ಅನರ್ಹ ಶಾಸಕರ ಭವಿಷ್ಯ ಇಂದು? ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ


Team Udayavani, Sep 23, 2019, 6:00 AM IST

supreme-court-800

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಯಾಗಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರಗಳನ್ನು ಪ್ರತಿನಿಧಿಸುತ್ತಿದ್ದ ಅನರ್ಹ ಶಾಸಕರು ಸೇರಿ ಎಲ್ಲರ ಚಿತ್ತ ಈಗ ಸುಪ್ರೀಂ ಕೋರ್ಟ್‌ನತ್ತ ನೆಟ್ಟಿದೆ. ಸೋಮವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆಗೆ ಬರಲಿದ್ದು, ನಿರಾಳತೆ ಸಿಗಲಿದೆಯೇ ಎಂಬ ಬಗ್ಗೆ ಕುತೂಹಲ ಮೂಡಿದೆ.

ಅನರ್ಹ ಶಾಸಕರು ದಿಲ್ಲಿಯಲ್ಲಿಯೇ ಬೀಡುಬಿಟ್ಟು ತಮ್ಮ ವಕೀಲರು ಹಾಗೂ ಕಾನೂನು ತಜ್ಞರೊಂದಿಗೆ ಸಮಾ ಲೋಚನೆ ನಡೆಸಿ ತಮಗೆ ಸುಪ್ರೀಂ ನಿರಾಳತೆ ನೀಡಲಿದೆ ಎಂಬ ವಿಶ್ವಾಸ ದಲ್ಲಿದ್ದಾರೆ. ಜತೆಗೆ ಸೆ.30ರೊಳಗೆ ಸುಪ್ರೀಂ ಕೋರ್ಟ್‌ ಒಂದು ಅಂತಿಮ ತೀರ್ಮಾನಕ್ಕೆ ಬರಲಿದ್ದು, ಚುನಾ ವಣೆಗೆ ಸ್ಪರ್ಧಿಸುವ ತಮ್ಮ ಹಾದಿ ಸುಗಮ ವಾಗಲಿದೆ ಎಂದು ಅನರ್ಹ ಶಾಸಕರು ನಂಬಿದ್ದಾರೆ.

ಅನರ್ಹ ಶಾಸಕರ ಮುಂದಿರುವ ತತ್‌ಕ್ಷಣದ ಆಯ್ಕೆ ಗಳೆಂದರೆ ತಮ್ಮನ್ನು ಅನರ್ಹಗೊಳಿಸಿ ಸ್ಪೀಕರ್‌ ಹೊರಡಿ ಸಿರುವ ಆದೇಶಕ್ಕೆ ತಡೆ ಕೊಟ್ಟು ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೊಡಬೇಕು ಅನ್ನುವುದನ್ನು ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿಕೊಳ್ಳಬಹುದು. ಇದಕ್ಕೆ ತಮಿಳುನಾಡಿನ ಎಐಎಡಿಎಂಕೆ 18 ಮಂದಿ ಅನರ್ಹ ಶಾಸಕರ ಪ್ರಕರಣದ ಉದಾಹರಣೆ ಕೊಡಬಹುದು. ಇಲ್ಲವೇ ತಮ್ಮ ಅರ್ಜಿ ಇತ್ಯರ್ಥಗೊಳ್ಳುವವರೆಗೆ ಚುನಾವಣೆಗೆ ತಡೆ ನೀಡಬೇಕು ಎಂದು ಕೇಳಬಹುದು.

ಶಾ ಭೇಟಿ ಮಾಡಿದ ಬಿಎಸ್‌ವೈ
ಉಪ ಚುನಾವಣೆ ಘೋಷಣೆ ಯಾಗು ತ್ತಿದ್ದಂತೆ ಶನಿವಾರ ರಾತ್ರಿಯೇ ದಿಲ್ಲಿಗೆ ತೆರಳಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ರವಿವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ , ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ಅವರ ಸೂಚನೆ ಯಂತೆ ಉಪ ಚುನಾ ವಣೆ ಎದುರಿಸಲು ಸಜ್ಜಾಗಿದ್ದಾರೆ. ರವಿವಾರ ಬೆಳಗ್ಗೆ 8.30ರ ಹೊತ್ತಿಗೆ ಅಮಿತ್‌ ಶಾ ಅವರನ್ನು ಭೇಟಿಯಾದ ಯಡಿಯೂರಪ್ಪ ಕೆಲವು ಸಮಯ ಚರ್ಚೆ ನಡೆಸಿದರು.

ಯಡಿಯೂರಪ್ಪ ಅವರು ಅಮಿತ್‌ ಶಾ ಅವರನ್ನು ಭೇಟಿಯಾಗಿ ಚರ್ಚಿಸಿದ ಸಂದರ್ಭದಲ್ಲಿ ಅನರ್ಹ ಶಾಸಕ ರಮೇಶ್‌ ಜಾರಕಿಹೊಳಿ ಅವರ ಆಪ್ತ ಸಹಾಯಕ ಭರತ್‌ ಕೂಡ ಉಪಸ್ಥಿತರಿದ್ದರು ಎನ್ನಲಾಗಿದೆ.

2,000 ಕೋಟಿ ರೂ. ಪರಿಹಾರಕ್ಕೆ ಮನವಿ
ಶಾ ಜತೆಗಿನ ಚರ್ಚೆಯಲ್ಲಿ ರಾಜ್ಯಕ್ಕೆ ಈವರೆಗೆ ಮೊದಲ ಕಂತಿನ ಪರಿಹಾರ ಬಿಡುಗಡೆ ಯಾಗ ದಿರುವ ಬಗ್ಗೆ ಪ್ರಸ್ತಾವ ವಾಯಿತು. ತತ್‌ಕ್ಷಣ 2,000 ಕೋಟಿ ರೂ. ಪರಿಹಾರ ಧನ ಬಿಡು ಗಡೆ ಮಾಡುವಂತೆ ಯಡಿಯೂರಪ್ಪ ಮನವಿ ಮಾಡಿ ದರು. ಪ್ರಧಾನಿ ಯವರು ದೇಶಕ್ಕೆ ಹಿಂದಿರುಗಿದ ಬಳಿಕ ಚರ್ಚಿಸಿ 2-3 ದಿನಗಳಲ್ಲಿ ಪರಿಹಾರ ಮೊತ್ತ ಬಿಡುಗಡೆ ಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.