ಈ ಬಾರಿ ಪಿಯು ವಿದ್ಯಾರ್ಥಿಗಳಿಗೆ ದಸರಾ ರಜೆಯ ಮಜಾ ಇಲ್ಲ !


Team Udayavani, Sep 8, 2019, 6:00 AM IST

puc

ಬೆಂಗಳೂರು: ಪರೀಕ್ಷೆ ಮುಗಿಸಿ ರಜೆಯ ಮಜಾ ಅನುಭವಿಸುವ ಅವಕಾಶ ಪ್ರಸಕ್ತ ಸಾಲಿನ ಪಿಯುಸಿ ವಿದ್ಯಾರ್ಥಿಗಳಿಗಿಲ್ಲ.!

ಪ್ರತಿವರ್ಷ ದಸರಾ ರಜೆಗೂ ಮೊದಲೇ ಮಧ್ಯ ವಾರ್ಷಿಕ ಪರೀಕ್ಷೆ ನಡೆಯುತ್ತದೆ. ವಿದ್ಯಾರ್ಥಿಗಳು ಪರೀಕ್ಷೆ ಪೂರೈಸಿ ದಸರಾ ರಜೆಯನ್ನು ಕುಟುಂಬದ ಸದಸ್ಯರ ಜತೆ ಅಥವಾ ಸಂಬಂಧಿಕರ ಮನೆಗೆ ಹೋಗಿ ಖುಷಿ ಯಿಂದ ಕಳೆಯುತ್ತಿದ್ದರು.

ಆದರೆ ಈ ಬಾರಿ ಅದಕ್ಕೆಲ್ಲ ಕಡಿವಾಣ ಬಿದ್ದಿದೆ. ರಜೆಯ ಬಳಿಕವೇ ಮಧ್ಯವಾರ್ಷಿಕ ಪರೀಕ್ಷೆ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ ಮತ್ತು ಪಿಯು ಇಲಾಖೆಯ ಮಾರ್ಗಸೂಚಿಯಲ್ಲೂ ಪ್ರಕಟಿಲಾಗಿದೆ.

2019-20ನೇ ಸಾಲಿನ ಶೈಕ್ಷಣಿಕ ಅವಧಿಯು 2020ರ ಎ.20ಕ್ಕೆ ಕೊನೆಯಾಗಲಿದೆ. ಎ.20ರಿಂದ ಬೇಸಗೆ ರಜೆ ಆರಂಭವಾಗಲಿದೆ. ಇದರ ಜತೆಗೆ ಪ್ರತಿ ವರ್ಷ ಸುಮಾರು 17 ದಿನಗಳ ದಸರಾ ರಜೆ ನೀಡಲಾಗುತ್ತದೆ. ದಸರಾ ರಜೆಗೂ ಮೊದಲೇ ಒಂದು ಕಿರು ಪರೀಕ್ಷೆ ಹಾಗೂ ಮಧ್ಯವಾರ್ಷಿಕ ಪರೀಕ್ಷೆ ಪೂರೈಸಿಕೊಳ್ಳಲಾಗುತ್ತದೆ. ಇಲ್ಲಿಗೆ ಮೊದಲಾರ್ಧದ ಬಹುತೇಕ ಪಠ್ಯಗಳು ಪೂರ್ಣಗೊಂಡಿರುತ್ತವೆ. ರಜೆ ಮುಗಿಸಿ ಬರುವ ವಿದ್ಯಾರ್ಥಿಗಳಿಗೆ ಪಠ್ಯದ ಎರಡನೇ ಅರ್ಧದ ಬೋಧನೆ ಮತ್ತು ಎರಡನೇ ಕಿರು ಪರೀಕ್ಷೆ ನಡೆಸಲಾಗುತ್ತದೆ.

ರಜಾ ದಿನದಲ್ಲಿ ವಿದ್ಯಾರ್ಥಿಗಳು ಅಭ್ಯಾಸ ಮಾಡಬೇಕಾದ ಸಂದಿಗ್ಧತೆಗೆ ತಲುಪಿದ್ದಾರೆ ಎಂದು ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಸೆ.28ರಿಂದ ದಸರಾ ರಜೆ
ಈ ವರ್ಷದ ದಸರಾ ರಜೆ ಸೆ. 28ರಿಂದ ಆರಂಭವಾಗಿ ಅ. 13ರ ತನಕ ಇರಲಿದೆ. ಮಳೆ, ಪ್ರವಾಹದಿಂದ ಹಲವು ದಿನ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿರುವುದರಿಂದ ಕೆಲವೊಂದು ಜಿಲ್ಲೆಗಳಲ್ಲಿ ಈ ಅವಧಿಯಲ್ಲೂ ವಿಶೇಷ ತರಗತಿ ನಡೆಸುವ ಸಾಧ್ಯತೆ ಇದೆ. ಅ.14ರಿಂದ ಇಲಾಖೆಯ ಎರಡನೇ ಅರ್ಧ ಭಾಗದ ಶೈಕ್ಷಣಿಕ ಚಟುವಟಿಕೆ ಆರಂಭವಾಗಲಿದೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ಪೂರ್ವ ನಿಯೋಜಿತ ಮಾರ್ಗಸೂಚಿಯಂತೆ ರಜೆಯ ಅನಂತರ ಮಧ್ಯವಾರ್ಷಿಕ ಪರೀಕ್ಷೆ ನಡೆಸಲು ಸೂಚನೆ ನೀಡಿದ್ದೇವೆ. ಬಹುತೇಕ ಜಿಲ್ಲೆಗಳು ಇದಕ್ಕಾಗಿ ವೇಳಾಪಟ್ಟಿ ಯನ್ನು ಸಿದ್ಧಪಡಿಸಿಕೊಂಡಿವೆ. ವಿದ್ಯಾರ್ಥಿಗಳಿಗೆ ಇದರಿಂದ ಯಾವುದೇ ಸಮಸ್ಯೆ ಆಗದು.
-ಅಸಾದುಲ್ಲಾ ಖಾನ್‌ ಜಂಟಿ ನಿರ್ದೇಶಕ (ಪ್ರಭಾರ), ಪಿಯು ಇಲಾಖೆ

ಇಲಾಖೆಯಿಂದ ಪಿಯು ಕಾಲೇಜಿಗೆ ಬೇಕಾದ ಮೂಲ ಸೌಕರ್ಯ ಒದಗಿಸಲಿ. ಬಹುತೇಕ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರು, ಪ್ರಾಂಶುಪಾಲರಿಲ್ಲ, ಅತಿಥಿ ಉಪನ್ಯಾಸಕರ ನೇಮಕಕ್ಕೆ ಅವಕಾಶ ನೀಡುತ್ತಿಲ್ಲ. ಇದರ ಪರಿಣಾಮ ಮಧ್ಯವಾರ್ಷಿಕ ಪರೀಕ್ಷೆ ಮೇಲೆ ಬಿದ್ದಿರಬಹುದು.
-ತಿಮ್ಮಯ್ಯ ಪುರ್ಲೆ, ಅಧ್ಯಕ್ಷ, ಪಿಯು ಕಾಲೇಜು ಉಪನ್ಯಾಸಕರ ಸಂಘ

–  ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.