ಯಡಿಯೂರಪ್ಪ ಸರ್ಕಾರ ಪೂರ್ಣಾವಧಿ ಆಡಳಿತ ನಡೆಸಬೇಕು : ಹೆಚ್ ಡಿಕೆ


Team Udayavani, Oct 26, 2019, 8:58 PM IST

hdk-1

ಬೆಳಗಾವಿ: ಸರಕಾರ ಉರುಳಿಸುವ ಆತುರ ನನಗಿಲ್ಲ. ಆದರೆ ನೆರೆ ಸಂತ್ರಸ್ತರ ಮತ್ತು ರಾಜ್ಯದ ಜನತೆ ಹಿತೃಷ್ಟಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರವನ್ನು   ಉಳಿಸಿಕೊಳ್ಳುವುದು ಮತ್ತು ಬಿಡುವುದು ನನ್ನ ಕೈಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳುವ ಮೂಲಕ ಮತ್ತೆ ಬಿಜೆಪಿ ಹಾಗೂ ಜೆಡಿ ಎಸ್ ಸಮ್ಮಿಶ್ರ ಸರ್ಕಾರದ ಸುಳಿವು ನೀಡಿದರು.

ಬೆಳಗಾವಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಸರ್ಕಾರ ಅಧಿಕಾರದಿಂದ ಕೆಳಗಿಳಿಸಿ ಚುನಾವಣೆಗೆ ಸಜ್ಜಾದರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸುವವರು ಯಾರು? ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆಗೆ ಹೋಗುವುದು ಸರಿಯಲ್ಲ. ಹಾಗಾಗಿ ಸದ್ಯ ಆಡಳಿತ ನಡೆಸುತ್ತಿರುವ ಯಡಿಯೂರಪ್ಪ ಸರ್ಕಾರ ಪೂರ್ಣಾವಧಿ ಆಡಳಿತ ನಡೆಸಬೇಕು ಎಂಬುದು ಜನತೆ ಪರವಾಗಿ ನಾನು ಆಶಿಸುತ್ತೇನೆ ಎಂದರು. ಆದರೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೊಸದಾಗಿ ಚುನಾವಣೆ ನಡೆಯುವ ಕನಸು ಕಾಣುತ್ತಿದ್ದಾರೆ. ಅದು ಕೇವಲ ಹಗಲು ಗನಸಾಗಲಿದೆ ಎಂದು ತಿರುಗೇಟು ನೀಡಿದರು.

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಚುನಾವಣೆ ನಡೆಸಲು ಸರ್ಕಾರವು ಚುನಾವಣೆ ಆಯೋಗಕ್ಕೆ 15 ಕೋಟಿ ರೂ. ನೀಡಬೇಕು. ಇನ್ನೂ 224 ಕ್ಷೇತ್ರಗಳಿಗೆ ಚುನಾವಣೆ ನಡೆಸಬೇಕಾದರೆ 240 ಕೋಟಿ ರೂ. ನೀಡಬೇಕು. ಇಂತಹ ನೆರೆ ಪರಿಸ್ಥಿತಿಯಲ್ಲಿ ಚುನಾವಣೆಗಳನ್ನು ನಡೆಸುವುದು ಅವಶ್ಯಕತೆ ಇಲ್ಲ. ಹಾಗಾಗಿ ಸರ್ಕಾರ ಉಳಿಸಿಕೊಳ್ಳುವುದು ಅಥವಾ ಬಿಡುವುದು ನನ್ನ ಕೈಯಲ್ಲಿದೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.

ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಲ್ಲಿನ ಚುನಾವಣೆ ಫಲಿತಾಂಶ ಮತ್ತು ರಾಜ್ಯದಲ್ಲಿ ಪರಿಸ್ಥಿತಿಗಳನ್ನು ಅವಲೋಕಿಸಿದರೆ ಉಪ ಚುನಾವಣೆ ಮುಂದೂಡುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಉಪ ಚುನಾವಣೆ ನಡೆದರೆ ಎಲ್ಲ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಕುಮಾರಸ್ವಾಮಿ ಹೇಳಿದರು. ಯಡಿಯೂರಪ್ಪ ಸರ್ಕಾರಕ್ಕೆ ಬೆಂಬಲ ನೀಡಬೇಕು ಅಥವಾ ಬಿಡಬೇಕು ಎಂಬುದರ ಕುರಿತು ಉಪ ಚುನಾವಣೆ ಫಲಿತಾಂಶದ ಬಳಿಕ ನಿರ್ಧಾರ ಪ್ರಕಟಿಸಲಾಗುವುದು ಎಂದರು

ಕಾಂಗ್ರೆಸ ಪಕ್ಷದ ಮುಖಂಡರು ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಹಗಲು ಗನಸು ಕಾಣುತ್ತಿದ್ದಾರೆ. ಅಷ್ಟೇ ಅಲ್ಲದೆ ಅಧಿಕಾರದ ಆಸೆಗಾಗಿ ಪಾದಯಾತ್ರೆ ನಡೆಸಲು ಸಜ್ಜಾಗುತ್ತಿದ್ದಾರೆ. ಸಿದ್ದರಾಮಯ್ಯ ತಮ್ಮ 5 ವರ್ಷದ ಅಧಿಕಾರದ ಅವಧಿಯಲ್ಲಿ ನೀರಾವರಿ ಇಲಾಖೆಗೆ ಏಕಾಏಕಿ 1.2 ಲಕ್ಷ ಕೋಟಿ ರೂ. ಕಾಮಗಾರಿಗೆ ಅನುಮತಿ ನೀಡಿದ್ದಾರೆ. ವಸತಿ ನಿಗಮಕ್ಕೆ 29 ಸಾವಿರ ಕೋಟಿ ರೂ. ನೀಡುವುದು ಬಾಕಿ ಉಳಿದಿದೆ. ಪುಕ್ಕಟೆ ಅಕ್ಕಿ ಯೋಜನೆಯ 800 ಕೋಟಿ ರೂ. ಬಾಕಿ ಹಣ ಕುಮಾರಸ್ವಾಮಿ ಭರಿಸಬೇಕಾಯಿತು. 22 ಸಾವಿರ ಕೋಟಿ ರೂ. ಲೋಕೋಪಯೋಗಿ ಇಲಾಖೆ ಕಾಮಗಾರಿಗೆ ಅನುಮೋದನೆ ನೀಡಿದ್ದು ಇವರ ಸಾಧನೆ ಎಂದು ಸಿದ್ದರಾಮಯ್ಯ ವಿರುದ್ಧ  ವಾಗ್ದಾಳಿ ನಡೆಸಿದರು.

ಕಬ್ಬಿನ ಬಿಲ್ ನೀಡದವರು ಸಾಹುಕಾರರೇ?
ಕಬ್ಬಿನ ಬಾಕಿ ಬಿಲ್ ನೀಡದವರು, ಜನರ ಸಮಸ್ಯೆಗಳಿಗೆ ಸ್ಪಂದಿಸದವರನ್ನು ಬೆಳಗಾವಿ ಜಿಲ್ಲೆಯ ಸಾಹುಕಾರರು ಎಂದು ಕೆಲ ಅಮಾಯಕರು ಹೇಳುತ್ತಿದ್ದಾರೆ. ಅವರೆಲ್ಲಾ ಯಾವ ರೀತಿ ಸಾಹುಕಾರ, ಹೇಗೆ ಸಾಹುಕಾರ ಆದರು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಎಂದು ಕುಮಾರಸ್ವಾಮಿ ಪರೋಕ್ಷವಾಗಿ ಜಾರಕಿಹೊಳಿ ಸಹೋದರರ ವಿರುದ್ಧ ಹರಿಹಾಯ್ದರು. ಕ್ಷೇತ್ರದಲ್ಲಿ ಸಾಧನೆ ಮಾಡದವರು ಬೆಟ್ಟದಲ್ಲಿ ಕಲ್ಲು ಹೊಡೆಯುವ ಸಾಹಸಕ್ಕೆ ಕೈ ಹಾಕಿದ್ದಾರೆ. ಹಾಗಾಗಿ ಗೋಕಾಕ ಕ್ಷೇತ್ರದ ಜನತೆ ಇದೀಗ ಒಳ್ಳೆಯ ಅವಕಾಶ ಬಂದಿದ್ದು, ಅದನ್ನು ಸದುಪಯೋಗ ಪಡಿಸಿಕೊಂಡು ಎರಡು ದಶಕಗಳಿಂದ ಎದುರಿಸುತ್ತಿರುವ ಸಮಸ್ಯೆಯಿಂದ ಮುಕ್ತಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.