ರಾಜ್ಯ ನಾಯಕರ ತೆಕ್ಕೆಯಿಂದ ಸಂಘಟನೆಗೆ ಹೊರಳಿದ ಕಮಲ


Team Udayavani, May 8, 2019, 3:09 AM IST

bjp-logo

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯನ್ನು ಬಿಜೆಪಿ ಈ ಬಾರಿ ಪ್ರಭಾವಿ ನಾಯಕರ ಮುಂದಾಳತ್ವಕ್ಕಿಂತ ಸಂಘಟನೆ ಕೇಂದ್ರಿತವಾಗಿ ಎದುರಿಸಿದೆ. ಆ ಮೂಲಕ ಕೆಲವೇ ನಾಯಕರ ನಿಯಂತ್ರಣದಲ್ಲಿದ್ದಂತಿದ್ದ ಪಕ್ಷವನ್ನು ಮತ್ತೆ ಸಂಘಟನೆಯ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾದಂತಿದೆ. ಚುನಾವಣೆಯ ಫ‌ಲಿತಾಂಶ ಏನೇ ಇದ್ದರೂ ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಇದು ಮಹತ್ತರ ಹೆಜ್ಜೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಬಿಜೆಪಿಗೆ ಉತ್ತಮ ನೆಲೆ ಇದೆ. ಒಂದೂವರೆ ದಶಕದಿಂದೀಚೆಗೆ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಹೆಚ್ಚು ಸ್ಥಾನ ಪಡೆಯುತ್ತಿದ್ದು, ಬಿಜೆಪಿಯ ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ರಾಜ್ಯದಲ್ಲಿ ಪಕ್ಷ ತಳಮಟ್ಟದಿಂದ ಬೇರೂರಲು ಕೇಂದ್ರ ಸಚಿವರಾಗಿದ್ದ ಅನಂತ ಕುಮಾರ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೇರಿ ಹಲವು ನಾಯಕರ ಪರಿಶ್ರಮ ದೊಡ್ಡದಿತ್ತು.

ಆ ಕಾರಣಕ್ಕೆ ಇಬ್ಬರು ನಾಯಕರು ರಾಜ್ಯ ಬಿಜೆಪಿಯ ಅಗ್ರ ನಾಯಕರಾಗಿ ಬೆಳೆದು ನಿಂತರು. ಮುಂದೆ ಇದೇ ಕಾರಣಕ್ಕೆ ಇತರ ನಾಯಕರು, ಮುಖಂಡರು ಅನಂತ ಕುಮಾರ್‌ ಹಾಗೂ ಯಡಿಯೂರಪ್ಪ ಗುಂಪುಗಳ ಪೈಕಿ ಒಂದರಲ್ಲಿ ಗುರುತಿಸಿಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.

ಎರಡೂ ಗುಂಪುಗಳಲ್ಲಿ ಗುರುತಿಸಿಕೊಳ್ಳದವರು ಸ್ವತಂತ್ರವಾಗಿ ಬೆಳೆಯಲು ಸಾಧ್ಯವೇ ಇಲ್ಲ ಎಂಬಂತಾಗಿತ್ತು. ಕ್ರಮೇಣ ಪಕ್ಷದ ಜತೆಗೆ ನಾಯಕರ ವೈಯಕ್ತಿಕ ವರ್ಚಸ್ಸು, ನಾಯಕತ್ವವೇ ಮುಖ್ಯವಾಗುತ್ತಾ ಬಂದು ಅವರ ನಿಲುವು, ನಿರ್ಧಾರಗಳೇ ನಿರ್ಣಾಯಕ ಎಂಬ ಸ್ಥಿತಿಗೆ ತಲುಪಿತ್ತು ಎನ್ನುತ್ತಾರೆ ಬಿಜೆಪಿಯ ಹಿರಿಯ ನಾಯಕರೊಬ್ಬರು.

ಕೇಡರ್‌ ಆಧಾರಿತ ಪಕ್ಷ: ಬಿಜೆಪಿಯು ಕೇಡರ್‌ ಆಧಾರಿತ ಪಕ್ಷ. ವ್ಯಕ್ತಿಗಿಂತ ಪಕ್ಷ ಮುಖ್ಯ ಎಂಬುದು ಬಿಜೆಪಿ ಸಿದ್ಧಾಂತ. ಇಷ್ಟಾದರೂ ಪಕ್ಷ ಸಂಘಟನೆ, ರಾಜಕೀಯ ಉನ್ನತಿಗಾಗಿ ರಾಜ್ಯದಲ್ಲಿ ಕೆಲ ನಾಯಕರು ಸ್ವತಂತ್ರ ನಿರ್ಧಾರಗಳನ್ನು ಕೈಗೊಂಡರೂ ಹಲವು ಸಂದರ್ಭದಲ್ಲಿ ಪುರಸ್ಕರಿಸಲಾಗುತ್ತಿತ್ತು. ಇದರಿಂದ ಇತರ ನಾಯಕರು ಹಿಂಬಾಲಕರಾಗಿಯೇ ಗುರುತಿಸಿಕೊಳ್ಳಲಾರಂಭಿಸಿದ್ದರು. ಇದು ಬಿಜೆಪಿಯ ಜಾಯಮಾನಕ್ಕೆ ಒಪ್ಪುವ ಬೆಳವಣಿಗೆಯಾಗಿರಲಿಲ್ಲ. ಅಲ್ಲದೇ ಸಂಘಟನೆ ಸೊರಗುವ ಆತಂಕವೂ ಇತ್ತು.

ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸುತ್ತಿದ್ದ ವರಿಷ್ಠರು, ರಾಜ್ಯದಲ್ಲಿ ಪಕ್ಷವನ್ನು ಮತ್ತೆ ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದರು. ಈ ನಡುವೆ ಅನಂತ ಕುಮಾರ್‌ ಅಕಾಲಿಕವಾಗಿ ನಿಧನರಾದರು. ನಂತರ ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್‌ ಬೆಂಗಳೂರು ದಕ್ಷಿಣ ಕ್ಷೇತ್ರ ಅಭ್ಯರ್ಥಿ ಎಂದು ನಿರೀಕ್ಷಿಸಲಾಗಿತ್ತು. ತೇಜಸ್ವಿನಿ ಸಹ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ರಾಜ್ಯ ಕೋರ್‌ ಕಮಿಟಿಯೂ ಅವರ ಹೆಸರನ್ನು ಶಿಫಾರಸು ಮಾಡಿತ್ತು.

ಆದರೂ, ವರಿಷ್ಠರು ಅಂತಿಮವಾಗಿ ತೇಜಸ್ವಿ ಸೂರ್ಯ ಅವರನ್ನು ಕಣಕ್ಕಿಳಿಸಿದರು. ಬಳಿಕ ತೇಜಸ್ವಿನಿ ಅವರನ್ನು ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ನೇಮಿಸಲಾಯಿತು. ಅಂದರೆ ಸಾಮಾನ್ಯ ಕಾರ್ಯಕರ್ತರಂತೆ ಸಂಘಟನೆಯಲ್ಲಿ ತೊಡಗಿಸಿಕೊಂಡು ಅದರ ಆಧಾರದ ಮೇಲೆ ಸ್ಥಾನಮಾನ ಪಡೆಯಲಿ ಎಂಬ ಸಂದೇಶವನ್ನು ವರಿಷ್ಠರು ಸ್ಪಷ್ಟವಾಗಿ ರವಾನಿಸಿದ್ದಾರೆ ಎಂಬುದು ರಾಜ್ಯ ಬಿಜೆಪಿ ಹಿರಿಯ ನಾಯಕರೊಬ್ಬರ ಅನಿಸಿಕೆ.

ಅಭ್ಯರ್ಥಿ ಆಯ್ಕೆಯಲ್ಲೂ ದಿಟ್ಟ ನಿಲುವು: ಇನ್ನೊಂದೆಡೆ, ಯಡಿಯೂರಪ್ಪ ಅವರು ಪ್ರಭಾವಿ ನಾಯಕರಾಗಿ ಮುಂದುವರಿದಿದ್ದರೂ ಅವರ ಎಲ್ಲ ನಿರ್ಧಾರಗಳನ್ನು ಹೈಕಮಾಂಡ್‌ ಒಪ್ಪುವುದಿಲ್ಲ ಎಂಬ ಸಂದೇಶವನ್ನು ಆಗಾಗ್ಗೆ ರವಾನಿಸುತ್ತಿತ್ತು. ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆ ವೇಳೆ ಇದು ಸ್ಪಷ್ಟವಾಗಿತ್ತು. ಯಡಿಯೂರಪ್ಪ ನೇತೃತ್ವದ ಕೋರ್‌ ಕಮಿಟಿ ಶಿಫಾರಸು ಮಾಡಿದ್ದ ಬಹುತೇಕರಿಗೆ ಟಿಕೆಟ್‌ ನೀಡಿದರೂ ಕೆಲವರಿಗೆ ನಿರಾಕರಿಸಲಾಗಿತ್ತು. ರಾಜ್ಯದ ಹಾಲಿ ಸಂಸದರಿಗೆಲ್ಲಾ ಟಿಕೆಟ್‌ ಕೊಟ್ಟರೂ, ಕೊಪ್ಪಳ ಸಂಸದ ಕರಡಿ ಸಂಗಣ್ಣ ಹೆಸರು ಮೊದಲ ಪಟ್ಟಿಯಲ್ಲಿರಲಿಲ್ಲ.

ಕೆಲ ದಿನಗಳ ಬಳಿಕ ಟಿಕೆಟ್‌ ಅಂತಿಮಗೊಳಿಸಲಾಗಿತ್ತು. ಚಿಕ್ಕೋಡಿ ಕ್ಷೇತ್ರದಿಂದ ಮಾಜಿ ಸಚಿವ ಉಮೇಶ್‌ ಕತ್ತಿ ಸಹೋದರ ರಮೇಶ್‌ ಕತ್ತಿಗೆ ಟಿಕೆಟ್‌ ನೀಡಬೇಕು ಎಂಬ ಯಡಿಯೂರಪ್ಪ ಒತ್ತಡದ ಹೊರತಾಗಿಯೂ ಅಣ್ಣಾ ಸಾಹೇಬ ಜೊಲ್ಲೆಗೆ ಟಿಕೆಟ್‌ ನೀಡಿದ್ದರು. ನಂತರ, ಯಡಿಯೂರಪ್ಪ ಅವರು ರಮೇಶ್‌ ಕತ್ತಿ, ಉಮೇಶ್‌ ಕತ್ತಿ ಅವರನ್ನು ಸಮಾಧಾನಪಡಿಸಬೇಕಾಯಿತು.

ಲೋಕಸಭಾ ಚುನಾವಣೆಗೆ ಮೋದಿ ಪ್ರಚಾರ ಸಭೆ ಹಾಗೂ ಅಮಿತ್‌ ಶಾ ಪ್ರಚಾರದ ಹೊರತಾಗಿ ಉಳಿದ ನಾಯಕರ ಪ್ರಚಾರಕ್ಕೆ ವಿಶೇಷ ಆದ್ಯತೆ ಇರಲಿಲ್ಲ. ಯಡಿಯೂರಪ್ಪ ನೇತೃತ್ವದಲ್ಲಿ ಪ್ರಚಾರ ಎಂಬಂತೆ ಎಲ್ಲಿಯೂ ಬಿಂಬಿತವಾಗಲಿಲ್ಲ. ಬದಲಿಗೆ ರಾಜ್ಯಾಧ್ಯಕ್ಷರಾಗಿ ಅವರು ಎಲ್ಲೆಡೆ ಪ್ರಚಾರ ನಡೆಸಿದರು. ಇತರ ನಾಯಕರು ತಮಗೆ ಗೊತ್ತುಪಡಿಸಿದ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಸೀಮಿತರಾದರು. ಈ ಎಲ್ಲ ದಿಟ್ಟ ನಿಲುವುಗಳ ಮೂಲಕ ವರಿಷ್ಠರು ವ್ಯಕ್ತಿಗಿಂತ ಪಕ್ಷ ಸಂಘಟನೆ ಮುಖ್ಯ ಎಂಬ ಸಂದೇಶವನ್ನು ಸ್ಪಷ್ಟವಾಗಿ ಸಾರಿದ್ದಾರೆ.

ಇದರ ಸುಳಿವು ಸಿಕ್ಕಿದೆ ಎಂಬಂತೆ ಯಡಿಯೂರಪ್ಪ ಅವರು ಪ್ರತಿಪಕ್ಷ ಹಾಗೂ ರಾಜ್ಯಾಧ್ಯಕ್ಷ ಎರಡೂ ಜವಾಬ್ದಾರಿ ನಿರ್ವಹಿಸುವುದು ಕಷ್ಟ ಎಂದು ಹೇಳಿದ್ದಾರೆ. ಆ ಮೂಲಕ ರಾಜ್ಯಾಧ್ಯಕ್ಷ ಸ್ಥಾನ ಬಿಟ್ಟು ಕೊಡುವ ಇಂಗಿತ ತೋರಿದ್ದಾರೆ. ಇವೆಲ್ಲಾ ಬೆಳವಣಿಗೆಗಳು ಸಂಘಟನೆ ಕೇಂದ್ರಿತವಾಗಿ ಪಕ್ಷ ಬೆಳವಣಿಗೆಗೆ ಹೊಂದಲು ಸಹಕಾರಿಯಾಗಲಿದೆ ಎಂದು ಉನ್ನತ ನಾಯಕರೊಬ್ಬರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರೆಡ್ಡಿ ಸಹೋದರರ ಪ್ರಭಾವಳಿ ಗೌಣ: ದಶಕದ ಹಿಂದೆ ಉಚ್ಛಾ†ಯ ಸ್ಥಿತಿಯಲ್ಲಿದ್ದ ಮಾಜಿ ಸಚಿವರಾದ ಜನಾರ್ಧನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಸಹೋದರರ ಪ್ರಭಾವಳಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಂಪೂರ್ಣ ಗೌಣವಾಗಿತ್ತು. ಎಲ್ಲ ನಾಯಕರು ಪಕ್ಷದ ಕಾರ್ಯಕರ್ತರಂತೆ ಕಾರ್ಯ ನಿರ್ವಹಿಸಿದರೆ ಹೊರತು ಎಲ್ಲಿಯೂ ಪ್ರಧಾನವಾಗಿ ಕಾಣಿಸಿಕೊಳ್ಳಲಿಲ್ಲ. ಮಾಜಿ ಸಚಿವ ಬಿ.ಶ್ರೀರಾಮುಲು ಸಹ ತಾರಾ ಪ್ರಚಾರಕ್ಕಷ್ಟೇ ಸೀಮಿತರಾದರು. ಆ ಮೂಲಕ ಬಳ್ಳಾರಿ ಹಾಗೂ ಸುತ್ತಮುತ್ತಲ ಪ್ರದೇಶಗಳ ಮೇಲಿದ್ದ ಅವರ ಹಿಡಿತ ತಪ್ಪಿಸುವುದರ ಜತೆಗೆ ಪಕ್ಷದಲ್ಲೂ ಕೆಲ ಚಟುವಟಿಕೆಗಷ್ಟೇ ಸೀಮಿತಗೊಳಿಸಿದ್ದು ಗಮನಾರ್ಹ ಬೆಳವಣಿಗೆ.

* ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.