Beauty Tips: ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು….

ಸೂರ್ಯನ ಕಿರಣಗಳಿಂದ ಚರ್ಮದಲ್ಲಿನ ಮೆಲನಿನ್ ಕೋಶಗಳು ಹೆಚ್ಚಾಗುತ್ತವೆ.

ಕಾವ್ಯಶ್ರೀ, May 30, 2023, 5:31 PM IST

web-lips

ಸೌಂದರ್ಯ ಎಂದು ಬಂದರೆ ತುಟಿಗಳ ಬಣ್ಣವೂ ಮುಖ್ಯವಾಗುತ್ತದೆ. ತುಟಿಗಳ ಬಣ್ಣ ಕಪ್ಪಾದರೆ ನಮ್ಮ ಸೌಂದರ್ಯ ಹಾಳುಮಾಡುವುದರಲ್ಲಿ ಸಂದೇಹವಿಲ್ಲ. ಗುಲಾಬಿ ಬಣ್ಣದಂತಹ ತುಟಿ ಚೆನ್ನಾಗಿ ಕಾಣುವುದಲ್ಲದೆ ಮುಖದ ಸೌಂದರ್ಯ ಹೆಚ್ಚಿಸುತ್ತದೆ.

ಕೆಲವರ ತುಟಿಗಳು ಕಾಲಕ್ರಮೇಣ ಕಪ್ಪಾಗುತ್ತವೆ. ತುಟಿ ಕಪ್ಪಾಗಲು ಹಲವಾರು ಕಾರಣಗಳಿವೆ. ಕಪ್ಪು ಬಣ್ಣದ ತುಟಿ ಆರೈಕೆಗೆ ಕೆಲ ಸಲಹೆಗಳನ್ನು ಪಾಲಿಸಬೇಕು.

ಮಹಿಳೆಯರು ತಮ್ಮ ಕಪ್ಪು ತುಟಿಗಳನ್ನು ಮರೆಮಾಡಲು ಲಿಪ್ಸ್ಟಿಕ್ ಬಳಸುವುದು ಸಾಮಾನ್ಯ. ನಿಮಗೆ ಕಪ್ಪು ತುಟಿಗಳಿಂದ ಬೇಸರವಾಗಿದ್ದರೆ ಕೆಲ ಸಲಹೆ ಹಾಗೂ ಮನೆಮದ್ದುಗಳನ್ನು ಪಾಲಿಸುವುದರ ಮೂಲಕ ಕಪ್ಪು ಬಣ್ಣದ ತುಟಿಗಳನ್ನು ಗುಲಾಬಿ ಬಣ್ಣದ ತುಟಿಗಳಾಗಿ ಪರಿವರ್ತಿಸಬಹುದು.

ಕೆಲವೊಮ್ಮೆ ಪರಿಸರದ ಪರಿಣಾಮ ತುಟಿಗಳ ಮೇಲೂ ಪರಿಣಾಮ ಬೀರುತ್ತದೆ.  ಬಲವಾದ ಸೂರ್ಯನ ಕಿರಣಗಳಿಂದ ಚರ್ಮದಲ್ಲಿನ ಮೆಲನಿನ್ ಕೋಶಗಳು ಹೆಚ್ಚಾಗುತ್ತವೆ. ಇದು ಚರ್ಮ, ತುಟಿ ಕಪ್ಪಗಾಗಲು ಕಾರಣವಾಗುತ್ತದೆ.

ಇಲ್ಲಿವೆ ಕೆಲ ಸಲಹೆಗಳು:

ಜೇನುತುಪ್ಪ:

ತುಟಿಗಳ ಕಪ್ಪು ಬಣ್ಣ ತೆಗೆದುಹಾಕಲು ಜೇನುತುಪ್ಪ ತುಂಬಾ ಸಹಕಾರಿ. ಪ್ರತಿ ರಾತ್ರಿ ತುಟಿಗಳಿಗೆ ಸ್ವಲ್ಪ ಜೇನುತುಪ್ಪವನ್ನು ಹಚ್ಚಿ ಮತ್ತು ಬೆಳಿಗ್ಗೆ ತೊಳೆಯಿರಿ. ನಿಮ್ಮ ತುಟಿಗಳು ಗುಲಾಬಿ ಬಣ್ಣಕ್ಕೆ ತಿರುಗುತ್ತವೆ.

ನಿಂಬೆ ರಸ:

ನಿಂಬೆ ರಸ ಮುಖದ ಕಲೆಗಳನ್ನು ಹೋಗಲಾಡಿಸುವುದರೊಂದಿಗೆ ತುಟಿಗಳ ಕಪ್ಪು ಬಣ್ಣವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ವಾರಕ್ಕೆ 3-4 ಬಾರಿ ನಿಂಬೆ ರಸವನ್ನು ನಿಮ್ಮ ತುಟಿಗಳಿಗೆ ಹಚ್ಚಿ 5 ನಿಮಿಷಗಳ ನಂತರ ತುಟಿಗಳನ್ನು ತೊಳೆಯಿರಿ.

1 ಚಮಚ ಜೇನುತುಪ್ಪ ಮತ್ತು 1  ಚಮಚ ಕಂದು ಸಕ್ಕರೆ ಮಿಶ್ರಣ ಮಾಡಿ. ಆ ಮಿಶ್ರಣವನ್ನು ತುಟಿಗಳಿಗೆ ವೃತ್ತಾಕಾರದಲ್ಲಿ  ಮಸಾಜ್ ಮಾಡಿ. ಸುಮಾರು 15 ನಿಮಿಷಗಳ ಕಾಲ ಹಾಗೆಯೇ ಬಿಟ್ಟು ನಂತರ ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ.

ತುಟಿಗಳ ಮೇಲೆ ದಾಲ್ಚಿನ್ನಿ ಸ್ವಲ್ಪ ಉಜ್ಜಿಕೊಳ್ಳಿ, ಕೆಲವು ನಿಮಿಷ ನಂತರ ನಿಮ್ಮ ತುಟಿಗಳನ್ನು ಬಿಸಿ ನೀರಿನಲ್ಲಿ ತೊಳೆಯಿರಿ. ಇದು ಕೂಡಾ ತುಟಿಯ ಕಪ್ಪು ಬಣ್ಣ ಹೋಗಲಾಡಿಸಲು ಸಹಾಯ ಮಾಡುತ್ತದೆ.

ಹಾಲು:

ತಂಪಾದ ಹಾಲನ್ನು ತುಟಿಗೆ ಹಚ್ಚುವುದರಿಂದಲೂ ಗುಲಾಬಿ ಬಣ್ಣದ ತುಟಿ ಪಡೆಯಬಹುದು.  ಪ್ರತಿದಿನ ರಾತ್ರಿ ಮಲಗುವ ಮುನ್ನ ತುಟಿಗಳಿಗೆ ಹತ್ತಿ ಸಹಾಯದಿಂದ ತಂಪಾದ ಹಾಲಿನಿಂದ ಮಸಾಜ್‌ ಮಾಡಬೇಕು.

ಆಲಿವ್‌ ಎಣ್ಣೆ:

ತುಟಿಯ ಅನವಶ್ಯಕ ಡೆಡ್ ಸೆಲ್ ಗಳನ್ನು ತೆಗೆಯಲು ಸಕ್ಕರೆ ಪುಡಿಗೆ ಆಲಿವ್ ಎಣ್ಣೆ ಅಥವಾ ಜೇನು ಬೆರೆಸಿ ಹಚ್ಚುತ್ತಿರಿ. ಇದು ತುಟಿಯ ಬಣ್ಣಕ್ಕೆ ಸಹಾಯವಾಗುತ್ತದೆ.

ವಿಟಮಿನ್ ಬಿ ಕೊರತೆ ನಿವಾರಿಸಿ:

ವಿಟಮಿನ್ ಬಿ ಇರುವ ಪದಾರ್ಥಗಳನ್ನು ಕಡಿಮೆ ಸೇವಿಸುವುದರಿಂದ ಹೊಟ್ಟೆಯ ಪಚನ ಕ್ರಿಯೆ ಮೇಲೆ ಪರಿಣಾಮ ಬೀರುವುದಲ್ಲದೆ ತುಟಿಯ ಆರೋಗ್ಯದ ಮೇಲೆಯೂ ಪರಿಣಾಮ ಬೀರುತ್ತದೆ.  ತುಟಿ ಮತ್ತು ಬಾಯಿಯ ಮೂಲೆಗಳು ಕೆಲವೊಮ್ಮೆ ಒಡೆದು ಹೋಗುತ್ತವೆ. ಇದಕ್ಕೆ ಮೂಲ ಕಾರಣ ವಿಟಮಿನ್ ಬಿ ಕೊರತೆ. ಹೆಚ್ಚೆಚ್ಚು ವಿಟಮಿನ್ ಬಿ ಅಂಶವಿರುವ ಪದಾರ್ಥಗಳನ್ನು ತೆಗೆದುಕೊಳ್ಳುವುದರಿಂದ ತುಟಿಯ ರಕ್ಷಣೆ ಮಾಡಿಕೊಳ್ಳಬಹುದು.

*ಕಾವ್ಯಶ್ರೀ

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.