ಕಡಿಮೆ ಸ್ಥಾನ ಇರೋದು ನಿಜ, ಕಾಂಗ್ರೆಸ್ ಅವ್ರ ದಾರಿ ಅವ್ರು ನೋಡಿಕೊಳ್ಳಲಿ!: ಜೆಡಿಎಸ್
Team Udayavani, May 13, 2019, 11:40 AM IST
ಬೆಂಗಳೂರು:ಎರಡೂ ಪಕ್ಷಗಳಿಗಿಂತ ನಮಗೆ ಕಡಿಮೆ ಸ್ಥಾನ ಇರೋದು ನಿಜ. ಆದರೆ ಅಧಿಕಾರಕ್ಕಾಗಿ ನಾವು ಯಾರ ಮನೆ ಬಾಗಿಲಿಗೂ ಹೋಗಿರಲಿಲ್ಲ. ಹೀಗಾಗಿ ಕಾಂಗ್ರೆಸ್ ಅವ್ರ ದಾರಿ ಅವ್ರು ನೋಡಿಕೊಳ್ಳಲಿ ಎಂದು ಜೆಡಿಎಸ್ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.
ಅಹಿಂದ ಮಾಡಿದ್ದಕ್ಕಾಗಿ ಜೆಡಿಎಸ್ ನಿಂದ ತನ್ನನ್ನು ಉಚ್ಚಾಟಿಸಲಾಯಿತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೇ, ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಗೆ ಸೇರಿಸಿ ಮುಖ್ಯಮಂತ್ರಿಯಾಗುವಂತಹ ವಾತಾವರಣವನ್ನು ನಿರ್ಮಿಸಿದವರೇ ನಾವು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿಕೆ ನೀಡುವ ಮೂಲಕ ವಾಕ್ಸಮರ ತಾರಕಕ್ಕೇರಿದೆ.
ಇದೀಗ ಸೋಮವಾರವೂ ವಿಶ್ವನಾಥ್ ಅವರು ಸಿದ್ದರಾಮಯ್ಯನವರಿಗೆ ಮತ್ತೆ ತಿರುಗೇಟು ನೀಡಿದ್ದಾರೆ. ಏತನ್ಮಧ್ಯೆ ಜೆಡಿಎಸ್ ಮುಖಂಡ ಕುಪೇಂದ್ರ ರೆಡ್ಡಿ ಅವರ ಹೇಳಿಕೆ ಮೈತ್ರಿ ಸರ್ಕಾರದ ಒಳಜಗಳಕ್ಕೆ ಮತ್ತಷ್ಟು ಬಿರುಸು ನೀಡಿದೆ.
ಬಿಜೆಪಿ, ಕಾಂಗ್ರೆಸ್ ಪಕ್ಷಕ್ಕಿಂತ ಜೆಡಿಎಸ್ ಕಡಿಮೆ ಸ್ಥಾನ ಪಡೆದಿದ್ದು ಸತ್ಯ. ಕಾಂಗ್ರೆಸ್ ಪಕ್ಷದವರೇ ನಮ್ಮ ಮನೆ ಬಾಗಿಲಿಗೆ ಬಂದಿದ್ದು, ನವದೆಹಲಿಯಲ್ಲಿ ಗುಲಾಂ ನಬಿ ಆಜಾದ್ ಅವರ ಮನೆಯಲ್ಲಿ ನಡೆದ ಮಾತುಕತೆಯಲ್ಲಿ ಸಿಎಂ ಸ್ಥಾನ ಕೊಡುವ ಬಗ್ಗೆ ಅವರೇ ತೀರ್ಮಾನಿಸಿದ್ದು, ಹೀಗಾಗಿ ಅನಾವಶ್ಯಕವಾಗಿ ಸಿಎಂ ಬಗ್ಗೆ ಹಾದಿಬೀದಿಯಲ್ಲಿ ಮಾತನಾಡಬಾರದು. ಒಂದು ವೇಳೆ ಅವರಿಗೆ ಕಷ್ಟವಾದರೆ ಕಾಂಗ್ರೆಸ್ ಪಕ್ಷ ಅವರ ದಾರಿಯನ್ನು ನೋಡಿಕೊಳ್ಳಲಿ ಎಂದು ತೀಕ್ಷ್ಣ ಸಂದೇಶವನ್ನು ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ