ಮಧ್ಯಂತರ ಚುನಾವಣೆ ಪ್ರಶ್ನೆಯೇ ಇಲ್ಲ: ಎ‍ಚ್ಡಿಡಿ


Team Udayavani, Jun 21, 2019, 5:55 AM IST

HD-Devegowda–727-A

ಬೆಂಗಳೂರು: ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ಪ್ರಶ್ನೆಯೇ ಇಲ್ಲ. ಸಮ್ಮಿಶ್ರ ಸರ್ಕಾರ ಪೂರ್ಣಾವಧಿ ಪೂರೈಸುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ನಗರ ಸ್ಥಳೀಯ ಸಂಸ್ಥೆ, ಮಹಾ ನಗರ ಪಾಲಿಕೆ, ಪಂಚಾ ಯತ್‌ ಚುನಾವಣೆ ಗಳಿಗೆ ಪಕ್ಷವನ್ನು ತಳ ಮಟ್ಟದಿಂದ ಸಂಘಟಿಸಲು ಗಮನಹರಿಸಲು ಹೇಳಿದ್ದೇನೆಯೇ ಹೊರತು ಮಧ್ಯಂತರ ಚುನಾ ವಣೆಗೆ ಸಿದ್ಧರಾಗಿ ಎಂದಿಲ್ಲ ಎಂದು ಹೇಳಿದರು.

ದೆಹಲಿಯಲ್ಲಿ ನಾನು ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿಯವರನ್ನು ಭೇಟಿಯಾದಾಗ ರಾಜ್ಯದ ಯಾವ ಕಾಂಗ್ರೆಸ್‌ ನಾಯಕರ ವಿರುದ್ಧವೂ ದೂರು ಹೇಳಿಲ್ಲ. ಸರ್ಕಾರ ಸುಸೂತ್ರವಾಗಿ ನಡೆಸಲು ಪಕ್ಷೇತರ ಶಾಸಕರಿಗೆ ಮಂತ್ರಿ ಮಾಡಲು ಜೆಡಿಎಸ್‌ನ ಒಂದು ಸ್ಥಾನ ಸಹ ಬಿಟ್ಟುಕೊಟ್ಟಿದ್ದೇವೆ.

ಇನ್ನಾದರೂ ಕಾಂಗ್ರೆಸ್‌ ನಾಯಕರು ಬಹಿರಂಗವಾಗಿ ಹೇಳಿಕೆ ನೀಡಿ ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರದಂತೆ ನೋಡಿಕೊಳ್ಳಿ ಎಂದಷ್ಟೇ ಹೇಳಿ ಬಂದೆ.

ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದರಿಂದ ಕಾಂಗ್ರೆಸ್‌ಗೆ ಸಮಸ್ಯೆಯಾಗಿದೆ ಎಂಬ ಮಾತುಗಳ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ಮೈತ್ರಿ ಸರ್ಕಾರ ರಚನೆಯಾಗಿದ್ದೇ ಕಾಂಗ್ರೆಸ್‌ ಒತ್ತಾಯದಿಂದ. ವಿಧಾನಸಭೆ ಚುನಾವಣೆ ಫ‌ಲಿತಾಂಶದ ನಂತರ ಸರ್ಕಾರ ರಚನೆ ಪ್ರಸ್ತಾಪ ಬಂದಾಗ ನಾನು ಹಿಂದಿನ ಕಹಿ ಅನುಭವ ಹೇಳಿ ಬೇಡ ಎಂದಿದ್ದೆ. ಆದರೆ, ಸೋನಿಯಾಗಾಂಧಿ, ರಾಹುಲ್ಗಾಂಧಿ, ಗುಲಾಂ ನಬಿ ಆಜಾದ್‌ ಅವರು ಚರ್ಚಿಸಿ ತೀರ್ಮಾನ ಕೈಗೊಂಡರು. ನಂತರ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಾ.ಪರಮೇಶ್ವರ್‌ ಅವರು ಸಮಾಲೋಚನೆ ನಡೆಸಿಯೇ ತೀರ್ಮಾನ ಕೈಗೊಂಡರು ಎಂದು ಹೇಳಿದರು.

ಗ್ರಾಮವಾಸ್ತವ್ಯ ಒಳ್ಳೆಯದು: ಮೈತ್ರಿ ಸರ್ಕಾರಕ್ಕೆ ತೊಂದರೆಯಾಗುವ ಯಾವುದೇ ಮಾತು ನಾನು ಆಡುವುದಿಲ್ಲ. ನಮ್ಮ ಪಕ್ಷದ ನಾಯಕರಿಗೂ ಹೇಳಿದ್ದೇನೆ. ಸರ್ಕಾರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ನೋಡಿಕೊಳ್ಳುತ್ತಾರೆ. ಗ್ರಾಮ ವಾಸ್ತವ್ಯ ಆರಂಭಿಸಲು ಮುಂದಾಗಿದ್ದಾರೆ. ಒಳ್ಳೆಯದು ಎಂದು ಹೇಳಿದ್ದೇನೆ. ಪಕ್ಷ ಸಂಘಟನೆ ನಾನು ಮಾಡುತ್ತೇನೆ ಎಂದು ತಿಳಿಸಿದರು.

ಶುಕ್ರವಾರ ನಗರದ ಅರಮನೆ ಮೈದಾನದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೋಲು ಅನುಭವಿಸಿದವರ ಸಮಾವೇಶ ಆಯೋಜಿಸಿದ್ದೇನೆ. ವಿಧಾನಸಭೆ ಚುನಾವಣೆಯಲ್ಲಿ ಸೋತವರನ್ನೂ ಆಹ್ವಾನಿಸಿದ್ದೇನೆ. ಇದು ದಿಢೀರ್‌ ನಿರ್ಧಾರವಲ್ಲ ಎಂದು ಹೇಳಿದರು. ಒಂದು ದೇಶ ಒಂದು ಚುನಾವಣೆ ವಿಚಾರದಲ್ಲಿ ರಾಷ್ಟ್ರೀಯ ಪಕ್ಷ ಹಾಗೂ ಪ್ರಾದೇಶಿಕ ಪಕ್ಷಗಳಲ್ಲಿ ಪರ-ವಿರೋಧ ಅಭಿಪ್ರಾಯವಿದೆ. ಅದು ತಕ್ಷಣಕ್ಕೆ ಆಗುವ ಕೆಲಸವೂ ಅಲ್ಲ. ಸಾಕಷ್ಟು ಚರ್ಚೆಗಳು ನಡೆಯಬೇಕು. ಮತದಾರರನ್ನು ಮಾನಸಿಕವಾಗಿ ಸಜ್ಜುಗೊಳಿಸಬೇಕು. ಹೀಗಾಗಿ, ಆ ಬಗ್ಗೆ ಆತುರದ ತೀರ್ಮಾನ ಸಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸಂಸತ್‌ ಭವನದಲ್ಲಿ ಜೈ ಶ್ರೀರಾಮ್‌ ಎಂಬ ಘೋಷಣೆ ಕುರಿತು ಪ್ರತಿಕ್ರಿಯಿಸಿ, ಅಯ್ಯೋ ನಾನು ಈಗ ಸಂಸದನೇ ಅಲ್ಲ. ಆ ಬಗ್ಗೆ ನನ್ನನ್ನು ಏಕೆ ಕೇಳ್ತೀರಿ? ನಾನು ಆ ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳುವುದೂ ಇಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.