ರಾಜ್ಯಕ್ಕೊಂದೇ ಶೈಕ್ಷಣಿಕ ಕ್ಯಾಲೆಂಡರ್ಗೆ ಚಿಂತನೆ
ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ಜಾರಿಗೆ ತರಲು ಸಿದ್ಧತೆ
Team Udayavani, May 7, 2020, 6:10 AM IST
ಬೆಂಗಳೂರು: ರಾಜ್ಯದ ಎಲ್ಲ ವಿಶ್ವ ವಿದ್ಯಾನಿಲಯಗಳಲ್ಲಿ ಏಕರೂಪ ಶೈಕ್ಷಣಿಕ ಕ್ಯಾಲೆಂಡರ್ ರೂಪಿಸಲು ಸರಕಾರ ಮುಂದಾಗಿದೆ.
ಕೋವಿಡ್- 19 ಭೀತಿಯಿಂದಾಗಿ ರಾಜ್ಯದ ವಿ.ವಿ. ಮತ್ತು ಪದವಿ, ಸ್ನಾತಕೋತ್ತರ ತರಗತಿಗಳು ಆನ್ಲೈನ್ ಮೂಲಕ ನಡೆಯುತ್ತಿವೆ. ಯಾವುದೇ ವಿ.ವಿ. ಈವರೆಗೂ ಪರೀಕ್ಷೆ ನಡೆಸಿಲ್ಲ. ಈ ಮಧ್ಯೆ ಯುಜಿಸಿಯು ಮುಂದಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ಸಲಹೆಯ ರೂಪದಲ್ಲಿ ನೀಡಿದೆ.
ರಾಜ್ಯ ಉನ್ನತ ಶಿಕ್ಷಣ ಪರಿಷತ್ ಪ್ರಸಕ್ತ ಸಾಲಿನ ಪರೀಕ್ಷೆ, ಮುಂದಿನ ಶೈಕ್ಷಣಿಕ ವರ್ಷದ ಆರಂಭ ಮತ್ತು ಶೈಕ್ಷಣಿಕ ವೇಳಾಪಟ್ಟಿ ಕುರಿತಾಗಿ ತಜ್ಞರಿಂದ ವರದಿ ಪಡೆದಿದೆ.ಯುಜಿಸಿ ಸೂಚಿಸಿರುವ ನಿಯಮಾವಳಿ ಅಳವಡಿಸಿ ಮುಂದಿನ ವರ್ಷದಿಂದ ಏಕ ರೂಪದ ಶೈಕ್ಷಣಿಕ ಕ್ಯಾಲೆಂಡರ್ ಜಾರಿಗೆ ತರುವ ಬಗ್ಗೆ ಸರಕಾರದ ಗಮನ ಸೆಳೆಯಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.
ಪ್ರಸ್ತುತ ಒಂದೊಂದು ವಿ.ವಿ. ಒಂದೊಂದು ರೀತಿಯ ಶೈಕ್ಷಣಿಕ ಕ್ಯಾಲೆಂಡರ್ ಹೊಂದಿವೆ. ಖಾಸಗಿ ಮತ್ತುಡೀಮ್ಡ್ ವಿ.ವಿ.ಗಳ ಕ್ಯಾಲೆಂಡರ್ ಪ್ರತ್ಯೇಕ ವಾಗಿದೆ. ರಾಜ್ಯದಲ್ಲಿ ಏಕರೂಪ ಶೈಕ್ಷಣಿಕ ಕ್ಯಾಲೆಂಡರ್ ಜಾರಿಗೆ ತರುವ ಬಗ್ಗೆ ಅನೇಕ ವರ್ಷಗಳಿಂದ ಪ್ರಯತ್ನ ನಡೆಯುತ್ತಿದೆ. ಆದರೆ ಈವರೆಗೂ ಅದು ಜಾರಿಗೆ ಬಂದಿಲ್ಲ. ಏಕರೂಪ ಶೈಕ್ಷಣಿಕ ಕ್ಯಾಲೆಂಡರ್ ಜಾರಿಗೆ ಇದು ಸಕಾಲ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಆನ್ಲೈನ್ ವ್ಯವಸ್ಥೆಗೆ ಒತ್ತು
ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಆನ್ಲೈನ್ ಬೋಧನೆಗೆ ಕೋವಿಡ್- 19 ರಜೆ ವೇಗ ನೀಡಿದೆ. ಇದನ್ನೇ ಸಮರ್ಪಕವಾಗಿ ಬಳಸಿಕೊಂಡು ಹೆಚ್ಚಿನ ಬದಲಾವಣೆ ತರಲು ಸಾಧ್ಯವಿದೆ. ಸರಕಾರವೂ ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಜತೆಗೆ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಯಾಗಲಿದೆ ಮತ್ತು ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಾಗಲಿದೆ ಎಂದು ವಿ.ವಿ.ಯ ಉಪಕುಲಪತಿಯೊಬ್ಬರು ಹೇಳಿದ್ದಾರೆ.
ಎಲ್ಲ ವಿ.ವಿ.ಗಳಿಗೆ ಏಕರೂಪ ಶೈಕ್ಷಣಿಕ ಕ್ಯಾಲೆಂಡರ್ ರೂಪಿಸುವ ಚಿಂತನೆ ನಡೆದಿದೆ. ಉನ್ನತ ಶಿಕ್ಷಣ ಪರಿಷತ್ ಮೂಲಕ ತಜ್ಞರ ವರದಿ ಪಡೆಯುವ ಕಾರ್ಯ ನಡೆಯುತ್ತಿದೆ. ಲಾಕ್ಡೌನ್ ಸಡಿಲವಾದ ಅನಂತರ ಈ ಬಗ್ಗೆ ಸ್ಪಷ್ಟವಾದ ನಿರ್ದೇಶನ ಹೊರಡಿಸಲಿದ್ದೇವೆ.
-ಡಾ| ಸಿ.ಎನ್. ಅಶ್ವತ್ಥನಾರಾಯಣ, ಉನ್ನತ ಶಿಕ್ಷಣ ಸಚಿವ
-ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ