ಇಂದು ಸಂಜೆ 6ರಿಂದ ಮಾ.31ರ ವರೆಗೆ ಬಾರ್, ಹೊಟೇಲ್ ಬಂದ್
ಎಲ್ಲ ಮಹಾನಗರ ಪಾಲಿಕೆ ವ್ಯಾಪ್ತಿಗೆ ಮಾತ್ರ ಅನ್ವಯ ; ಹೊಟೇಲ್ಗಳಲ್ಲಿ ಪಾರ್ಸೆಲ್ ಸೇವೆ ಮಾತ್ರ ಇರಲಿದೆ
Team Udayavani, Mar 21, 2020, 6:45 AM IST
ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಶನಿವಾರ ಸಂಜೆ 6 ಗಂಟೆಯಿಂದ ಮಾ. 31ರವರೆಗೂ ಬಾರ್, ಪಬ್ಗಳನ್ನು ಕಡ್ಡಾಯವಾಗಿ ಬಂದ್ ಮಾಡಬೇಕು. ಹೊಟೇಲ್ಗಳು ಪಾರ್ಸೆಲ್ ಸೇವೆಯನ್ನು ಮಾತ್ರ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಕೋವಿಡ್ 19 ಸೋಂಕು ಕುರಿತು ಶುಕ್ರವಾರ ವಿಧಾನ ಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಂಕು ನಿಯಂತ್ರಣ ಕುರಿತು ಅಧಿಕಾರಿ ಗಳ ಜತೆ ಚರ್ಚೆ ಮಾಡಿ ಇನ್ನಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಆ ಪೈಕಿ ಮಾ.31ರ ವರೆಗೆ ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಬಾರ್, ಪಬ್ಗಳನ್ನುಬಂದ್ ಮಾಡಬೇಕು. ಹೊಟೇಲ್ಗಳಲ್ಲಿ ಗುಂಪಾಗಿ ಕುಳಿತು ಆಹಾರ ಸೇವಿಸುವುದ ರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಎಲ್ಲ ಹೊಟೇಲ್ಗಳು ಅಡುಗೆ ಮನೆ ತೆರೆದು ಊಟ ತಯಾರಿಸಿ ಪಾರ್ಸೆಲ್ ಸೇವೆ ಮಾತ್ರ ನೀಡಬಹುದು ಎಂದು ತಿಳಿಸಿದರು.
ಪ್ರಧಾನಿ ಜತೆ ಚರ್ಚೆ
ಕೋವಿಡ್ 19 ನಿಯಂತ್ರಣ ಕುರಿತು ಶುಕ್ರವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿ ಮೋದಿ ಜತೆ ಉಪಯುಕ್ತ ಚರ್ಚೆ ನಡೆಸಿದ್ದೇವೆ. ಈ ವೇಳೆ ಪ್ರಧಾನಿಯವರಿಗೆ ರಾಜ್ಯದಲ್ಲಿ ಸದ್ಯ ಇರುವ ಸ್ಥಿತಿಗತಿ ಮಾಹಿತಿ ನೀಡಿದ್ದೇವೆ. ಎಲ್ಲ ರಾಜ್ಯಗಳಲ್ಲಿಯೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ತಿಳಿಸಿದ್ದಾರೆ. ಜತೆಗೆ ಶಂಕಿತರ ಮತ್ತು ಸೋಂಕು ಪೀಡಿತರ ನಿಗಾ ವ್ಯವಸ್ಥೆ ಸೂಕ್ತ ಜಾರಿಗೆ ಹಾಗೂ ಸಾರ್ವಜನಿಕರಿಗೆ ಆಹಾರ ಧಾನ್ಯ, ವೈದ್ಯಕೀಯ ಸಲಕರಣೆ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ಸಲಹೆ ನೀಡಿದ್ದಾರೆ. ಅಗತ್ಯ ಹಣಕಾಸಿನ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
ರಾಜ್ಯದಲ್ಲಿ ಕೋವಿಡ್ 19 ಸೋಂಕು ಪೀಡಿತರಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಹೊಸದಾಗಿ 500 ವೆಂಟಿ ಲೇಟರ್ ಖರೀದಿಗೆ ಮತ್ತು ವಿವಿಧ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ ವ್ಯವಸ್ಥೆಯುಳ್ಳ 5,000 ಹಾಸಿಗೆ ಸಿದ್ಧತೆಗೆ ಕ್ರಮ ಕೈಗೊಂಡಿದ್ದೇವೆ. ಇನ್ನು ರವಿವಾರ ಪ್ರಧಾನಿ ಕರೆ ನೀಡಿರುವ ಜನತಾ ಕರ್ಫ್ಯೂಗೆ ರಾಜ್ಯದ ಜನರು ಸಹಕಾರ ನೀಡುವ ವಿಶ್ವಾಸವಿದೆ ಎಂದರು.
ಎಸೆಸೆಲ್ಸಿ ಪರೀಕ್ಷೆ ರದ್ದು ಇಲ್ಲ
ಎಸೆಸೆಲ್ಸಿ ಪರೀಕ್ಷೆ ಕುರಿತು ಗೊಂದಲಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ನಿಗದಿ ಪಡಿಸಿದ ದಿನಾಂಕದಂದು ಪರೀಕ್ಷೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು. ಶಾಲಾ ಶಿಕ್ಷಕರಿಗೆ ರಜೆ ಕುರಿತು ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಧಿಕ ದರ ವಸೂಲಿ ಬೇಡ
ಸಾಕಷ್ಟು ಮಂದಿ ಊಟ ತಿಂಡಿಗೆ ಹೊಟೇಲ್ಗಳನ್ನು ಅವಲಂಬಿಸಿರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಹೊಟೇಲ್ ಮಾಲಕರು ಅಡುಗೆ ಮನೆ ತೆರೆದು ಆಹಾರ ಸಿದ್ಧಪಡಿಸಿ ಪಾರ್ಸೆಲ್ ಸೇವೆಯನ್ನು ನೀಡಿ ಸಹಕರಿಸಬೇಕು. ಇನ್ನು ಈ ಪರಿಸ್ಥಿತಿಯನ್ನು ದುರುಪಯೋಗ ಮಾಡಿಕೊಂಡು ಹೆಚ್ಚು ದರ ವಸೂಲಿ ಮಾಡಬಾರದು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ