ಗುಂಡ್ಲುಪೇಟೆ: ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿ ಮೃತದೇಹ ಪತ್ತೆ
ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರೈತರು
Team Udayavani, Feb 7, 2023, 5:25 PM IST
ಗುಂಡ್ಲುಪೇಟೆ(ಚಾಮರಾಜನಗರ): ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿಯೊಂದರ ಮೃತ ದೇಹ ಪತ್ತೆಯಾಗಿರುವ ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಕುಂದಕೆರೆ ವಲಯ ವ್ಯಾಪ್ತಿಯ ಚೌಡಹಳ್ಳಿ ಗ್ರಾಮದ ಹೊರವಲಯದ ಮಲ್ಲಯ್ಯನಕಟ್ಟೆ ಕೆರೆಯಲ್ಲಿ ನಡೆದಿದೆ.
ಹುಲಿಯು ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಸಾವಿಗೆ ಇನ್ನೂ ಕೂಡ ನಿಖರ ಕಾರಣ ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರವಷ್ಟೆ ಕಾರಣ ಗೊತ್ತಾಗಲಿದೆ.
ಕೆರೆಯಲ್ಲಿ ದನಗಳಿಗೆ ನೀರು ಕುಡಿಸಲು ರೈತರೊಬ್ಬರು ಹೋಗಿದ್ದಾಗ ಮೃತದೇಹ ಕೆರೆಯಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ನಂತರ ರೈತರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸಹಾಯಕ ಅರಣ್ಯಾಧಿಕಾರಿ ರವೀಂದ್ರ, ಆರ್ ಎಫ್ ಓ ಶ್ರೀನಿವಾಸ್ ಹಾಗೂ ತಂಡದವರು ಪರಿಶೀಲನೆ ನಡೆಸಿದ್ದು, ಹುಲಿಯ ಮೃತ ದೇಹ ಕೆರೆಯಿಂದ ಮೇಲೆತ್ತಲು ಕಾರ್ಯಾಚರಣೆ ಆರಂಭಿಸಿದ್ದಾರೆ.
ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರೈತರು:
ಚೌಡಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹುಲಿ, ಚಿರತೆ, ಕಾಡಾನೆಗಳು ನಿರಂತರವಾಗಿ ಜಾನುವಾರು ಹಾಗೂ ರೈತರ ಫಸಲಿನ ಮೇಲೆ ದಾಳಿ ನಡೆಸಿ ನಾಶಗೊಳಿಸಿದ್ದವು. ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ರೈತರು ಹಲವು ಬಾರಿ ದೂರು ನೀಡುತ್ತಿದ್ದರೂ ಸಹ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿರಲಿಲ್ಲ. ಆದರೆ ಇದೀಗ ಕೆರೆಯಲ್ಲಿ ಹುಲಿ ಮೃತ ದೇಹ ಪತ್ತೆಯಾಗಿರುವ ಕಾರಣ ಸ್ಥಳಕ್ಕಾಗಿಮಿಸಿದ ಅರಣ್ಯಾಧಿಕಾರಿಗಳನ್ನು ರೈತರ ತರಾಟೆಗೆ ತೆಗೆದುಕೊಂಡು ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ: ಬಾಲಕಿ ಜೊತೆ ಮಾತನಾಡಲು ಬಂದ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ, ಮೂತ್ರ ಕುಡಿಸಿದ ಗ್ರಾಮಸ್ಥರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್