ರಾಜಕೀಯ ಅಗ್ನಿ ಪರೀಕ್ಷೆ ನಡುವೆ ಎಂಡಿ ಪರೀಕ್ಷೆ ಬರೆದ ಡಾ| ಅವಿನಾಶ ಜಾಧವ
Team Udayavani, May 9, 2019, 3:07 AM IST
ಕಲಬುರಗಿ: ಚಿಂಚೋಳಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಅವಿನಾಶ ಜಾಧವ ಬುಧವಾರ ಬಿರುಸಿನ ಪ್ರಚಾರದ ನಡುವೆಯೂ ಎಂ.ಡಿ ಪರೀಕ್ಷೆಗೆ ಹಾಜರಾದರು.
ಎಂಬಿಬಿಎಸ್ ಪದವಿ ಪೂರೈಸಿರುವ ಡಾ| ಅವಿನಾಶ, ನಗರದ ಹೈದ್ರಾಬಾದ್-ಕರ್ನಾಟಕ ಶಿಕ್ಷಣ ಸಂಸ್ಥೆಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದಲ್ಲಿನ ಪರೀಕ್ಷಾ ಕೇಂದ್ರಕ್ಕೆ ಬೆಳಗ್ಗೆ 9 ಗಂಟೆಗೆ ಹಾಜರಾಗಿ ಎಂ.ಡಿ (ಮೆಡಿಸನ್) ವ್ಯಾಸಂಗ ಮುಂದುವರಿಸಲು ಪರೀಕ್ಷೆ ಬರೆದರು.
ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಬಂದ ಸಹಪಾಠಿಗಳೊಂದಿಗೆ ಕೆಲ ಕಾಲ ಬೆರೆತರು. ಕಾಲೇಜು ಬ್ಯಾಗ್ನೊಂದಿಗೆ ಬಂದ ಅವರು, ಪ್ರವೇಶ ಪತ್ರ ತೋರಿಸಿ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸಿದರು. ಭದ್ರತಾ ಸಿಬ್ಬಂದಿ ಅವರನ್ನು ಪರಿಶೀಲಿಸಿ ಒಳಬಿಟ್ಟರು.
ಪರೀಕ್ಷೆ ಬರೆದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಡಾ| ಅವಿನಾಶ ಜಾಧವ, ಚುನಾವಣಾ ಒತ್ತಡದ ನಡುವೆಯೂ ಪರೀಕ್ಷೆ ಬರೆದಿದ್ದೇನೆ. ಇನ್ನೂ ಮೂರು ಪೇಪರ್ಗಳು ಬಾಕಿ ಇವೆ.
ಆದರೆ, ಅವುಗಳಿಗೆ ಹಾಜರಾಗಲು ಆಗೋಲ್ಲ. ಮುಂದೆ ಉಳಿದ ಮೂರು ಪೇಪರ್ಗಳನ್ನು ಬರೆಯುತ್ತೇನೆ. ಲೋಕಸಭೆ-ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿದ್ದರಿಂದ ಸರಿಯಾಗಿ ಓದಲು ಆಗಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ