ಇಟಲಿಯಲ್ಲಿ ಸುಧಾರಣೆಯ ಗಾಳಿ: ಸೋಂಕಿತರ ಸಂಖ್ಯೆ ಇಳಿಮುಖ


Team Udayavani, Apr 4, 2020, 10:35 AM IST

ಇಟಲಿಯಲ್ಲಿ  ಸುಧಾರಣೆಯ ಗಾಳಿ ಸೋಂಕಿತರ ಸಂಖ್ಯೆ ಇಳಿಮುಖ

ಸಾಂದರ್ಭಿಕ ಚಿತ್ರ

ಟುರಿನ್‌ (ಇಟಲಿ): ಕೆಟ್ಟ ಮೇಲೆ ಬುದ್ಧಿ ಬಂದಿತು ಎನ್ನುವುದು ಕನ್ನಡದಲ್ಲಿ ಬಳಸುವ ನಾಣ್ಣುಡಿ. ಅದರಂತೆಯೆ ಇಟಲಿಯ ಕಥೆ. ಕೋವಿಡ್ 19 ಕಾಟದಿಂದ ಇಟಲಿ ಬಳಲಿರುವುದು ಹೊಸ ಸುದ್ದಿಯಲ್ಲ. ಆದರೆ ಹೊಸ ಸುದ್ದಿಯೆಂದರೆ, ಒಂದು ವಾರದಿಂದ ಇಟಲಿಯಲ್ಲಿ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆಯಲ್ಲಿ ಇಳಿಕೆ ಕಾಣಲು ಆರಂಭಿಸಿದೆ. ಇದು ವರೆಗೆ ಚೀನಕ್ಕಿಂತ ಹೆಚ್ಚು ಮಂದಿ ಇಟಲಿಯಲ್ಲಿ ಸತ್ತಿರುವುದು ನಿಜ. ಆದರೆ ಸದ್ಯ ಬಿಕ್ಕಟ್ಟನ್ನು ಪರಿಹಾರಿಸುವಲ್ಲಿ ಇಟಲಿ ತಕ್ಕ ಮಟ್ಟಿನ ಯಶಸ್ಸು ಕಾಣುತ್ತಿದ್ದು, ಪ್ರಾಥಮಿಕ ಹಂತದ ಸುಧಾರಣೆ ಕಾಣುತ್ತಿದೆ ಎಂದು ಆಲ್‌ ಜಜಿರಾ ವರದಿ ಮಾಡಿದೆ.

ಫಲಕೊಡುತ್ತಿದೆ ಲಾಕ್‌ಡೌನ್‌
ಇಟಲಿಯಲ್ಲಿ ಸೋಂಕು ಹರಡುವಿಕೆ ತಕ್ಕ ಮಟ್ಟಿಗೆ ನಿಯಂತ್ರಣಗೊಂಡಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಇಳಿಕೆಯಾಗಲಿದೆ ಎಂದು ಅಲ್ಲಿನ ವೈದ್ಯಕೀಯ ಅಧಿಕಾರಿಗಳು ಹೇಳಿದ್ದಾರೆ. ಮಾ.10ರಂದು ಜಾರಿ ಮಾಡಿದ ಲಾಕ್‌ಡೌನ್‌ ನಿಯಮ ಇಂದು ಫಲ ಕೊಡುತ್ತಿದ್ದು, ನಾವು ಮೊದಲೇ ಎಚ್ಚೆತ್ತುಕೊಂಡಿದ್ದರೆ ಮತ್ತಷ್ಟು ಜನ ರನ್ನು ಉಳಿಸಿಕೊಳ್ಳಬಹುದಿತ್ತು ಎಂದು ಅಧಿ ಕಾರಿಗಳು ಪಶ್ಚಾತ್ತಾಪ ಪಡುತ್ತಿದ್ದಾರೆ.

ಗುರುವಾರ ಒಂದೇ ದಿನ 760 ಮಂದಿ ಸತ್ತಿದ್ದು, ಒಟ್ಟಾರೆ ಸಾವಿನ ಪ್ರಮಾಣ 13,915ಕ್ಕೆ ತಲುಪಿತ್ತು. ಕಳೆದ 5 ದಿನಗಳಲ್ಲಿ ದಾಖಲಾದ ಪ್ರಕರಣ ಗಳಿಗೆ ಹೋಲಿಸಿದರೆ ಗುರುವಾರ 4,668 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಬುಧವಾರ ದಾಖಲಾದ ಪ್ರಕರಣಗಳ (4,782) ಸಂಖ್ಯೆಗೆ ಹೋಲಿಸಿದ್ದರೆ ಪೀಡಿತರ ಸಂಖ್ಯೆಯಲ್ಲಿ ಇಳಿಕೆ ಯಾಗಿದೆ. ಈ ಮೂಲಕ ಸೋಂಕು ಪೀಡಿತರ ಪ್ರಮಾಣ ಸ್ಥಿರತೆ ಕಾಣುತ್ತಿದೆ ಎಂದು ವರದಿಯಾಗಿದ್ದು, ಶೇ.5.6ರಷ್ಟಿದ ಸೋಂಕು ಹರಡುವಿಕೆಯ ಪ್ರಮಾಣ ಕನಿಷ್ಠ ಶೇ.4ರಷ್ಟಕ್ಕೆ ಇಳಿದೆ.

ತುಸು ಇಳಿಕೆ
ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಹೆಲ್ತ್‌ನ ಅಧ್ಯಕ್ಷ ಸಿಲ್ವಿಯೊ ಬ್ರೂಸಾಫೆರೊ ಈ ಕುರಿತು ಅಭಿಪ್ರಾಯವನ್ನು ಹಂಚಿಕೊಂಡಿದ್ದು, ದೇಶದಲ್ಲಿ ಹೇರಿದ ನಿರ್ಬಂಧಗಳು ಉತ್ತಮ ಫಲಕೊಡುತ್ತಿವೆ. ಮಾರ್ಚ್‌ 21 ರ ನಂತರ ಪ್ರಕರಣಗಳಲ್ಲಿ ಇಳಿಕೆ ಯಾಗಿದ್ದು, ಮತ್ತಷ್ಟು ಸಕಾರಾತ್ಮಕ ಬೆಳವಣಿಗೆಗೆ ನಾವು ಸಾಕ್ಷಿಯಾಗಲಿದ್ದೇವೆ ಎಂದಿದ್ದಾರೆ.

ಹೊಸ ಪ್ರಕರಣಗಳಿಲ್ಲ
ಮೂರು ವಾರ ಶ್ಮಶಾನ ಮೌನ ಮನೆ ಮಾಡಿದ ಇಟಲಿ ನಿಧಾನವಾಗಿ ಸಹಜ ಸ್ಥಿತಿಗೆ ಬರಲಿದೆ ಎಂಬ ಆಶಾವಾದ ಸ್ಥಳೀಯರದ್ದು. ಈ ಒಂದು ವಾರದಲ್ಲಿ ಕೆಲವು ಪ್ರದೇಶಗಳಲ್ಲಿ ತೀವ್ರ ನಿಗಾ ಘಟಕದಲ್ಲಿಯೂ ಸೋಂಕು ಪೀಡಿತರ ಸಂಖ್ಯೆ ಕಡಿಮೆಯಾಗಿದೆ. ಹೊಸ ಪ್ರಕರಣಗಳಿಲ್ಲ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.