ವ್ಯಕ್ತಿಗೆ ಡಿಕ್ಕಿ ಹೊಡೆದು 10 ಕಿ.ಮೀಟರ್ ವರೆಗೆ ಎಳೆದೊಯ್ದ ಕಾರು… ಚಾಲಕ ಹೇಳಿದ್ದೇನು?
ವಾಹನ ಚಾಲಕ ದೆಹಲಿ ನಿವಾಸಿಯಾಗಿದ್ದು, ಆತನ ವಿಚಾರಣೆ ನಡೆಸಲಾಗುತ್ತಿದೆ
Team Udayavani, Feb 7, 2023, 4:22 PM IST
ನವದೆಹಲಿ: ಬೈಕ್ ಗೆ ಡಿಕ್ಕಿ ಹೊಡೆದು ಕಿಲೋ ಮೀಟರ್ ದೂರ ಎಳೆದೊಯ್ದ ಕಾರು, ಕಿಲೋ ಮೀಟರ್ ಗಟ್ಟಲೇ ಯುವತಿಯನ್ನು ಎಳೆದೊಯ್ದ ಕಾರು ಹೀಗೆ ಇತ್ತೀಚೆಗೆ ಇಂತಹ ಘಟನೆಗಳು ಹೆಚ್ಚುತ್ತಲೇ ಇದೆ. ಏತನ್ಮಧ್ಯೆ ಆಗ್ರಾದಿಂದ ನೋಯ್ಡಾಕ್ಕೆ ತೆರಳುತ್ತಿದ್ದ ಕಾರು ವ್ಯಕ್ತಿಯೊಬ್ಬನಿಗೆ ಡಿಕ್ಕಿ ಹೊಡೆದು ಬರೋಬ್ಬರಿ ಹತ್ತು ಕಿಲೋ ಮೀಟರ್ ದೂರದವರೆಗೆ ಎಳೆದೊಯ್ದ ಘಟನೆ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ.
ಇದನ್ನೂ ಓದಿ:ದಳಪತಿ ಕೆರಿಯರ್ ನಲ್ಲಿ ಹೊಸ ದಾಖಲೆ ಬರೆದ ʼವಾರಿಸುʼ: ಟೋಟಲ್ ಕಲೆಕ್ಷನ್ ಎಷ್ಟು?
ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕ ವಿರೇಂದ್ರ ಸಿಂಗ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ದಟ್ಟ ಮಂಜು ಕವಿದ ವಾತಾವರಣದ ಕಾರಣದಿಂದ ಅಪಘಾತ ಸಂಭವಿಸಿರುವಾಗಿ ತಿಳಿಸಿರುವುದಾಗಿ ವರದಿಯಾಗಿದೆ.
ಕಳೆದ ರಾತ್ರಿ ಎಕ್ಸ್ ಪ್ರೆಸ್ ವೇನಲ್ಲಿ ದಟ್ಟ ಮಂಜು ಕವಿದಿತ್ತು, ಇದರಿಂದಾಗಿ ವ್ಯಕ್ತಿಯೊಬ್ಬನಿಗೆ ಕಾರು ಡಿಕ್ಕಿ ಹೊಡೆದು ಹತ್ತು ಕಿಲೋ ಮೀಟರ್ ನಷ್ಟು ದೂರ ಎಳೆದೊಯ್ದಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ತ್ರಿಗುಣ್ ಬಿಸೆನ್ ತಿಳಿಸಿದ್ದಾರೆ.
ಮಥುರಾದ ಮಂತ್ ನಲ್ಲಿ ಭದ್ರತಾ ಸಿಬಂದಿ ಕಾರಿನ ಕೆಳಗೆ ವ್ಯಕ್ತಿಯೊಬ್ಬರ ಶವ ಸಿಲುಕಿಕೊಂಡಿರುವುದನ್ನು ಗಮನಿಸಿದ್ದರು. ಆ ನಂತರ ನೋಯ್ಡಾಕ್ಕೆ ತೆರಳುತ್ತಿದ್ದ ವೇಳೆ ಕಾರು ಟೋಲ್ ಬೂತ್ ಬಳಿ ನಿಲ್ಲಿಸಿದ ಸಂರ್ಭದಲ್ಲಿ ಅಲ್ಲಿನ ಸಿಬಂದಿಗಳು ಶವದ ಬಗ್ಗೆ ಗಮನಸೆಳೆದಿದ್ದರು ಎಂದು ವರದಿ ತಿಲಿಸಿದೆ.
ಮಾಧ್ಯಮಗಳ ವರದಿ ಪ್ರಕಾರ, ವಾಹನ ಚಾಲಕ ದೆಹಲಿ ನಿವಾಸಿಯಾಗಿದ್ದು, ಆತನ ವಿಚಾರಣೆ ನಡೆಸಲಾಗುತ್ತಿದೆ. ಸಿಸಿಟಿವಿ ಪೂಟೇಜ್ ಹಾಗೂ ಸ್ಥಳೀಯ ನಿವಾಸಿಗಳು ಕೂಡಾ ಘಟನೆ ಬಗ್ಗೆ ವಿವರಣೆ ಕೊಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ