ಚಿದಂಬರಂ ಪ್ರಕರಣ ಎಲ್ಲಿಗೆ ಹೋಗಿ ನಿಲ್ಲುತ್ತೋ ಗೊತ್ತಿಲ್ಲ: ಎಚ್.ಡಿ.ದೇವೇಗೌಡ
Team Udayavani, Aug 22, 2019, 8:06 PM IST
ಬೆಂಗಳೂರು: ಚಿದಂಬರಂ ವಿರುದ್ಧದ ಪ್ರಕರಣ ಬಹಳ ಹಿಂದಿನದು, ಯಾಕೆ ಈ ಹಂತಕ್ಕೆ ಹೋಯಿತೋ ಗೊತ್ತಿಲ್ಲ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಚಿದಂಬರಂ ತನಿಖಾಧಿಕಾರಿಗಳಿಗೆ ಸಹಕಾರ ಕೊಟ್ಟರೋ ಇಲ್ಲವೋ, ಯಾಕೆ ಬಂಧನ ಮಾಡಿದರೋ, ಇದು ಎಲ್ಲಿಗೆ ಹೋಗಿ ನಿಲ್ಲುತ್ತೋ ನೋಡಬೇಕು ಎಂದು ಹೇಳಿದರು. ಹಿಂದೆ ಚಿದಂಬರಂ ಅವರು ಕೇಂದ್ರದಲ್ಲಿ ಗೃಹ ಸಚಿವರಾಗಿದ್ದಾಗ ಅಮಿತ್ ಷಾ ಬಂಧನ ಮಾಡಿದ್ದಕ್ಕೆ ಇಂದು ಚಿದಂಬರಂ ಅವರನ್ನು ಬಂಧಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಅದರ ಬಗ್ಗೆ ನನಗೇನೂ ಮಾಹಿತಿ ಇಲ್ಲ ಎಂದರು.
ಇನ್ನು, ಮಾಜಿ ಸಚಿವ ಉಮೇಶ್ ಕತ್ತಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರಾ ಎಂಬ ಪ್ರಶ್ನೆಗೆ, ಸಿಡಿಮಿಡಿಗೊಂಡ ಗೌಡರು, ನಮ್ಮದು ಚಿಕ್ಕ ಪಕ್ಷ. ನಮ್ಮ ಪಾಡಿಗೆ ನಮ್ಮನ್ನು ಬಿಟ್ಟುಬಿಡಿ. ಅದಕ್ಕೆಲ್ಲಾ ನಾನು ಉತ್ತರ ಕೊಡಲ್ಲ ಎಂದರು. ರಾಜ್ಯ ರಾಜಕಾರಣದ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ನಾವು ಒಂದು ಮಾತನಾಡಿದರೆ ಮತ್ತೂಂದು ರೀತಿ ಬಿಂಬಿತವಾಗುತ್ತದೆ. ಹೀಗಾಗಿ, ನಾನಾಯಿತು, ನನ್ನ ಪಕ್ಷ ಸಂಘಟನೆಯಾಯಿತು ಎಂಬಂತೆ ಇದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ