ಪವಾಡ ನಡೆದರಷ್ಟೇ ಸರ್ಕಾರದ ಉಳಿವು

ಬೆಂಗಳೂರಿನ ಶಾಸಕರು ಉಳಿದರಷ್ಟೇ ಸರ್ಕಾರ ಸೇಫ್

Team Udayavani, Jul 9, 2019, 6:00 AM IST

vidhana-soudha-750

ಬೆಂಗಳೂರು: ಹದಿಮೂರು ಶಾಸಕರ ರಾಜೀನಾಮೆ, ಇಬ್ಬರು ಪಕ್ಷೇತರರ ಬೆಂಬಲ ವಾಪಸ್‌ನಿಂದ ಸಮ್ಮಿಶ್ರ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಇನ್ನೇನಾದರೂ ‘ಪವಾಡ’ ನಡೆದರಷ್ಟೇ ಸರ್ಕಾರ ಉಳಿಯಬಹುದು.ಇಲ್ಲವೇ ಅನರ್ಹತೆ ಅಸ್ತ್ರವಷ್ಟೇ ವರದಾನವಾಗಬೇಕು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಮುಂಬೈಗೆ ಹೋಗದೆ ಬೆಂಗಳೂರಿನಲ್ಲೇ ಇರುವ ಹಿರಿಯ ಕಾಂಗ್ರೆಸ್‌ ನಾಯಕ ರಾಮಲಿಂಗಾರೆಡ್ಡಿ, ಮುನಿರತ್ನ ಹಾಗೂ ಆನಂದ್‌ಸಿಂಗ್‌, ಮುಂಬೈನಲ್ಲಿರುವ ಎಸ್‌.ಟಿ. ಸೋಮಶೇಖರ್‌, ಬೈರತಿ ಬಸವರಾಜ್‌, ಗೋಪಾಲಯ್ಯ ಸೇರಿ ಆರು ಮಂದಿ ರಾಜೀನಾಮೆ ವಾಪಸ್‌ ಪಡೆದರೆ ಸರ್ಕಾರ ಪವಾಡ ಸದೃಶವಾಗಿ ಉಳಿಯಬಹುದು. ಅದಕ್ಕಾಗಿಯೇ ಶಾಸಕರು ವಾಪಸ್‌ ಬರುವಂತಾಗಲು ಅನರ್ಹತೆ ಅಸ್ತ್ರ ಸಹ ಪ್ರಯೋಗಿಸಲಾಗುತ್ತಿದೆ ಎನ್ನಲಾಗಿದೆ.

ಆರು ಶಾಸಕರು ವಾಪಸ್‌ ಬಂದರೆ ಸಮ್ಮಿಶ್ರ ಸರ್ಕಾರ ಉಳಿಯುತ್ತದೆ ಎಂಬುದು ಖಾತರಿಯಾದರೆ ಪಕ್ಷೇತರ ಶಾಸಕರು ವಾಪಸ್‌ ಬರಲೂ ಬಹುದು. ಸರ್ಕಾರ ಉಳಿಯಲು ಇದೊಂದೇ ಆಶಾಭಾವನೆ ಉಳಿದಿದೆ.

13 ಶಾಸಕರು ರಾಜೀನಾಮೆ ನೀಡಿದ್ದರೂ, ಆ ಪೈಕಿ ಆರು ಜನ ವಾಪಸ್‌ ಪಡೆದರೂ ಸರ್ಕಾರದ ಸಂಖ್ಯಾಬಲ 110ಕ್ಕೆ ಏರಲಿದೆ. ಇಬ್ಬರು ಪಕ್ಷೇತರರ ಬೆಂಬಲ ಪಡೆದರೆ 112 ಆಗಲಿದೆ. ಆಗ ಸದನದಲ್ಲಿ ಬಹುಮತ ಸಾಬೀತಿಗೆ ರಾಜ್ಯಪಾಲರು ಸೂಚಿಸಿದರೂ ಬಹುಮತ ಸಾಬೀತು ಮಾಡಿ ಸರ್ಕಾರ ಉಳಿಸಿಕೊಳ್ಳಬಹುದು ಎಂಬ ಲೆಕ್ಕಾಚಾರ ಕಾಂಗ್ರೆಸ್‌ ಮತ್ತು ಜೆಡಿಎಸ್‌ನದು.

ರಮೇಶ್‌ ಜಾರಕಿಹೊಳಿ, ಪ್ರತಾಪಗೌಡ ಪಾಟೀಲ್, ಮಹೇಶ್‌ ಕುಮಟಳ್ಳಿ, ಬಿ.ಸಿ.ಪಾಟೀಲ್, ಶಿವರಾಮ್‌ ಹೆಬ್ಟಾರ್‌, ಎಚ್.ವಿಶ್ವನಾಥ್‌, ನಾರಾಯಣಗೌಡ ವಾಪಸ್‌ ಬರದಿದ್ದರೂ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌-ಜೆಡಿಎಸ್‌ ಕಾರ್ಯತಂತ್ರ ರೂಪಿಸಿದೆ. ಅವಕಾಶ ಸಿಕ್ಕರೆ ಬಿಜೆಪಿಯ ಕೆಲವು ಶಾಸಕರ ಸೆಳೆಯುವ ಪ್ರಯತ್ನವೂ ನಡೆಯುತ್ತಿದೆ.

ಬಿಜೆಪಿ ತಂತ್ರ: ‘ಆಪರೇಷನ್‌ ಕಮಲ ಇಲ್ಲ’ ಎಂದು ಹೇಳುತ್ತಲೇ ಸಮ್ಮಿಶ್ರ ಸರ್ಕಾರದ ಸಂಖ್ಯಾಬಲ ಕುಗ್ಗಿಸು ತ್ತಿರುವ ಬಿಜೆಪಿಯ ಕಾರ್ಯತಂತ್ರ ಬೇರೆಯದೇ ಇದೆ. ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ 13 ಶಾಸಕರು ಕಾಂಗ್ರೆಸ್‌-ಜೆಡಿಎಸ್‌ನವರ ಸಂಪರ್ಕ, ಮನವೊಲಿಕೆಗೆ ಮಣಿಯದಂತೆ ಮಾಡುವುದು. ಜತೆಗೆ ಸೌಮ್ಯಾ ರೆಡ್ಡಿ ಸೇರಿ ಇನ್ನೂ ಇಬ್ಬರು ಶಾಸಕರ ಕೈಲಿ ರಾಜೀನಾಮೆ ಕೊಡಿಸುವುದು. ಆಗ, ಸರ್ಕಾರದ ಸಂಖ್ಯಾಬಲ 102 ಕ್ಕೆ ಕುಸಿಯಲಿದೆ.

ಒಂದೊಮ್ಮೆ ರಾಜ್ಯಪಾಲರು ಸದನದಲ್ಲಿ ಬಹುಮತ ಸಾಬೀತಿಗೆ ಕುಮಾರಸ್ವಾಮಿಗೆ ಅವಕಾಶ ಕೊಟ್ಟರೂ ರಾಜೀನಾಮೆ ಕೊಟ್ಟಿರುವ ಶಾಸಕರನ್ನು ಹೊರತುಪಡಿಸಿ ಒಟ್ಟಾರೆ ವಿಧಾನಸಭೆ ಸಂಖ್ಯಾಬಲ 209ಕ್ಕೆ ಇಳಿಯಲಿದೆ. ಆಗ ಬಹುಮತಕ್ಕೆ 105 ಬೇಕಾಗುತ್ತದೆ. ಸಮ್ಮಿಶ್ರ ಸರ್ಕಾರದ ಬಲ 102 ಮಾತ್ರ ಇರುವುದರಿಂದ ವಿಶ್ವಾಸಮತಕ್ಕೆ ಸೋಲಾಗುತ್ತದೆ. ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ಕೊಟ್ಟರೆ 107 ಸಂಖ್ಯಾಬಲದೊಂದಿಗೆ ಸರ್ಕಾರ ರಚನೆಗೆ ಅವಕಾಶ ಸಿಗುತ್ತದೆ ಎಂಬುದು ಬಿಜೆಪಿ ನಾಯಕರ ಲೆಕ್ಕಾಚಾರ.

ಹೈಕಮಾಂಡ್‌ಗೆ ಖಡಕ್‌ ಸಂದೇಶ: ಸರ್ಕಾರ ಉಳಿಸಿಕೊಳ್ಳಲು ಕೊನೇ ಪ್ರಯತ್ನವಾಗಿ ಎರಡೂ ಪಕ್ಷಗಳು ಮುಂದಾಗಿದ್ದು ಮುಂಬೈನಲ್ಲಿರುವ ಅತೃಪ್ತ ಶಾಸಕರು ಮನವೊಲಿಕೆ ಸಾಧ್ಯವಾಗಿದ್ದರೆ ಅಂತಿಮವಾಗಿ ಸಿಎಂ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆ ಕೊಡು ವುದು ಅನಿವಾರ್ಯ ವಾಗಬಹುದು. ಇದಕ್ಕಾಗಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಇಬ್ಬರೂ ಕಾಂಗ್ರೆಸ್‌ ಹೈಕಮಾಂಡ್‌ಗೆ ಖಡಕ್‌ ಸಂದೇಶ ಸಹ ರವಾನಿಸಿ, ಮುಂಬೈನಲ್ಲಿರುವ ಕಾಂಗ್ರೆಸ್‌ ಶಾಸಕರನ್ನು ಕರೆಸುವ ಹೊಣೆ ನಿಮ್ಮದು, ನಮ್ಮ ಶಾಸಕರ ಕರೆಸುವ ಜವಾಬ್ದಾರಿ ನಮ್ಮದು. ಇಲ್ಲದಿದ್ದರೆ ನಮ್ಮ ದಾರಿ ನಮಗೆ ಎಂದೇ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

-ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.