಾರಣಿಗರು ಬೆಟ್ಟದ ಸೌಂದರ್ಯಕ್ಕೆ ಧಕ್ಕೆ ಆಗದ ರೀತಿಯಲ್ಲಿ ಸುರಕ್ಷತೆ ವಹಿಸಬೇಕು. ತಾವು ತಂದಂತಹ ತಿಂಡಿ ತಿನಿಸುಗಳನ್ನು ಎಲ್ಲೆಂದರಲ್ಲಿ ಎಸೆದು ಪರಿಸರ ಹಾಳುಮಾಡದೆ ಪರ್ವತದ ಸೌಂದರ್ಯ ಇಮ್ಮಡಿಗೊಳಿಸಲು ಸಹಕರಿಸಿ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.