ರಾಯಚೂರು: ಸಿಡಿಲು ಬಡಿದು ವ್ಯಕ್ತಿ ಸ್ಥಳದಲ್ಲೇ ಸಾವು
Team Udayavani, Jun 2, 2021, 8:03 PM IST
ರಾಯಚೂರು: ತಾಲೂಕಿನ ಹುಣಸಿಹಾಳಹುಡಾ ಗ್ರಾಮ ಹೊರವಲಯದಲ್ಲಿ ಬುಧವಾರ ಸಂಜೆ ಸುರಿದ ಮಳೆಯಲ್ಲಿ ಸಿಡಿಲು ಬಡಿದು ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.
ಹುಣಸಿಹಾಳಹಾಡ ಗ್ರಾಮದ ಚಂದ್ರಶೇಖರ ಓಂಕಾರಿ (54) ಮೃತ ವ್ಯಕ್ತಿ. ಸಂಜೆ ಬೈಕ್ನಲ್ಲಿ ಜಮೀನಿಗೆ ಹೋದಾಗ ಸಿಡಿಲು ಬಡಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗ್ರಾಮೀಣ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಇದನ್ನೂ ಓದಿ : ಕೈಗಾರಿಕಾ ಸಮಸ್ಯೆಗಳಿಗೆ ಸ್ಪಂದಿಸಲು ಶೀಘ್ರ ತೀರ್ಮಾನ : ರವಿಕುಮಾರ್ ಭರವಸೆ