ಮೂರನೇ ಅಲೆ ತಪ್ಪಿಸಿ : ಅಕ್ಟೋಬರ್‌ ನಲ್ಲಿ ಹಾವಳಿ ಸಾಧ್ಯತೆ, ಎಳೆಯರೇ ಗುರಿ?

ವೈದ್ಯಕೀಯ ಸಿದ್ಧತೆ ಹೆಚ್ಚಿಸಿ, ಮಕ್ಕಳಿಗೆ ಲಸಿಕೆ ಒದಗಿಸಿ

Team Udayavani, May 13, 2021, 8:00 AM IST

ಮೂರನೇ ಅಲೆ ತಪ್ಪಿಸಿ : ಅಕ್ಟೋಬರ್‌ ನಲ್ಲಿ ಹಾವಳಿ ಸಾಧ್ಯತೆ, ಎಳೆಯರೇ ಗುರಿ?

ಬೆಂಗಳೂರು : ಸದ್ಯ ಕೊರೊನಾ 2ನೇ ಅಲೆಯಿಂದ ಇಡೀ ದೇಶ ತತ್ತರಿಸುತ್ತಿರುವ ನಡುವೆಯೇ ಮೂರನೇ ಅಲೆಯ ಆತಂಕವೂ ಕಾಡತೊಡಗಿದೆ. ದೇಶದ ಹಿರಿಯ ವೈದ್ಯರು 3ನೇ ಅಲೆ ಬಗ್ಗೆ ಮುನ್ಸೂಚನೆ ನೀಡಿದ್ದು, ಮಕ್ಕಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ರಾಜ್ಯ ಹೈಕೋರ್ಟ್‌ ಕೂಡ 3ನೇ ಅಲೆ ಎದುರಿಸಲು ಎಲ್ಲ ವೈದ್ಯಕೀಯ ಮೂಲಸೌಕರ್ಯ ಹೆಚ್ಚಿಸುವಂತೆ ಸೂಚನೆ ನೀಡಿದೆ.

ತಜ್ಞರ ಪ್ರಕಾರ, ಇನ್ನು 3 ತಿಂಗಳುಗಳ ಒಳಗೆ 3ನೇ ಅಲೆ ಅಪ್ಪಳಿಸಲಿದೆ. ಮೊದಲ 2 ಅಲೆಗಳಲ್ಲಿ ಹೆಚ್ಚು ಸೋಂಕಿಗೊಳಗಾಗದ, ಲಸಿಕೆ ಪಡೆಯದ ಮಕ್ಕಳಿಗೆ ಕಾಡುವ ಅಪಾಯವಿದೆ ಎಂದು ವಿಶ್ಲೇಷಿಸಲಾಗಿದೆ.
2ನೇ ಅಲೆ ಜೂನ್‌ ಆಂತ್ಯಕ್ಕೆ ನಿಯಂತ್ರಣಕ್ಕೆ ಬರಲಿದ್ದು, ಅಕ್ಟೋಬರ್‌ ಅಂತ್ಯಕ್ಕೆ 3ನೇ ಅಲೆ ಆರಂಭವಾಗಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ.

ಯಾಕೆ ಮಕ್ಕಳು ಗುರಿ?
ಒಮ್ಮೆ ಸೋಂಕು ಬಂದವರಿಗೆ 2ನೇ ಬಾರಿ ಸೋಂಕು ತಗಲುವ ಪ್ರಮಾಣ ಶೇ. 5ರಷ್ಟು ಮಾತ್ರ. ವೈರಸ್‌ ರೋಗನಿರೋಧಕ ಶಕ್ತಿ ಕಡಿಮೆ ಇರುವವರನ್ನು ಕಾಡುತ್ತದೆ ಮತ್ತು ಒಂದು ಅಲೆಯಿಂದ ಮತ್ತೂಂದಕ್ಕೆ ಶಕ್ತಿಶಾಲಿಯಾಗುತ್ತದೆ. 2ನೇ ಅಲೆಯಲ್ಲಿ ವಯಸ್ಕರು ಗುರಿಯಾಗಿದ್ದಾರೆ. 3ನೇ ಅಲೆಯಲ್ಲಿ ವೈರಸ್‌ ಇನ್ನಷ್ಟು ಸಾಮರ್ಥ್ಯ ವೃದ್ಧಿಸಿಕೊಂಡು ಮಕ್ಕಳನ್ನು ಕಾಡುವ ಸಾಧ್ಯತೆಗಳಿವೆ ಎಂಬುದು ತಜ್ಞರ ಅಭಿಪ್ರಾಯ.

ಶೇ.1 ಮಕ್ಕಳಲ್ಲಿ ಮಾತ್ರ ತೀವ್ರತೆ
ಮೂರನೇ ಅಲೆ ಮಕ್ಕಳನ್ನು ಗುರಿಪಡಿಸಿದರೂ ಅವರಲ್ಲಿ ಸೋಂಕಿನ ತೀವ್ರತೆ ಸಾಕಷ್ಟು ಕಡಿಮೆ ಇರುತ್ತದೆ. ಶೇ. 1ರಷ್ಟು ಮಕ್ಕಳಿಗೆ ಮಾತ್ರ ಸೋಂಕು ಹೆಚ್ಚು ಹಾನಿ ಮಾಡಲಿದೆ. ಶೇ. 99ರಷ್ಟು ಮಂದಿ 2-3 ದಿನಗಳಲ್ಲಿ ಗುಣಮುಖರಾಗುತ್ತಾರೆ. ಆ ಸಂದರ್ಭದಲ್ಲಿ ಹೆಚ್ಚು ದ್ರವ ಆಹಾರ ಸೇವಿಸಬೇಕು, ಸೂಕ್ತ ಆರೈಕೆ ಬೇಕು. ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಹಾರಕ್ರಮ, ಯೋಗ, ಪ್ರಾಣಾಯಾಮಗಳು ಮಕ್ಕಳನ್ನು ಸೋಂಕಿನಿಂದ ರಕ್ಷಿಸುತ್ತವೆ ಎಂದು ಮಕ್ಕಳ ತಜ್ಞ ಡಾ| ಪ್ರೀತ್‌ ಶೆಟ್ಟಿ ತಿಳಿಸಿದ್ದಾರೆ.

ಸಮಗ್ರ ಕಾರ್ಯ ಯೋಜನೆ ರೂಪಿಸಿ
ರಾಜ್ಯ ಹೈಕೋರ್ಟ್‌ 3ನೇ ಅಲೆಯ ಗಂಭೀರತೆಯ ಬಗ್ಗೆ ಮಾತನಾಡಿದೆ. ಇದನ್ನು ಸಮರ್ಥವಾಗಿ ಎದುರಿಸಲು ಸಮಗ್ರ ಕಾರ್ಯಯೋ ಜನೆ ರೂಪಿಸುವಂತೆ ಸರಕಾರಕ್ಕೆ ಸೂಚನೆ ನೀಡಿದೆ. 3ನೇ ಅಲೆಯ ವೇಳೆ ಈಗಿರುವಂಥ ಪರಿಸ್ಥಿತಿ ಆಗುವುದು ಬೇಡ. ಈಗಿನಿಂದಲೇ ಬೆಡ್‌, ಆಮ್ಲಜನಕ, ವೈದ್ಯಕೀಯ ಮೂಲ ಸೌಕರ್ಯ, ಸಿಬಂದಿ, ಔಷಧ ಮತ್ತಿತರ ಅಗತ್ಯ ಸೌಕರ್ಯ ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚಿಸಿದೆ.

ನಾವೇನು ಮಾಡಬೇಕು?
– ಸದ್ಯದ ಮುನ್ನೆಚ್ಚರಿಕೆ ಡಿಸೆಂಬರ್‌ವರೆಗೆ ಪಾಲಿಸಿ.
– ವಯಸ್ಕರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು.
– ರೋಗನಿರೋಧಕ ಶಕ್ತಿ ಹೆಚ್ಚಿಸುವ ಜೀವನಕ್ರಮ ರೂಢಿಸಿಕೊಳ್ಳಬೇಕು.
– ಸಭೆ ಸಮಾರಂಭ, ಧಾರ್ಮಿಕ ಕಾರ್ಯಕ್ರಮ, ಉತ್ಸವ, ಜಾತ್ರೆ, ಮೇಳಗಳಿಂದ ಈ ವರ್ಷ ದೂರವಿರಬೇಕು.

ಸರಕಾರದ ಪಾತ್ರವೇನು?
ಮಕ್ಕಳಿಗೂ ಲಸಿಕೆ ನೀಡಬೇಕು. ಕೇಂದ್ರ ಸರಕಾರ ಈ ಬಗ್ಗೆ ಕಾರ್ಯೋನ್ಮುಖವಾಗಬೇಕು.
– ಗ್ರಾಮೀಣ ಆರೋಗ್ಯ ವ್ಯವಸ್ಥೆ ಬಲಪಡಿಸಿಕೊಳ್ಳಬೇಕು.
– ಮಕ್ಕಳ ಐಸಿಯು ವ್ಯವಸ್ಥೆ ಮಾಡಿಕೊಳ್ಳಬೇಕು.
– ನವೆಂಬರ್‌ ಒಳಗೆ ಮಕ್ಕಳ ಶೈಕ್ಷಣಿಕ ಚಟುವಟಿಕೆ ಪೂರ್ಣಗೊಳಿಸಿ, ಬಳಿಕ ವಿರಾಮ ನೀಡಿ.
– ಒಮ್ಮೆ ಎಲ್ಲದಕ್ಕೂ ಅನುಮತಿ ನೀಡದೆ, ಅನಾವಶ್ಯಕವೆನಿಸುವ ಕಡೆ ನಿರ್ಬಂಧಗಳನ್ನು ಸಾಧ್ಯವಾದಷ್ಟು ಮುಂದುವರಿಸಬೇಕು.

ಹಾಸಿಗೆ ಹೆಚ್ಚಿಸಲು ಕ್ರಮ ಕೈಗೊಳ್ಳಿ
ಬುಧವಾರದ ಮಾಹಿತಿಯಂತೆ ಆಮ್ಲಜನಕ ಸೌಲಭ್ಯದ 45,754 ಹಾಸಿಗೆ, 5,305 ಐಸಿಯು ಹಾಸಿಗೆ ಮತ್ತು 4,109 ವೆಂಟಿಲೇಟರ್‌ ಹಾಸಿಗೆ ಇವೆ. ಆದರೆ ರಾಜ್ಯದ ಸದ್ಯದ ಸ್ಥಿತಿಗೆ 66,333 ಆಮ್ಲಜನಕ ಹಾಸಿಗೆ, 13,960 ಐಸಿಯು ಹಾಸಿಗೆ ಮತ್ತು 3,882 ವೆಂಟಿಲೇಟರ್‌ ಹಾಸಿಗೆ ಬೇಕು. ಈ ಕೊರತೆ ನೀಗಿಸಲು ರೂಪುರೇಷೆ ಸಿದ್ಧಪಡಿಸುವಂತೆ ಹೈಕೋರ್ಟ್‌ ಆದೇಶಿಸಿದೆ.

ಎರಡನೇ ಅಲೆಯಿಂದ ಮೂರನೇ ಅಲೆಗೆ ನಾಲ್ಕು ತಿಂಗಳ ಅಂತರವಿದೆ. ನವೆಂಬರ್‌ – ಡಿಸೆಂಬರ್‌ನಲ್ಲಿ ಅದು ಬರಲಿದೆ. ಆ ವೇಳೆ ಬಹುತೇಕ ಹಿರಿಯರು, ವಯಸ್ಕರು ಲಸಿಕೆ ಪಡೆಯುವುದರಿಂದ, ಅನೇಕರಿಗೆ ಸೋಂಕು ಬಂದು ಹೋಗಿರುವುದರಿಂದ ಮಕ್ಕಳದು ದುರ್ಬಲ ವರ್ಗವಾಗಿರುತ್ತದೆ. ಮಕ್ಕಳ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು.
– ಡಾ| ಸಿ.ಎನ್‌. ಮಂಜುನಾಥ್‌, ನಿರ್ದೇಶಕರು, ಜಯದೇವ ಹೃದ್ರೋಗ ಸಂಶೋಧನ ಸಂಸ್ಥೆ

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.