ಸೋವೇನಹಳ್ಳಿ ಬಳಿ ರಾಜ್ಯದ ಮೊದಲ ಇಕೋ ಪಾರ್ಕ್‌


Team Udayavani, Apr 28, 2019, 3:03 AM IST

sovenahalli

ಹೂವಿನಹಡಗಲಿ: ಕೇವಲ ಉದ್ಯೋಗ ಸೃಷ್ಟಿಯೊಂದೇ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಪ್ರಮುಖ ಉದ್ದೇಶವಲ್ಲ. ಆದರ ಜತೆಯಲ್ಲಿ ಪರಿಸರ ಕಾಳಜಿ, ಪ್ರಕೃತಿ ಸಂರಕ್ಷಣೆ ಮುಂತಾದ ಮನುಷ್ಯ ಜೀವನ ಪ್ರೀತಿಯ ಯೋಜನೆಗಳು ಸಹ ಸೇರಿರುತ್ತವೆ ಎಂಬುದಕ್ಕೆ ತಾಲೂಕಿನ ಸೋವೇನಹಳ್ಳಿ ಗ್ರಾಮದ ಬಳಿ ನಿರ್ಮಿಸಲು ಉದ್ದೇಶಿಸಿರುವ ಇಕೋ ಪಾರ್ಕ್‌ ಸಾಕ್ಷಿಯಾಗುತ್ತಿದೆ.

ಇಕೋ ಪಾರ್ಕ್‌ಗೆ ಸರ್ಕಾರದಿಂದ ಈಗಾಗಲೇ ಸುಮಾರು 1.16 ಕೋಟಿ ರೂ. ಮಂಜೂರಾತಿ ದೊರಕಿದ್ದು, ಇದಕ್ಕಾಗಿ ತಾಲೂಕಿನ ಸೋವೇನಹಳ್ಳಿ ಗ್ರಾಮದ ಬಳಿ ಸುಮಾರು 27 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ನರೇಗಾ ಯೋಜನೆಯಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ.

ಸಾಮಾನ್ಯ ಜನರಲ್ಲಿ ಹಸಿರಿನ ಬಗ್ಗೆ ಜಾಗೃತಿ ಮೂಡಿಸುವುದು, ವಿವಿಧ ರೀತಿಯ ಗಿಡ, ಬಳ್ಳಿ ಬೆಳೆಸಿ ಸುಂದರ ಪ್ರಕೃತಿಯ ರಮ್ಯ ತಾಣವನ್ನಾಗಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ರೈತ ಸಂಜೀವಿನಿ ಯೋಜನೆಯಾದ ಕೃಷಿ ಹೊಂಡದ ಮೂಲಕ ಹಳೇ ಕಾಲದ ಪುಷ್ಕರಣಿ ಹೋಲುವ‌ ರೀತಿಯಲ್ಲಿ ರೈತರ ಹಳೇ ಬಾವಿ ನವೀಕರಿಸಿ ಜಲಮೂಲ ಸಂರಕ್ಷಣೆ ಮಾಡುವುದು ಯೋಜನೆಯ ಪ್ರಮುಖ ಆಂಶವಾಗಿದೆ.

ನಿರ್ವಹಣೆ ಹೇಗೆ?: ಯೋಜನೆ ಪೂರ್ಣಗೊಂಡ ಬಳಿಕ ಯೋಜನೆಯ ನಿರ್ವಹಣೆ ಹೊಣೆಯನ್ನು ಮಹಿಳಾ ಸ್ವಸಹಾಯ ಗುಂಪುಗಳಿಗೆ ನೀಡಿ ಅದರಿಂದ ಬರುವ ಆದಾಯದಲ್ಲಿ ಇಂತಿಷ್ಟು ಪ್ರಮಾಣದಲ್ಲಿ ಸರ್ಕಾರಕ್ಕೆ, ಉಳಿದಷ್ಟು ಸ್ವಸಹಾಯ ಗುಂಪುಗಳ ನಿರ್ವಹಣೆಗೆ ನೀಡಲಾಗುವುದು. ಪಾರ್ಕ್‌ನಲ್ಲಿ ಕರಡಿಧಾಮ ರೀತಿಯಲ್ಲಿ ಕರಡಿಗಳ ಭಾವಚಿತ್ರವನ್ನು ಸಿಮೆಂಟ್‌ನಲ್ಲಿ, ಉಳಿದಂತೆ ಆಟಿಕೆ ಸಾಮಾನುಗಳನ್ನು ಅಳವಡಿಸಲಾಗುವುದು. ಮಲ್ಲಿಗೆ ಸೇರಿ ವಿವಿಧ ಜಾತಿಯ ಹೂವಿನ ಗಿಡಗಳನ್ನು ಬೆಳೆಯಲು ಯೋಜನೆ ರೂಪಿಸಲಾಗಿದೆ.

ಲೋಕಸಭಾ ಚುನಾವಣೆಯ ಉಸ್ತುವಾರಿ ವಹಿಸಿಕೊಂಡಿದ್ದ ಪ್ರಭಾರಿ ಐಎಎಸ್‌ ಅಧಿಕಾರಿ ನಂದಿನಿ ಸೋವೇನಹಳ್ಳಿ ಗ್ರಾಮದ ಯೋಜನೆ ಪ್ರದೇಶಕ್ಕೆ ಭೇಟಿ ನೀಡಿ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯೋಜನೆಯ ವೆಚ್ಚ ಹೆಚ್ಚಾದರೂ ಪರವಾಗಿಲ್ಲ. ಸರ್ಕಾರದಿಂದ ಅನುದಾನ ಪಡೆಯಬಹುದು. ಯೋಜನೆಯನ್ನು ಕಾರ್ಯರೂಪಕ್ಕೆ ತನ್ನಿ ಎಂದು ಕಿವಿ ಮಾತು ಹೇಳಿದ್ದಾರೆ.

ರಾಜ್ಯದಲ್ಲಿ ಇದು ಪ್ರಥಮ ಇಕೋ ಪಾರ್ಕ್‌ ಆಗಿದ್ದು, ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಯೋಜನೆ ರೂಪುಗೊಂಡಿದೆ. ಅದೇ ಮಾದರಿಯಲ್ಲಿ ಯೋಜನೆ ರೂಪುಗೊಳ್ಳುತ್ತಿದೆ. ಪ್ಲಾಸ್ಟಿಕ್‌ ಹಾಗೂ ಕಬ್ಬಿಣ ವಸ್ತುಗಳ ಬಳಕೆ ನಿಷೇಧಿಸಿರುವುದು ಇಲ್ಲಿನ ವಿಶೇಷ. ಪ್ರಕೃತಿ ಕುರಿತು ಜಾಗೃತಿ ಮೂಡಿಸುವ ಯೋಜನೆ ಇದಾಗಿದ್ದು, ಹಳೆ ಕಾಲದ ಜನಜೀವನ ಪರಿಚಯಿಸುವ ಯೋಜನೆ ಇದಾಗಿದೆ.
-ಯು.ಎಚ್‌.ಸೋಮಶೇಖರ್‌, ತಾಪಂ ಇಒ.

* ವಿಶ್ವನಾಥ ಹಳ್ಳಿಗುಡಿ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.