‘ಲೋಕಲ್ ಫೈಟ್’ಗೆ ಇಂದು ಮತದಾನ

61 ನಗರ ಸ್ಥಳೀಯ ಸಂಸ್ಥೆಗಳ 1,296 ವಾರ್ಡ್‌ಗಳಿಗೆ ಮತದಾನ

Team Udayavani, May 29, 2019, 6:00 AM IST

Voting 2

ಬೆಂಗಳೂರು: ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ರಾಜ್ಯದ 61 ನಗರ ಸ್ಥಳೀಯ ಸಂಸ್ಥೆಗಳಿಗೆ ಬುಧವಾರ (ಮೇ 29) ಮತದಾನ ನಡೆಯಲಿದೆ. ರಾಜ್ಯದ 22 ಜಿಲ್ಲೆಗಳ 8 ನಗರಸಭೆ, 32 ಪುರಸಭೆ ಹಾಗೂ 21 ಪಟ್ಟಣ ಪಂಚಾಯಿತಿಗಳು ಸೇರಿ 61 ನಗರ ಸ್ಥಳೀಯ ಸಂಸ್ಥೆಗಳ ಒಟ್ಟು 1,296 ವಾರ್ಡ್‌ಗಳಲ್ಲಿ ಮೇ 29ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆ ತನಕ ಮತದಾನ ನಡೆಯಲಿದೆ. 4,360 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗಿಳಿದಿದ್ದು, ಸುಮಾರು 14.74 ಲಕ್ಷ ಮತದಾರರು ಈ ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

ಇದೇ ವೇಳೆ ತುಮಕೂರು ಮಹಾನಗರ ಪಾಲಿಕೆಯ ವಾರ್ಡ್‌ ಸಂಖ್ಯೆ 22 ಮತ್ತು ಬಿಬಿಎಂಪಿಯ ಸಗಾಯಪುರಂ ಮತ್ತು ಕಾವೇರಿಪುರಂ ವಾರ್ಡ್‌ಗಳು, ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ ನಗರಸಭೆಯ ವಾರ್ಡ್‌ ಸಂಖ್ಯೆ 26, ಬೆಳಗಾವಿ ಜಿಲ್ಲೆ ಸದಲಗಾ ಪುರಸಭೆಯ ವಾರ್ಡ್‌ ಸಂಖ್ಯೆ 19 ಮತ್ತು ಮುಗಳಖೋಡ ಪುರಸಭೆಯ ವಾರ್ಡ್‌ ಸಂಖ್ಯೆ 2ಕ್ಕೆ ಜರುಗಲಿರುವ ಉಪ ಚುನಾವಣೆಗೂ ಮತದಾನ ನಡೆಯಲಿದೆ.

ಇದಲ್ಲದೇ ವಿವಿಧ ಕಾರಣಗಳಿಂದ ತೆರವಾಗಿರುವ ರಾಜ್ಯದ 8 ಜಿಲ್ಲೆಗಳ ಎಂಟು ತಾಲೂಕು ಪಂಚಾಯಿತಿಗಳ 10 ಸ್ಥಾನಗಳಿಗೆ ಮತ್ತು 30 ಜಿಲ್ಲೆಗಳ 191 ಗ್ರಾಪಂಗಳ 202 ಖಾಲಿ ಸ್ಥಾನಗಳ ಉಪ ಚುನಾವಣೆಗೆ ಸಹ ಇದೇ ವೇಳೆ ಮತದಾನ ನಡೆಯಲಿದೆ.

22 ಜಿಲ್ಲೆಗಳಲ್ಲಿ ಚುನಾವಣೆ: ಉಡುಪಿ, ಬಾಗಲಕೋಟೆ, ರಾಯಚೂರು, ಕೊಪ್ಪಳ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ 2018ರ ಆಗಸ್ಟ್‌ನಲ್ಲಿ ಚುನಾವಣೆ ನಡೆಸಲಾಗಿದೆ. ರಾಮನಗರ, ಕೊಡಗು, ಬೆಳಗಾವಿ, ಕಲಬುರಗಿ ಜಿಲ್ಲೆಯ ಚುನಾವಣೆ ನಡೆಸಲು ಬಾಕಿ ಇರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಹೈಕೋರ್ಟ್‌ನಲ್ಲಿ ಪ್ರಕರಣಗಳು ದಾಖಲಾಗಿರುವುದರಿಂದ ಎರಡನೇ ಹಂತದಲ್ಲಿ ಚುನಾವಣೆ ಇರುವುದಿಲ್ಲ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ತುಮಕೂರು, ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಚಾಮರಾಜನಗರ, ವಿಜಯಪುರ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಬೀದರ್‌, ಬಳ್ಳಾರಿ, ಯಾದಗಿರಿ ಸೇರಿ 22 ಜಿಲ್ಲೆಗಳಲ್ಲಿ 2ನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ರಾಜ್ಯ ಚುನಾವಣಾ ಆಯೋಗವು 2018ರ ಸೆಪ್ಟೆಂಬರ್‌ವರೆಗೆ ಅವಧಿ ಮುಕ್ತಾಯವಾಗುವ ಒಟ್ಟು 109 ನಗರ ಸ್ಥಳೀಯ ಸಂಸ್ಥೆಗಳಿಗೆ ಮೊದಲ ಹಂತದಲ್ಲಿ 2018ರ ಆಗಸ್ಟ್‌ನಲ್ಲಿ ಚುನಾವಣೆ ನಡೆಸಿತ್ತು. ಈಗ 2019ರ ಮಾರ್ಚ್‌ರಿಂದ ಜುಲೈವರೆಗೆ ಅವಧಿ ಮುಕ್ತಾಯವಾಗುವ ಒಟ್ಟು 103 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಬೆಂಗಳೂರು, ಧಾರವಾಡ, ಕಲಬುರಗಿ ಹೈಕೋರ್ಟ್‌ ಪೀಠಗಳಲ್ಲಿ ವ್ಯಾಜ್ಯಗಳಿರುವ 39 ನಗರ ಸ್ಥಳೀಯ ಸಂಸ್ಥೆಗಳನ್ನು ಹೊರತುಪಡಿಸಿ, ಉಳಿದ 63 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಮೇ 2ರಂದು ವೇಳಾಪಟ್ಟಿ ಪ್ರಕಟಿಸಿತ್ತು.

ಈ ಮಧ್ಯೆ ನೆಲಮಂಗಲ ಪುರಸಭೆ ಮತ್ತು ಸೊರಬ ಪಟ್ಟಣ ಪಂಚಾಯಿತಿ ಚುನಾವಣೆ ಕುರಿತು ಹೈಕೋರ್ಟ್‌ ನಲ್ಲಿ ತಕರಾರು ಅರ್ಜಿ ದಾಖಲಾಗಿದ್ದ ಹಿನ್ನೆಲೆಯಲ್ಲಿ ಈ ಎರಡೂ ಕಡೆ ಜೂ.1ಕ್ಕೆ ಮತದಾನ ನಡೆಯಲಿದೆ. ಇದಲ್ಲದೇ 30 ಮಂದಿ ಅವಿರೋಧವಾಗಿ ಅಯ್ಕೆಗೊಂಡಿರುವ ಹಿನ್ನೆಲೆಯಲ್ಲಿ ಅಂತಿಮವಾಗಿ 61 ನಗರ ಸ್ಥಳೀಯ ಸಂಸ್ಥೆಗಳ 1,296 ವಾರ್ಡ್‌ ಗಳಿಗೆ ಮೇ 29ರಂದು ಮತದಾನ ನಡೆಯಲಿದೆ.

ಎಲ್ಲೆಲ್ಲಿ ಚುನಾವಣೆ ?

8 ನಗರಸಭೆ: ಹಿರಿಯೂರು, ಹರಿಹರ, ಶಿಡ್ಲಘಟ್ಟ, ಸಾಗರ, ತಿಪಟೂರು, ನಂಜನಗೂಡು, ಬಸವಕಲ್ಯಾಣ, ಶಹಾಪುರ. 32 ಪುರಸಭೆ: ಆನೇಕಲ್, ದೇವನಹಳ್ಳಿ, ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಬಾಗೇಪಲ್ಲಿ, ಶಿಕಾರಿಪುರ, ಪಾವಗಡ, ಕುಣಿಗಲ್, ಕೆ.ಆರ್‌. ನಗರ, ಬನ್ನೂರು, ಕಡೂರು, ಮೂಡಬಿದಿರೆ, ಮಳವಳ್ಳಿ, ಕೆ.ಆರ್‌. ಪೇಟೆ, ಶ್ರೀರಂಗಪಟ್ಟಣ, ಗುಂಡ್ಲುಪೇಟೆ, ಬಾಗೇವಾಡಿ, ಇಂಡಿ, ತಾಳಿಕೋಟೆ, ನವಲಗುಂದ, ಮುಂಡರಗಿ, ನರಗುಂದ, ಬ್ಯಾಡಗಿ, ಶಿಗ್ಗಾಂವ, ಭಟ್ಕಳ, ಭಾಲ್ಕಿ, ಹುಮ್ನಾಬಾದ್‌, ಚಿಟಗುಪ್ಪ, ಸಂಡೂರು, ಹರಪನಹಳ್ಳಿ, ಹೂವಿನಹಡಗಲಿ. 21 ಪಟ್ಟಣ ಪಂಚಾಯಿತಿ: ಮೊಳಕಾಲ್ಮೂರು, ಹೊಳಲ್ಕೆರೆ, ಶಿರಾಳಕೊಪ್ಪ, ಹೊಸನಗರ, ತುರುವೇಕೆರೆ, ಕೊಪ್ಪ, ಶೃಂಗೇರಿ, ಮೂಡಿಗೆರೆ, ನರಸಿಂಹರಾಜಪುರ, ಮೂಲ್ಕಿ, ಸುಳ್ಯ, ಆಲೂರು, ಅರಕಲಗೂಡು, ಯಳಂದೂರು, ಹನೂರು, ಕಲಘಟಗಿ, ಆಳ್ನಾವರ, ಹೊನ್ನಾವರ, ಸಿದ್ದಾಪುರ, ಔರಾದ್‌, ಕಮಲಾಪುರ.

ಎಡಗೈ ಮಧ್ಯ ಬೆರಳಿಗೆ ಶಾಯಿ

ಶಿವಮೊಗ್ಗ ಜಿಲ್ಲೆ ಹೊರತುಪಡಿಸಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತದಾರರಿಗೆ ಎಡಗೈ ಮಧ್ಯ ಬೆರಳಿಗೆ ಶಾಯಿ ಹಚ್ಚಲಾಗುವುದು. ಆದರೆ, ಚುನಾವಣೆ ನಡೆಯುತ್ತಿರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹತ್ತಿರದಲ್ಲೇ ಯಾವುದಾದರೂ ಚುನಾವಣೆ ನಡೆದು ಮಧ್ಯ ಬೆರಳಿಗೆ ಶಾಯಿ ಹಾಕಿದ್ದರೆ, ಬೇರೆ ಬೆರಳಿಗೆ ಶಾಯಿ ಹಾಕುವ ಬಗ್ಗೆ ಜಿಲ್ಲಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

61ನಗರ ಸ್ಥಳೀಯ ಸಂಸ್ಥೆಗಳು
8 ನಗರ ಸಭೆ (247 ವಾರ್ಡ್‌)
32 ಪುರಸಭೆ (734 ವಾರ್ಡ್‌)
21 ಪಟ್ಟಣ ಪಂಚಾಯಿತಿ (315 ವಾರ್ಡ್‌)
ಮತದಾರರು:14.79 ಲಕ್ಷ
ಅಭ್ಯರ್ಥಿಗಳು:4,360ನಗರ ಸ್ಥಳೀಯ ಸಂಸ್ಥೆಗಳು ಆಯಾ ಪ್ರದೇಶದ ಸ್ಥಳೀಯ ಸರ್ಕಾರಗಳಿದ್ದಂತೆ. ನಾಗರಿಕ ಮೂಲಸೌಕರ್ಯಗಳನ್ನು ಒದಗಿಸುವ ಜವಾಬ್ದಾರಿ ಈ ಸಂಸ್ಥೆಗಳ ಮೇಲಿರುತ್ತದೆ. ಪ್ರತಿಯೊಬ್ಬ ಮತದಾರ ಸಕ್ರಿಯವಾಗಿ ಭಾಗವಹಿಸಿ ತನ್ನ ಕರ್ತವ್ಯ ಮತ್ತು  ಜವಾಬ್ದಾರಿ ನಿರ್ವಹಿಸಬೇಕು. ಅತಿ ಹೆಚ್ಚು ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಬಂದು ಮತ ಚಲಾಯಿಸಬೇಕು.

● ಪಿ.ಎನ್‌. ಶ್ರೀನಿವಾಸಾಚಾರಿ, ರಾಜ್ಯ ಚು‌ನಾಣಾ ಆಯುಕ್ತ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.