ಮನೆಯಲ್ಲಿ ಕಾಯುತ್ತಿದ್ದಾರೆ; ದಯವಿಟ್ಟು ಊರಿಗೆ ಬಿಟ್ಟು ಬಿಡಿ

ದ.ಕ., ಉಡುಪಿ ಜಿಲ್ಲೆಯಲ್ಲಿ ಬಾಕಿಯಾಗಿದ್ದಾರೆ ಉ. ಕರ್ನಾಟಕ ಭಾಗದ ಕಾರ್ಮಿಕರು

Team Udayavani, Apr 21, 2020, 5:45 AM IST

ಮನೆಯಲ್ಲಿ ಕಾಯುತ್ತಿದ್ದಾರೆ; ದಯವಿಟ್ಟು ಊರಿಗೆ ಬಿಟ್ಟು ಬಿಡಿ

ಸಾಂದರ್ಭಿಕ ಚಿತ್ರ.

ಮಂಗಳೂರು/ಉಡುಪಿ: “ವೃದ್ಧ ತಂದೆ- ತಾಯಿ, ಪತ್ನಿ, ಮಕ್ಕಳು ಮನೆಯಲ್ಲಿ ಕಾಯುತ್ತಿದ್ದಾರೆ. ಮಕ್ಕಳೊಂದಿಗೆ ಕೂಡಿ ಗಂಜಿ ಕುಡಿಯಬೇಕು. ದಯವಿಟ್ಟು ನಮ್ಮನ್ನು ನಮ್ಮ ಊರಿಗೆ ಬಿಟ್ಟು ಬಿಡಿ; ನಮ್ಮವರನ್ನು ಸೇರಿಕೊಳ್ಳುತ್ತೇವೆ…’

ಕೂಲಿ ಕೆಲಸಕ್ಕೆಂದು ಬಂದು ಲಾಕ್‌ಡೌನ್‌ನಿಂದಾಗಿ ಕೆಲಸವಿಲ್ಲದೆ, ಜಿಲ್ಲೆಯಲ್ಲೇ ಬಾಕಿಯಾಗಿರುವ ಉತ್ತರ ಕರ್ನಾಟಕ ಭಾಗದ ಕಾರ್ಮಿಕರ ನೋವಿನ ನುಡಿ ಇದು.”ಪ್ರತಿ ವರ್ಷ ಬೇಸಗೆಯಲ್ಲಿ ನಮ್ಮೂರಿನಲ್ಲಿ ಮಳೆಯಿಲ್ಲದೆ, ಕೃಷಿ ಚಟುವಟಿಕೆ ಸಾಧ್ಯವಾಗುವು ದಿಲ್ಲ. ಹೀಗಾಗಿ ಕೆಲಸ ಹುಡುಕಿ ಕರಾವಳಿಗೆ ಬರುತ್ತೇವೆ. ಮೇ, ಜೂನ್‌ನಲ್ಲಿ ಊರಿಗೆ ಮರಳುತ್ತೇವೆ. ಲಾಕ್‌ಡೌನ್‌ನಿಂದಾಗಿ ಕೆಲಸವಿಲ್ಲದೆ ಕೈಯಲ್ಲಿ ಬಿಡಿಗಾಸೂ ಇಲ್ಲ. ಎಷ್ಟು ದಿನ ಅಂತ ದಾನಿಗಳು ನೀಡುವ ಆಹಾರ ಸೇವಿಸಿ ಬದುಕುವುದು? ನಮ್ಮನ್ನೊಮ್ಮೆ ಊರಿಗೆ ಕಳಿಸಿಬಿಡಿ ಎಂದು ಮೊರೆ ಇಡುತ್ತಿದ್ದಾರೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಆಶ್ರಯ ಪಡೆಯುತ್ತಿರುವ 70ಕ್ಕೂ ಹೆಚ್ಚು ಕಾರ್ಮಿಕರು.

ನಡೆದೇ ಹೊರಟವರು
ಬಹುತೇಕ ಕಾರ್ಮಿಕರು ತಮ್ಮ ಊರಿಗೆ ಮರಳಲು ನಡೆದುಕೊಂಡೇ ಹೊರಟಿದ್ದರು. ಆದರೆ ಇಲ್ಲಿಂದ ಮುಂದಕ್ಕೆ ಹೋಗಲು ಅಧಿಕಾರಿಗಳು ಅವಕಾಶ ನೀಡದ್ದರಿಂದ ಸಮಾಜ ಮಂದಿರದಲ್ಲಿ ಆಶ್ರಯ ಪಡೆದಿದ್ದಾರೆ. ಇದೇ ರೀತಿ ಹಲವು ಕಡೆಗಳಲ್ಲಿ ಕಾರ್ಮಿಕರು ಆಶ್ರಯ ಪಡೆದಿದ್ದು, ಎಲ್ಲರ ವ್ಯಥೆಯೂ ಇದೇ ಆಗಿದೆ.

10 ಸಾವಿರ ಕಾರ್ಮಿಕರು ಬಾಕಿ!
ದ.ಕ. ಜಿಲ್ಲೆಯಾದ್ಯಂತ ಉತ್ತರ ಕರ್ನಾಟಕ ಭಾಗದ ಅಂದಾಜು 10 ಸಾವಿರ ಕಾರ್ಮಿಕರು ಪ್ರಸ್ತುತ ಕೆಲಸ ಹಾಗೂ ಕೈಯಲ್ಲಿ ಹಣವಿಲ್ಲದೆ ತೊಂದರೆಯಲ್ಲಿದ್ದಾರೆ. ಅಂಥವರಿಗೆ ಕಾರ್ಮಿಕ ಇಲಾಖೆ, ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತ ವತಿಯಿಂದ ಈ ವರೆಗೆ 12 ಸಾವಿರ ಕಿಟ್‌ ಆಹಾರ ಪೂರೈಸಲಾಗಿದೆ. ಕದ್ರಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಸ್ಟೆಲ್‌, ಕೆಪಿಟಿ ಬಿಸಿಎಂ ಹಾಸ್ಟೆಲ್‌, ಪುರಭವನ, ಪಾಂಡೇಶ್ವರ ಸರಕಾರಿ ಶಾಲೆಗಳಲ್ಲಿ ಪುನರ್ವಸತಿ ಕೇಂದ್ರ, ಎರಡು ನೈಟ್‌ ಶೆಲ್ಟರ್ ವ್ಯವಸ್ಥೆ ಮಾಡಲಾಗಿದೆ.

ಉಡುಪಿಯಲ್ಲೂ ಅದೇ ಕೊರಗು
ಉಡುಪಿ ಜಿಲ್ಲೆಯಲ್ಲಿ 6,000ಕ್ಕೂ ಅಧಿಕ ವಲಸೆ ಕಾರ್ಮಿಕರಿದ್ದಾರೆ. ನಗರವೊಂದರಲ್ಲೇ 3,500ರಷ್ಟು ಮಂದಿ ಹೊರ ಜಿಲ್ಲೆ ಹಾಗೂ ರಾಜ್ಯಗಳ ಕಾರ್ಮಿಕರಿದ್ದಾರೆ. ಅವರಿಗೆ ಇಲ್ಲಿನ ಬೋರ್ಡ್‌ ಹೈಸ್ಕೂಲ್‌, ಅಜ್ಜರಕಾಡು, ಬೀಡಿನಗುಡ್ಡೆ, ನಿಟ್ಟೂರು, ಅಲೆವೂರು, ಮಣಿಪಾಲದ ಪ್ರಗತಿನಗರ, ರಾಜೀವ್‌ನಗರ, ಸಂತೆಕಟ್ಟೆ, ಬ್ರಹ್ಮಾವರದ ಲೇಬರ್‌ ಕಾಲನಿ, ಹಾರಾಡಿ ಗಾಂಧಿನಗರ ಕಾಲನಿ, ಬೈಕಾಡಿ ಕಾಲನಿ, ಬಾಕೂìರು ಮೊದಲಾದೆಡೆ ತಾತ್ಕಾಲಿಕ ನೆಲೆ ಕಲ್ಪಿಸಲಾಗಿದೆ.

ನಮೂY ಊರಾಗೆ ಹೊಲಾ ಮನಿ ಅದಾವ. ಊರಿಗೆ ಹೋಗಿ ಬೆಳೆ ಬೆಳೀಬೇಕು. ನಮ್ಮನ್ನು ಕಳುಹಿಸಿ ಕೊಡಿ ಅಂತ ದೇವ್ರಾಗೆ ಪ್ರಾರ್ಥಿಸ್ತಾ ಇದ್ದೇವೆ.
– ವಿಜಯಪುರದ ಲಕ್ಕವ್ವ

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸರಕಾರದ ಸೂಚನೆಯಂತೆ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಯಾರನ್ನೂ ಹೋಗುವುದಕ್ಕಾಗಲೀ ಬರುವುದಕ್ಕಾಗಲೀ ಬಿಡುತ್ತಿಲ್ಲ. ಸದ್ಯ ಎಲ್ಲ ವಲಸೆ ಕಾರ್ಮಿಕರಿಗೂ ಆಹಾರ, ವಸತಿ ಕಲ್ಪಿಸಲಾಗಿದೆ. ಲಾಕ್‌ಡೌನ್‌ ಮುಗಿಯುವ ತನಕ ಇದು ಅನಿವಾರ್ಯ.
– ನಾಗರಾಜ್‌,
ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತ

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.