ಹೊಸ ಆಯೋಗಕ್ಕೆ “ನಾಗರಿಕ ಸಂಹಿತೆ’ ಹೊಣೆ
Team Udayavani, Feb 5, 2022, 7:45 AM IST
ಹೊಸದಿಲ್ಲಿ: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯ ಸಾಧಕ-ಬಾಧಕಗಳನ್ನು ಕೇಂದ್ರ ಸರಕಾರ ರಚಿ ಸಲಿರುವ 22ನೇ ಕಾನೂನು ಆಯೋಗ ಅಧ್ಯಯನ ಮಾಡುವ ನಿರೀಕ್ಷೆಯಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಸಂಸದ ನಿಶಿಕಾಂತ್ ದುಬೇ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಮೊದಲು ನಾಗರಿಕ ಸಂಹಿತೆಯ ಸಾಧಕ ಬಾಧಕಗಳ ಅಧ್ಯಯನದ ಪ್ರಸ್ತಾವನೆಯನ್ನು 21ನೇ ಕಾನೂನು ಆಯೋಗದ ಮುಂದಿಡಲಾಗಿತ್ತು. ಆದರೆ ಕಳೆದ ವರ್ಷದ ಆಗಸ್ಟ್ನಲ್ಲಿ 21ನೇ ಕಾನೂನು ಆಯೋಗದ ಅಧಿಕಾರಾ ವಧಿ ಮುಕ್ತಾಯವಾಗಿದ್ದರಿಂದ ಈಗ 22ನೇ ಆಯೋಗದ ಮುಂದೆ ಸಂಹಿತೆಯ ಪ್ರಸ್ತಾವನೆ ಮಂಡಿಸಲು ಚಿಂತನೆ ನಡೆಸಲಾಗಿದೆ’ ಎಂದರು.
ಶುಲ್ಕ ನಿಯಂತ್ರಣ ಅಸಾಧ್ಯ: ದೇಶದ ನಾನಾ ನ್ಯಾಯಾ ಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕೆಲವು ವಕೀಲರ ಮಿತಿಮೀರಿದ ಶುಲ್ಕಕ್ಕೆ ಕಡಿವಾಣ ಹಾಕುವುದು ಅಸಾಧ್ಯ ಎಂದು ರಿಜಿಜು, ಲೋಕಸಭೆಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!