ಇನ್ನೂ ಆಸ್ತಿ ವಿವರ ಸಲ್ಲಿಸದ 36 ಮಂದಿ ಶಾಸಕರು

ಲೋಕಾಯುಕ್ತ ನೋಟಿಸ್‌ ನೀಡಿ 20 ದಿನಗಳಾದರೂ ಉತ್ತರವೇ ನೀಡಿಲ್ಲ !

Team Udayavani, Nov 4, 2019, 5:45 AM IST

KAR-LOK

ಬೆಂಗಳೂರು: ಆಸ್ತಿ ವಿವರ ಸಲ್ಲಿಸಲು ಲೋಕಾಯುಕ್ತ ಗಡುವು ನೀಡಿ ಹತ್ತು ದಿನ ಕಳೆದರೂ ಹಲವು ಶಾಸಕರು ಇನ್ನೂ ಆಸ್ತಿ ವಿವರ ನೀಡದೆ ನಿರ್ಲಕ್ಷ್ಯ ಧೋರಣೆ ಮುಂದುವರಿಸಿದ್ದಾರೆ.

ಅ.13ರಂದು ಕರ್ನಾಟಕ ಲೋಕಾಯುಕ್ತ 43 ಶಾಸಕರು ಹಾಗೂ 26 ವಿಧಾನ ಪರಿಷತ್‌ ಸದಸ್ಯರಿಗೆ 10 ದಿನಗಳೊಳಗೆ ಆಸ್ತಿ ವಿವರ ಸಲ್ಲಿಸುವಂತೆ ಖಡಕ್‌ ಸೂಚನೆ ನೀಡಿತ್ತು. ಇಷ್ಟಾದರೂ 24 ಶಾಸಕರು ಹಾಗೂ 12 ವಿಧಾನ ಪರಿಷತ್‌ ಸದಸ್ಯರು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ನೀಡಿಲ್ಲ.

ನಿಗದಿತ ಸಮಯದಲ್ಲಿ ಆಸ್ತಿ ವಿವರ ಸಲ್ಲಿಸದ ಶಾಸಕರ ಪಟ್ಟಿ ಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿಯಿಂದ ತಲಾ 9 ಸದಸ್ಯರು, ಜೆಡಿಎಸ್‌ನಿಂದ ಮೂವರು, ಇಬ್ಬರು ಅನರ್ಹ ಶಾಸಕರು ಮತ್ತು ಬಿಎಸ್‌ಪಿ ಯಿಂದ ಉಚ್ಚಾಟಿತ ಶಾಸಕ ಎನ್‌. ಮಹೇಶ್‌ ಹೆಸರಿದೆ.

ಬಿಜೆಪಿಯಿಂದ ಎಂ.ಪಿ. ರೇಣುಕಾಚಾರ್ಯ, ಡಿ.ಎಸ್‌. ಹೊಲಗೇರಿ, ರೂಪಾಲಿ ಸಂತೋಷ್‌ , ದಿನಕರ್‌ ಕೇಶವ ಶೆಟ್ಟಿ , ಜಿ.ಬಿ. ಜ್ಯೋತಿಗಣೇಶ್‌, ಹರೀಶ್‌ ಪೂಂಜ, ಎಂ.ವೈ. ಪಾಟೀಲ್‌, ಸತೀಶ್‌ ರೆಡ್ಡಿ, ರಾಜಕುಮಾರ್‌ ಪಾಟೀಲ್‌ ಹೆಸರುಗಳಿವೆ. ಕಾಂಗ್ರೆಸ್‌ನಿಂದ ಜಮೀರ್‌ ಅಹ್ಮದ್‌ ಖಾನ್‌, ರಹೀಮ್‌ ಖಾನ್‌, ಬಿ. ನಾರಾಯಣ ರಾವ್‌, ಟಿ.ಡಿ. ರಾಜೇಗೌಡ, ವೆಂಕಟರಮಣಪ್ಪ , ರೂಪಕಲಾ, ಟಿ. ವೆಂಕಟರಮಣಯ್ಯ, ಕೆ.ವೈ. ನಂಜೇಗೌಡ, ಕುಸುಮಾವತಿ ಶಿವಳ್ಳಿ ಹೆಸರುಗಳಿವೆ.

ಜೆಡಿಎಸ್‌ನ ಸಿ.ಎನ್‌. ಬಾಲಕೃಷ್ಣ, ಎಂ. ಶ್ರೀನಿವಾಸ್‌, ಎಂ.ಸಿ. ಮನಗೂಳಿ ಹಾಗೂ ಅನರ್ಹಗೊಂಡಿರುವ ಶಾಸಕರಾದ ಅಡಗೂರು ಎಚ್‌. ವಿಶ್ವನಾಥ್‌ ಮತ್ತು ಆರ್‌. ಶಂಕರ್‌ ಹೆಸರುಗಳು ಪಟ್ಟಿಯಲ್ಲಿವೆ.

ವಿಧಾನ ಪರಿಷತ್‌ ಸದಸ್ಯರ ಪೈಕಿ ಕಾಂಗ್ರೆಸ್‌ನ 6 ಸದಸ್ಯರು, ಜೆಡಿಎಸ್‌ ಮತ್ತು ಬಿಜೆಪಿಯ ತಲಾ ಮೂವರ ಸಹಿತ ಒಟ್ಟು 12 ಸದಸ್ಯರು ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲ ಎಂದು ದಾಖಲೆಗಳು ಸ್ಪಷ್ಟಪಡಿಸಿವೆ. ಆಯನೂರು ಮಂಜುನಾಥ್‌, ಅಲ್ಲಂ ವೀರಭದ್ರಪ್ಪ, ತೇಜಸ್ವಿನಿ ಗೌಡ, ಕೆ.ಟಿ. ಶ್ರೀಕಂಠೇಗೌಡ, ಕಾಂತರಾಜು, ಎನ್‌.ಅಪ್ಪಾಜಿಗೌಡ, ಕೆ.ಪಿ. ನಂಜುಂಡಿ, ನಜೀರ್‌ ಅಹ್ಮದ್‌ , ಡಿ.ಯು.ಮಲ್ಲಿಕಾರ್ಜುನ, ಎಂ.ನಾರಾಯಣಸ್ವಾಮಿ, ಪಿ.ಆರ್‌. ರಮೇಶ್‌, ಸಿ.ಎಂ. ಇಬ್ರಾಹಿಂ ಹೆಸರುಗಳು ಪಟ್ಟಿಯಲ್ಲಿ ಕಾಣಿಸಿಕೊಂಡಿವೆ.

ಕ್ರಮ ಕೈಗೊಳ್ಳಲು ಅವಕಾಶವಿದೆ
ಪ್ರತಿವರ್ಷ ರಾಜ್ಯದ ಎಲ್ಲ ಶಾಸಕರು ಮತ್ತು ವಿಧಾನ ಪರಿಷತ್‌ ಸದಸ್ಯರು ತಮ್ಮ ಆಸ್ತಿ ವಿವರಗಳನ್ನು ಕಡ್ಡಾಯವಾಗಿ ಲೋಕಾಯುಕ್ತ ಕಚೇರಿಗೆ ಸಲ್ಲಿಸಬೇಕು. ಆದರೆ ಇತ್ತೀಚೆಗೆ ಹಲವರು ಆಸ್ತಿ ವಿವರ  ಗಳನ್ನು ಸಲ್ಲಿಸುತ್ತಿಲ್ಲ. ಈ ರೀತಿ ಕಾನೂನನ್ನು ಉಲ್ಲಂ ಸುವ ಜನ ಪ್ರತಿನಿಧಿ ಗಳ ವಿರುದ್ಧ ಕಾನೂನು ಕ್ರಮ ಜರಗಿಸುವ ಅವಕಾಶ ಲೋಕಾಯುಕ್ತ ಕ್ಕಿದೆ. ನನ್ನ ಅವಧಿಯಲ್ಲಿ ಆಸ್ತಿ ವಿವರ ಸಲ್ಲಿಸದ ಶಾಸಕರ ವಿರುದ್ಧ ಐಪಿಸಿ ಸೆಕ್ಷನ್‌ 176ರ ಅನ್ವಯ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದ್ದೆ. ಒಂದು ವೇಳೆ ತಪ್ಪು ಮಾಹಿತಿ ನೀಡಿದ್ದಲ್ಲಿ ಐಪಿಸಿ ಸೆಕ್ಷನ್‌ 177ರ ಅನ್ವಯ ಕ್ರಮ ಜರಗಿಸಬಹುದು.
– ನ್ಯಾ| ಸಂತೋಷ್‌ ಹೆಗ್ಡೆ , ನಿವೃತ್ತ ಲೋಕಾಯುಕ್ತ

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.