ಹೊಕ್ಕಳ್ಳಿ: ಮುಂದುವರೆದ ಹುಲಿ ದಾಳಿ, ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಕಂಗಾಲು
ಹುಲಿ ಸ್ಥಳಾಂತರಕ್ಕೆ ಗ್ರಾಮಸ್ಥರ ಆಗ್ರಹ
Team Udayavani, Dec 21, 2021, 7:58 PM IST
ಕೊಟ್ಟಿಗೆಹಾರ : ಬಿ.ಹೊಸಳ್ಳಿ, ಫಲ್ಗುಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷದಿಂದ ಜಾನುವಾರುಗಳ ಮೇಲೆ ನಿರಂತರ ಹುಲಿ ದಾಳಿ ನಡೆಯುತ್ತಿದ್ದು ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಹೊಕ್ಕಳ್ಳಿಯ ಗ್ರಾಮಸ್ಥ ರಘು ಮಂಜುನಾಥ್ ಅವರ ಗದ್ದೆಯಲ್ಲಿ ಮಂಗಳವಾರ ಬೆಳಿಗ್ಗೆ ಜಾನುವಾರುಗಳ ಮೇಲೆ ಹುಲಿ ದಾಳಿ ನಡೆಸಿ ದನವನ್ನು ಕೊಂದು ಹಾಕಿದೆ. ಕಳೆದ ತಿಂಗಳಿನಲ್ಲಿ ಬಿ.ಹೊಸಳ್ಳಿ, ಹೊಕ್ಕಳ್ಳಿ, ಭಾರತೀಬೈಲ್, ಹೆಗ್ಗುಡ್ಲು ಭಾಗದಲ್ಲೂ ನಿರಂತರ ದನಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಗ್ರಾಮದಲ್ಲಿ ನಿತ್ಯವೂ ಹೆದರುವ ಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆಯವರು ಸಿಸಿ ಕ್ಯಾಮೆರಾ ಅಳವಡಿಸಿದ್ದರೂ ಮೂರು ತಿಂಗಳಿನಿಂದ ಹುಲಿ ಹಿಡಿಯಲು ಸಾಧ್ಯವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಹುಲಿ ದನಗಳ ಮೇಲೆ ದಾಳಿ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಮನುಷ್ಯನ ಮೇಲೆಯೂ ಎಗರುವ ಸಾಧ್ಯತೆ ದಟ್ಟವಾಗಿದೆ ಎಂದು ಗ್ರಾಮಸ್ಥ ಸ್ಫರಿತ್ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಸ್ಥಳಕ್ಕೆ ಪಶುವೈದ್ಯ ಸಿಬ್ಬಂದಿ ಅಭಿಜಿತ್, ಅರಣ್ಯ ರಕ್ಷಕ ಮೋಸಿನ್ ಭೇಟಿ ನೀಡಿದ್ದಾರೆ.
ಇದನ್ನೂ ಓದಿ : ಯಡ್ರಾಮಿ : ರೈತ ಸಂಘಟನೆಯಿಂದ ಅಹೋರಾತ್ರಿ ಪ್ರತಿಭಟನೆ ; ಹಲವರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ