ಪಕ್ಷ ಮೀರಿ ಬೆಳೆಯಲು ಹೋದವರು ನಾಶವಾಗುತ್ತಾರೆ: ಬಿಎಸ್ ವೈಗೆ ಈಶ್ವರಪ್ಪ ಟಾಂಗ್
Team Udayavani, Sep 28, 2019, 12:12 PM IST
ಶಿವಮೊಗ್ಗ:ಪಕ್ಷವನ್ನು ಮೀರಿ ಯಾರೂ ವ್ಯಕ್ತಿಗತವಾಗಿ ಬೆಳೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ನ ಸಿದ್ದರಾಮಯ್ಯ ಆಗಲಿ, ಜೆಡಿಎಸ್ ನ ಕುಮಾರಸ್ವಾಮಿಯಾಗಲಿ ಅಥವಾ ಬಿಎಸ್ ಯಡಿಯೂರಪ್ಪನವರೇ ಆಗಲಿ ಪಕ್ಷದ ಬೆಂಬಲ ಇಲ್ಲದೆ ಅಧಿಕಾರಕ್ಕೆ ಏರಲು ಸಾಧ್ಯವಿಲ್ಲ ಎಂದು ಬಿಜೆಪಿ ಮುಖಂಡ, ಸಚಿವ ಕೆಎಸ್ ಈಶ್ವರಪ್ಪ ಟಾಂಗ್ ನೀಡಿದ್ದಾರೆ.
ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಘಟನೆ ಮೀರಿ ಬೆಳೆಯಲು ಹೋದವರಿಗೆ ತಾತ್ಕಾಲಿಕ ಯಶಸ್ಸು. ಸಿದ್ದರಾಮಯ್ಯನವರು ತಾವೇ ಬೆಳೆದರು ವಿನಃ, ಪಕ್ಷವನ್ನು ಸಂಘಟಿಸಲೇ ಇಲ್ಲ. ಕುತಂತ್ರ ರಾಜಕಾರಣವೇ ಕಾಂಗ್ರೆಸ್ ನಿರ್ನಾಮಕ್ಕೆ ಕಾರಣವಾಗಿ ಸರಕಾರವೇ ಬಿದ್ದೋಯ್ತು ಎಂದು ಆರೋಪಿಸಿದರು.
ನಾನೂ ಸೇರಿದಂತೆ ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿ ಯಾರೇ ಆಗಲಿ ಇದನ್ನು ಅರ್ಥ ಮಾಡಿಕೊಳ್ಳಬೇಕು. ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವಿಲ್ಲ. ಒಂದು ವೇಳೆ ಪಕ್ಷ ಮೀರಿ ಬೆಳೆಯಲು ಹೋದರೆ ಅವರು ನಾಶವಾಗಿ ಹೋಗುತ್ತಾರೆ ಎಂದು ಈಶ್ವರಪ್ಪ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPCC: ಮೋದಿ, ರಾಜನಾಥ್ಸಿಂಗ್ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ