ಫಲಿತಾಂಶ ಕಂಡು ದಿಗ್ಭ್ರಮೆ ಆಗಿದೆ, ಜಿಂದಾಲ್ ಗೆ ಜಮೀನು ಮಾರಾಟ ಸರಿ: ಡಿಕೆಶಿ
Team Udayavani, May 28, 2019, 1:37 PM IST
ಬೆಂಗಳೂರು:ಲೋಕಸಭೆ ಚುನಾವಣೆಯ ಫಲಿತಾಂಶ ನೋಡಿ ದಿಗ್ಭ್ರಮೆ ಆಗಿದೆ. ನನಗೆ ನಂಬಲಿಕ್ಕೂ ಸಾಧ್ಯವಾಗುತ್ತಿಲ್ಲ. ಎಲ್ಲಿ ತಪ್ಪಾಗಿದೆ ಅಂತ ಗೊತ್ತಾಗುತ್ತಿಲ್ಲ.ಈ ಬಗ್ಗೆ ವಿಮರ್ಶೆ ನಡೆಸಬೇಕಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ವಿದೇಶದಿಂದ ವಾಪಸ್ ಆದ ಬಳಿಕ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಹೋದರ ಸುರೇಶ್ ಗೆದ್ದ ಬಗ್ಗೆಯೂ ಸಂತಸ ಇಲ್ಲ. ಸುರೇಶ್ ಒಬ್ಬ ಲೋಕಸಭೆಯಲ್ಲಿ ಏನು ಮಾತನಾಡಲು ಸಾಧ್ಯ? ಖರ್ಗೆ, ದೇವೇಗೌಡರು, ವೀರಪ್ಪ ಮೊಯ್ಲಿ, ಮುನಿಯಪ್ಪನಂತಹವರು ಸೋತಿದ್ದು ಆತಂಕ ಮೂಡಿಸಿದೆ. ಇಂತಹ ಫಲಿತಾಂಶ ರಾಜ್ಯಕ್ಕೆ ಆಗಬಾರದಿತ್ತು ಎಂದರು.
ಮೈತ್ರಿ ಧರ್ಮ ಪಾಲನೆ ಬಗ್ಗೆ ಈಗಲೂ ಮಾತನಾಡಬಾರದು. ನಾಯಕರು ನನ್ನ ಬಾಯಿಗೆ ಬೀಗ ಹಾಕಿಕೊಳ್ಳಲು ಹೇಳಿದ್ದಾರೆ. ನಾನು ಯಾರ ವಿರುದ್ಧವೂ ಈಗ ಮಾತನಾಡುವುದಿಲ್ಲ. ಬಿಎಸ್ ಯಡಿಯೂರಪ್ಪನವರ ಕೈಯಲ್ಲೇ ಎಲ್ಲವೂ ಇದೆ ಎಂದು ಪ್ರತಿಕ್ರಿಯೆ ನೀಡಿದರು.
ಜಿಂದಾಲ್ ಗೆ ಜಮೀನು ಮಾರಾಟ ಸರಿ: ಡಿಕೆಶಿ
ಜಿಂದಾಲ್ ಕಂಪನಿಗೆ ಜಮೀನು ಮಾರಾಟ ಮಾಡಿದ್ದು ಸರಿ ಎಂದು ಸಚಿವ ಡಿಕೆ ಶಿವಕುಮಾರ್ ಮೈತ್ರಿ ಸರ್ಕಾರದ ನಿರ್ಣಾಯವನ್ನು ಸಮರ್ಥಿಸಿಕೊಂಡರು. ಇನ್ಫೋಸಿಸ್ ಗೆ ಭೂಮಿ ಕೊಟ್ಟಾಗಲೂ ಆಕ್ಷೇಪವಿತ್ತು. ಉದ್ಯೋಗ ಸೃಷ್ಟಿ, ಬಂಡವಾಳ ಹೂಡಿಕೆ, ಅಭಿವೃದ್ಧಿಗಾಗಿ ಇಂತಹ ನಿರ್ಣಯಗಳನ್ನು ಕೈಗೊಳ್ಳಬೇಕಾಗುತ್ತದೆ. ಹಿಂದಿನ ಸರ್ಕಾರ ಒಪ್ಪಂದ ಮಾಡಿಕೊಂಡಿದ್ದು, ಇದೀಗ ಮೈತ್ರಿ ಸರ್ಕಾರದ ಸಂಪುಟ ಅನುಮೋದನೆ ನೀಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ