ನನ್ನ ಹೇಳಿಕೆಗೆ ಉತ್ತರ ಕೊಡುವ ವ್ಯವಧಾನ ಸರಕಾರಕ್ಕೆ ಇಲ್ಲ: ವಿಶ್ವನಾಥ್ ಕಿಡಿ
ಸಿಎಂ ಈ ರೀತಿ ಮಾತಾಡಬಾರದು
Team Udayavani, Apr 8, 2022, 6:42 PM IST
ಮೈಸೂರು : ಪ್ರಸ್ತುತ ಜನ ತಂತ್ರ ವ್ಯವಸ್ಥೆಯಲ್ಲಿ ಜನರ ನಂಬಿಕೆಗಳು ಕುಸಿಯುತ್ತಿವೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆತಂಕ ವ್ಯಕ್ತಪಡಿಸಿದರು.
ಮೈಸೂರು ನಗರದ ಹೊರವಲಯದ ಹೂಟಗಳ್ಳಿಯಲ್ಲಿರುವ ಒಡನಾಡಿ ಸೇವಾ ಸಂಸ್ಥೆಯಲ್ಲಿ ಶುಕ್ರವಾರ ನಡೆದ ಪ್ರಸ್ತುತ ವಿದ್ಯಮಾನದಲ್ಲಿ ತೇಜಸ್ವಿ ಚಿಂತನೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತಿಚಿನ ದಿನಗಳಲ್ಲಿ ಸಮಾಜವನ್ನು ಒಡೆಯುವ ಕೆಲಸ ನಡೆಯುತ್ತಿದೆ. ಬೆಂಕಿ ಹಚ್ಚುವ ಕೆಲಸವಾಗುತ್ತಿದೆ. ಅಂತಹವರನ್ನು ಜೈಲಿಗೆ ಕಳುಹಿಸಬೇಕಿದೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ತೆರಿಗೆ ಪಾವತಿಸುವರು. ಯಾವುದೋ ಒಂದು ವರ್ಗ ಮಾತ್ರ ತೆರಿಗೆ ಪಾವತಿ ಮಾಡುತ್ತಿಲ್ಲ. ಆದ್ದರಿಂದ ಒಂದು ಸಮುದಾಯದ ಮೇಲೆ ವ್ಯಾಪಾರ ನಿರ್ಬಂಧ ಹೇರುವುದು ಸಲ್ಲದು ಎಂದರು.
ಸರಕಾರ ವ್ಯವಸ್ಥೆಯಲ್ಲಿ ಲೋಪ ದೋಷಗಳನ್ನು ಗುರುತಿಸಿ ಸರಿಪಡಿಸುವಂತೆ ನಾನು ಹಲವು ಸಲ ಒತ್ತಾಯಿಸಿದ್ದೇನೆ.ಆದರೆ, ವಿಶ್ವನಾಥ್ ಮಾತಿಗೆ ಬೆಲೆಕೊಡಬೇಕಿಲ್ಲ ಎಂದು ಕಡೆಗಣಿಸುವರು. ನನ್ನ ಹೇಳಿಕೆಗೆ ಉತ್ತರ ಕೊಡುವ ವ್ಯವಧಾನ ಸರಕಾರಕ್ಕೆ ಇಲ್ಲ. ನನ್ನದು ಒಂಟಿ ಧ್ವನಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಜನರನ್ನು ಗಲಭೆಗೆ ಪ್ರಚೋದಿಸುವವರು ಪ್ರಾಣ ಕಳೆದುಕೊಂಡ ಉದಾಹರಣೆಗಳಿಲ್ಲ. ಅವರು ಪ್ರಚೋದನೆ ಕೊಟ್ಟು ಸುರಕ್ಷಿತವಾಗಿ ಇರುವರು. ಗಲಭೆಯಲ್ಲಿ ತೊಡಗುವ ತಳಸಮುದಾಯದ ಅಥವಾ ಬಡ ಕುಟುಂಬದ ಯುವಕರು ಪ್ರಾಣ ಕಳೆದುಕೊಳ್ಳುವವರು. ಈ ಸತ್ಯವನ್ನು ಜನರು ಅರ್ಥಮಾಡಿಕೊಳ್ಳುತ್ತಿಲ್ಲ ಎಂದರು.
ಗುರುವಾರ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡುತ್ತಾ, ಸರಕಾರಗಳು ಮಾಡುವ ಕೆಲಸವನ್ನು ಸ್ವಾಮೀಜಿಗಳು ಮಾಡುತ್ತಾರೆ ಎಂದಿದ್ದಾರೆ. ಈ ರೀತಿಯ ಮಾತನ್ನಾಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿ, ಸ್ವಾಮೀಜಿಗಳು ಕೆಲಸ ಮಾಡುವುದು ಸರಕಾರ ನೀಡಿದ ಅನುದಾನದಿಂದ. ಸರಕಾರಗಳು ಮಠಗಳಿಗೆ ಹಣ ನೀಡುವ ಬದಲು, ಅದನ್ನು ಇತರ ಕಾರ್ಯಗಳಿಗೆ ಮೀಸಲಿಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ
Delhi Liquor Scam:ತಿಹಾರ್ ಜೈಲಿನೊಳಗೆ ಬಿಆರ್ ಎಸ್ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ
Liquor Policy Case: ಅರವಿಂದ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ
Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್ ಕದತಟ್ಟಿದ ಕೇಜ್ರಿವಾಲ್
MUST WATCH
ಹೊಸ ಸೇರ್ಪಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!