ಸದನದಲ್ಲೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಿತ್ತು: ಕಾಗೇರಿ
ಜವಾಬ್ದಾರಿಯ ಅರಿವು ಇದ್ದವರಿಂದಲೇ ಸಮಸ್ಯೆಯಾಗಿದ್ದು ನೋವಿನ ಸಂಗತಿ
Team Udayavani, Feb 24, 2022, 6:40 AM IST
ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಸಮಸ್ಯೆ ಇದ್ದರೂ ಸದನದಲ್ಲೇ ಪರಿಹಾರ ಕಂಡುಕೊಳ್ಳಬಹುದಿತ್ತು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ನಡೆದ ವಿದ್ಯಮಾನಗಳ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು. ಸದನ ಮೊಟಕುಗೊಳಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ನನಗೂ ಅತ್ಯಂತ ನೋವು ತರಿಸಿದೆ ಎಂದರು.
ಜವಾಬ್ದಾರಿಯ ಅರಿವು ಸದನದಲ್ಲಿ ಇದ್ದವರಿಗೂ, ಧರಣಿಯಲ್ಲಿ ಪಾಲ್ಗೊಂಡವರಿಗೂ ಇದೆ.ಆದರೂ ಸದನದಲ್ಲಿ ನಿತ್ಯ ಗದ್ದಲ-ಕೋಲಾಹದ ವಾತಾವರಣ ನಿರ್ಮಾಣವಾಯಿತು. ಐದಾರು ಬಾರಿ ಸೌಹಾರ್ದ ವಾತಾವರಣ ನಿರ್ಮಿಸಿ ಸದನ ಉತ್ತಮವಾಗಿ ನಡೆಸಲು ಪ್ರಯತ್ನಿಸಿದ್ದೇನೆ. ಸದನದಲ್ಲೂ ಮನವಿ ಮಾಡಿದೆ. ಆದರೂ ಪ್ರಯೋಜನವಾಗಲಿಲ್ಲ ಎಂದು ತಿಳಿಸಿದರು.
ತೀವ್ರ ಕ್ರಮ ಕೈಗೊಳ್ಳಲು ನನಗೆ ಕಾನೂನಿನ ಚೌಕಟ್ಟಿನಲ್ಲಿ ಎಲ್ಲ ಅಧಿಕಾರ ಇದೆ. ಅಂತಹ ದಿನಗಳು ಬಾರದೆ ಇರಲಿ ಎಂದೇ ನಾನು ಭಾವಿಸುತ್ತೇನೆ. ಯಾಕೆಂದರೆ, ಎಲ್ಲರಿಗೂ ಅವರವರ ಜವಾಬ್ದಾರಿಯ ಅರಿವಿದೆ ಎಂದರು.
ಇದನ್ನೂ ಓದಿ:ಮಾರ್ಚ್ 1ರಿಂದ ನಂದಿಯಲ್ಲಿ ರಾಜ್ಯ ಮಟ್ಟದ ಶಿವೋತ್ಸವ ಕಾರ್ಯಕ್ರಮ : ಸಚಿವ ಡಾ.ಕೆ.ಸುಧಾಕರ್
ಅಮೃತ ಮಹೋತ್ಸವದ ಸಂದರ್ಭದಲ್ಲಿ ಸಂಸದೀಯ ವ್ಯವಸ್ಥೆಯನ್ನು ಎತ್ತಿ ಹಿಡಿಬೇಕು. ವ್ಯವಸ್ಥೆ ಶಿಥಿಲವಾಗಬಾರದು. ಭಿನ್ನಾಭಿಪ್ರಾಯ ಏನೇ ಇದ್ದರೂ ಜನರ ಅಂಗಳದಲ್ಲಿ ತೀರ್ಮಾನ ಆಗಲಿ ಎಂದು ತಿಳಿಸಿದರು.
ಚುನಾವಣ ವ್ಯವಸ್ಥೆ ಸುಧಾರಣೆ ಕುರಿತು ಮಾ.4ರಿಂದ ನಡೆಯಲಿರುವ ಬಜೆಟ್ ಅಧಿವೇಶನ ಸಂದರ್ಭದಲ್ಲಿ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸುತ್ತೇವೆ ಎಂದು ತಿಳಿಸಿದರು.
ಸಮಾಜದ ವಾತಾವರಣವನ್ನು ನಾವೆಲ್ಲರೂ ಪ್ರಬುದ್ಧತೆ ಹಾಗೂ ಉತ್ತಮ ಸಂಸ್ಕಾರಯುತವಾಗಿ ಬೆಳೆಸಬೇಕಿದೆ. ಸದನದ ಒಳಗೆ, ಹೊರಗೆ ಆಡುವ ಮಾತುಗಳು ಸಮಾಜದಲ್ಲಿ ಸಾಮರಸ್ಯ ಮೂಡುವಂತೆ ಇರಬೇಕು ಎಂದು ಹೇಳಿದರು.
ಮಾತನಾಡುವ ಸ್ವಾತಂತ್ರ ಇದೆ ಎಂದು ಇತ್ತೀಚಿನ ದಿನಗಳಲ್ಲಿ ವಿವಾದ ಸೃಷ್ಟಿಸಿಕೊಂಡು ನಾಯಕತ್ವ ಬೆಳೆಸಿಕೊಳ್ಳುವ ಮಾನಸಿಕತೆ ನಿರ್ಮಾಣ ಆಗಿದೆ. ಇದು ಸಮಾಜಕ್ಕೆ ಉಪಯುಕ್ತ ಕೊಡುಗೆ ಅಲ್ಲ. ಸಮಾಜದ ಸಾಮರಸ್ಯ ಕದಡುತ್ತೆ ಎನ್ನುವ ಸಂದರ್ಭದಲ್ಲಿ ವೈಭವೀಕರಣ ಬೇಡ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ