ಶಾಲಾಭಿವೃದ್ಧಿ , ವಿನೂತನ ಆವಿಷ್ಕಾರಕ್ಕಾಗಿ ಆದರ್ಶ ಶಿಕ್ಷಕ


Team Udayavani, Feb 27, 2020, 6:45 AM IST

suresh-kumar

ಬೆಂಗಳೂರು: ಶಾಲಾ ಶಿಕ್ಷಣ ಗುಣಮಟ್ಟ ಸುಧಾರಣೆ ಮತ್ತು ಬೋಧನಾ ವಿಧಾನಗಳನ್ನು ಉನ್ನತಿಗೇರಿಸುವುದಕ್ಕಾಗಿ “ಆದರ್ಶ ಶಿಕ್ಷಕ’ ಪರಿಕಲ್ಪನೆಯನ್ನು ಸದ್ಯದಲ್ಲೇ ಜಾರಿಗೆ ತರಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯಂದು ಪ್ರಾಥಮಿಕ, ಪ್ರೌಢಶಾಲಾ ವಿಭಾಗದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಲಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಇದರ ಬದಲಿಗೆ ಆದರ್ಶ ಶಿಕ್ಷಕ ಅಥವಾ ಉತ್ತಮ ಶಿಕ್ಷಕರ ಆದರ್ಶವನ್ನೇ ಜನಪ್ರಿಯ ಗೊಳಿಸುವ ಯೋಜನೆಯನ್ನು ಇಲಾಖೆ ಸಿದ್ಧಪಡಿಸಿದೆ. ಬಜೆಟ್‌ನಲ್ಲಿ ಇದು ಘೋಷಣೆಯಾಗುವ ಸಾಧ್ಯತೆಯಿದೆ. ಈ ಪರಿಕಲ್ಪನೆಗೆ ತಗಲಬಹುದಾದ ವೆಚ್ಚದ ಮಾಹಿತಿಯನ್ನು ಹಣಕಾಸು ಇಲಾಖೆಗೆ ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉನ್ನತ ಮೂಲಗಳು “ಉದಯವಾಣಿ’ಗೆ ಖಚಿತ ಪಡಿಸಿವೆ.

ಸರಕಾರ ಅಥವಾ ಹಣಕಾಸು ಇಲಾಖೆಯ ಅನುಮೋದನೆ ದೊರೆತರೆ 2020-21ನೇ ಶೈಕ್ಷಣಿಕ ವರ್ಷದಿಂದಲೇ ಈ ಯೋಜನೆ ಜಾರಿಗೆ ಬರುವ ಸಾಧ್ಯತೆಗಳಿವೆ. ಆದರ್ಶ ಶಿಕ್ಷಕರ ಗುರುತಿಸುವಿಕೆ ಮತ್ತು ಅವರಿಂದ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಹೇಗೆ ಸುಧಾರಿಸಬಹುದು ಎಂಬಿತ್ಯಾದಿ ಅಂಶಗಳನ್ನು ಇಲಾಖೆಯಿಂದ ಕ್ರೋಡೀಕರಿಸಲಾಗಿದೆ. ಯೋಜನೆಯ ನಿರ್ವಹಣೆ ಮತ್ತು ಆದರ್ಶ ಶಿಕ್ಷಕರನ್ನು ಗುರುತಿಸುವಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಉಪನಿರ್ದೇಶಕರ ಪಾತ್ರ ಮುಖ್ಯವಾಗಿರುತ್ತದೆ ಎಂದು ಅಧಿಕಾರಿಯೊಬ್ಬರು ವಿವರ ನೀಡಿದರು.

ಬಯಸಿದ ಶಾಲೆಗೆ ವರ್ಗ
ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರಿಗೆ ಅವರು ಬಯಸಿದ ಶಾಲೆಗೆ ವರ್ಗಾವಣೆ ಅವಕಾಶ ಒದಗಿಸುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ. ಆದರ್ಶ ಶಿಕ್ಷಕರು ಅಳವಡಿಸಿಕೊಂಡಿರುವ ಹೊಸ ಉಪಕ್ರಮಗಳ ಬಗ್ಗೆ ಇತರ ಶಾಲಾ ಶಿಕ್ಷಕರಿಗೆ ತರಬೇತಿ ಸಂದರ್ಭದಲ್ಲಿ ಮಾಹಿತಿ ನೀಡುವ ಬಗ್ಗೆಯೂ ಯೋಚನೆ ನಡೆಯುತ್ತಿದೆ. ಶಿಕ್ಷಕರು ಬೋಧನೆಯಲ್ಲಿ ಉತ್ತಮರಾದರೆ ಸಾಲದು, ಆದರ್ಶವೂ ಇರಬೇಕು. ಆದರ್ಶ ಹೊಂದಿರುವ ಶಿಕ್ಷಕ ಶ್ರೇಷ್ಠ ಶಿಕ್ಷಕನಾಗಬಲ್ಲ ಎಂಬ ಸದುದ್ದೇಶದಿಂದ ಈ ಹೊಸ ಪರಿಕಲ್ಪನೆ ಯನ್ನು ಶಿಕ್ಷಣ ಇಲಾಖೆ ರೂಪಿಸಿ, ಕಾರ್ಯರೂಪಕ್ಕೆ ತರಲು ಸಿದ್ಧತೆ ಮಾಡಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಕಲಿಕೆ ಮತ್ತು ಬೋಧನೆಯನ್ನು ಉನ್ನತ ಮಟ್ಟಕ್ಕೇರಿಸುವ ಪ್ರಯತ್ನ ಇದು ಎಂದು ಇಲಾಖೆಯ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಪುಸ್ತಕ ರೂಪದಲ್ಲಿ ಪ್ರಕಟನೆ
ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಬಂದಿರುವ ಶಿಕ್ಷಕರ ಸಹಿತವಾಗಿ ಮುಂದಿನ ದಿನಗಳಲ್ಲಿ ಗುರುತಿಸಲಾಗುವ ಆದರ್ಶ ಶಿಕ್ಷಕರ ನವೀನ ಕ್ರಮಗಳನ್ನು ಪುಸ್ತಕ ರೂಪದಲ್ಲಿ ಇಲಾಖೆಯಿಂದ ಹೊರತರಲಾಗುತ್ತದೆ. ಅದನ್ನು ಶಿಕ್ಷಕರಿಗೆ ತರಬೇತಿ ಸಂದರ್ಭದಲ್ಲಿ ನೀಡಲಾಗುತ್ತದೆ. ಆದರ್ಶ ಶಿಕ್ಷಕರಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಶಾಲೆಗಳ ಅಭಿವೃದ್ಧಿ ಮತ್ತು ಹೊಸ ಪ್ರಯತ್ನಗಳಿಗೆ ಉತ್ತೇಜನ ನೀಡಲಾಗುತ್ತದೆ.

ಮಾನದಂಡಗಳೇನು?
– ಸರಳ ಬೋಧನಾ ವಿಧಾನದಲ್ಲಿ ಹೊಸ ಆವಿಷ್ಕಾರ
– ಮಕ್ಕಳಿಗೆ ಅರ್ಥವಾಗುವಂತೆ ವಿನೂತನವಾಗಿ ಶಿಕ್ಷಣ
– ಶಾಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಣೆಯಲ್ಲಿ ಸೃಜನಶೀಲತೆ
– ಸಮಾಜದ ಒಳಗೊಳ್ಳುವಿಕೆ ಯೊಂದಿಗೆ ಶಾಲೆಯ ಸಮಗ್ರ ಅಭಿವೃದ್ಧಿಗೆ ಶ್ರಮ
– ಸ್ವತಃ ಆದರ್ಶ ಗುಣ ಹೊಂದಿದ್ದು, ವಿದ್ಯಾರ್ಥಿಗಳಲ್ಲೂ ಅದನ್ನು ರೂಪಿಸುವುದು
– ಶಿಕ್ಷಕನ ಆದರ್ಶದಿಂದ ಶಾಲೆ, ವಿದ್ಯಾರ್ಥಿಗಳಲ್ಲಿ ಆಗಿರುವ ಸಕಾರಾತ್ಮಕ ಪರಿವರ್ತನೆ

ಆದರ್ಶ ಶಿಕ್ಷಕ ಪರಿಕಲ್ಪನೆ ಸಿದ್ಧವಾಗಿದೆ. ಆದರೆ ಕಾರ್ಯರೂಪಕ್ಕೆ ತರಲು ಹಣಕಾಸು ಇಲಾಖೆಯ ಅನುಮೋದನೆ ಅಗತ್ಯ. ಕಲಿಕಾ ಆದರ್ಶ ಮತ್ತು ವೈಯಕ್ತಿಕ ಆದರ್ಶ ಎರಡೂ ಶಿಕ್ಷಕರಿಗೆ ಅತಿ ಮುಖ್ಯ.
-ಎಸ್‌. ಸುರೇಶ್‌ ಕುಮಾರ್‌, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.