Election 2024: ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ
ಆಯುಕ್ತರಗಳ ವಿದುದ್ಶ ಯಾವುದೇ ಆರೋಪಗಳಿಲ್ಲ. ಚುನಾವಣೆಯೂ ಕೂಡಾ ಸನ್ನಿಹಿತವಾಗುತ್ತಿದೆ
Team Udayavani, Mar 21, 2024, 1:26 PM IST
ನವದೆಹಲಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ನಡುವೆಯೇ ಸುಪ್ರೀಂಕೋರ್ಟ್ ಗುರುವಾರ (ಮಾರ್ಚ್ 21), ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ ತಡೆ ನೀಡಲು ನಿರಾಕರಿಸಿದೆ. ಅಲ್ಲದೇ ಈ ಹಂತದಲ್ಲಿ ತಡೆ ನೀಡಿದರೆ ಅದು ಅವ್ಯವಸ್ಥೆಗೆ ಕಾರಣವಾಗಲಿದೆ ಎಂದು ಆದೇಶದಲ್ಲಿ ತಿಳಿಸಿದೆ.
ಇದನ್ನೈ ಓದಿ;Loksabha Election; ಕಾಂಗ್ರೆಸ್ ಸೇರುವುದಿಲ್ಲ, ಬಿಜೆಪಿ ಶುದ್ಧ ಮಾಡುತ್ತೇನೆ: ಸದಾನಂದ ಗೌಡ
ಕೇಂದ್ರ ಚುನಾವಣಾ ಆಯೋಗಕ್ಕೆ ನೂತನವಾಗಿ ಆಯ್ಕೆಯಾದ ಆಯುಕ್ತರ ಮೇಲೆ ಯಾವುದೇ ದೋಷಾರೋಪಗಳಿಲ್ಲ ಎಂಬುದನ್ನು ವಿಚಾರಣೆ ವೇಳೆ ಗಮನಿಸಿರುವುದಾಗಿ ಸುಪ್ರೀಂ ಪೀಠ ಹೇಳಿದೆ.
ಹೊಸ ಕಾಯ್ದೆಯಂತೆ ಆಯ್ಕೆ ಸಮಿತಿಯಲ್ಲಿ ಬದಲಾವಣೆ ಮಾಡಿದ ನಂತರ ಜ್ಞಾನೇಶ್ ಕುಮಾರ್ ಮತ್ತು ಸುಖ ಬೀರ್ ಸಿಂಗ್ ಸಂಧು ಅವರನ್ನು ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿತ್ತು.
ನೇಮಕಗೊಂಡ ಆಯುಕ್ತರಗಳ ವಿರುದ್ಶ ಯಾವುದೇ ಆರೋಪಗಳಿಲ್ಲ. ಚುನಾವಣೆಯೂ ಕೂಡಾ ಸನ್ನಿಹಿತವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸರಿದೂಗಿಸಿಕೊಂಡು ಹೋಗುವುದು ತುಂಬಾ ಮುಖ್ಯವಾದ ವಿಚಾರವಾಗಿದೆ ಎಂದು ತಿಳಿಸಿದೆ.
ಇತ್ತೀಚೆಗಷ್ಟೇ ನೂತನವಾಗಿ ರಚನೆಗೊಂಡಿದ್ದ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಲ್ಲಿ ಸಿಜೆಐ ಅವರನ್ನು ಕೈಬಿಡಲಾಗಿತ್ತು. ಸಮಿತಿಯಲ್ಲಿ ಪ್ರಧಾನಿ, ಕೇಂದ್ರ ಸಚಿವರು ಮತ್ತು ವಿಪಕ್ಷ ನಾಯಕರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ