ಮಕ್ಕಳಲ್ಲಿ ಕಾಣಿಸಿಕೊಳ್ಳುವ ಟೊಮ್ಯಾಟೊ ಜ್ವರ ಸೋಂಕು ನಿವಾರಣೆಗೆ “ಈ ಕ್ರಮ” ಅನುಸರಿಸಿ
ಈ ನಿಗೂಢ ರೋಗವನ್ನು ಕೈ, ಕಾಲು ಮತ್ತು ಬಾಯಿ ರೋಗ ಎಂದು ಕರೆಯಲಾಗುತ್ತದೆ
Team Udayavani, May 14, 2022, 3:22 PM IST
ಮಣಿಪಾಲ: ಐದು ವರ್ಷದೊಳಗಿನ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುವ ಟೊಮ್ಯಾಟೊ ಜ್ವರ ಅಪರೂಪದ ವೈರಸ್ ಆಗಿದೆ. ಆದರೆ ಇದು ವೈರಲ್ ಜ್ವರವೇ ಅಥವಾ ಡೆಂಗ್ಯೂ, ಚಿಕುನ್ ಗುನ್ಯಾ ಜ್ವರವೇ ಎಂಬುದು ಇನ್ನೂ ದೃಢಪಟ್ಟಿಲ್ಲ. ಈ ಜ್ವರ ಕಾಣಿಸಿಕೊಂಡ ಮಕ್ಕಳಲ್ಲಿ ಕೆಂಪು ದದ್ದು, ಚರ್ಮದ ಮೇಲೆ ಗುಳ್ಳೆ ಹಾಗೂ ನಿರ್ಜಲೀಕರಣ ಸಮಸ್ಯೆ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.
ಟೊಮ್ಯಾಟೊ ಜ್ವರ ಹೆಸರು ಬಂದಿದ್ದು ಹೇಗೆ?
ಜ್ವರ ಕಾಣಿಸಿಕೊಂಡ ಮಕ್ಕಳ ದೇಹದಲ್ಲಿ ಟೊಮ್ಯಾಟೊ ಆಕಾರದ ಗುಳ್ಳೆಗಳು ಏಳುವುದರಿಂದ ಇದಕ್ಕೆ ಟೊಮ್ಯಾಟೊ ಜ್ವರ ಎಂದು ಹೆಸರಿಡಲಾಗಿದೆ. ಈ ಜ್ವರ ಕೇರಳದ ಕೊಲ್ಲಂನಲ್ಲಿ ಹೆಚ್ಚು ಪ್ರಕರಣ ಪತ್ತೆಯಾಗಿದೆ. ಆದರೂ ಟೊಮ್ಯಾಟೊ ಜ್ವರ ಕೇರಳದ ಇತರ ಭಾಗಗಳಿಗೂ ಹರಡುವ ಸಾಧ್ಯತೆ ಇದ್ದಿರುವುದಾಗಿ ಆರೋಗ್ಯ ಅಧಿಕಾರಿಗಳು ಎಚ್ಚರಿಸಿದ್ದಾರೆ. ಈ ನಿಗೂಢ ರೋಗವನ್ನು ಕೈ, ಕಾಲು ಮತ್ತು ಬಾಯಿ ರೋಗ ಎಂದು ಕರೆಯಲಾಗುತ್ತದೆ ಎಂದು ವರದಿ ವಿವರಿಸಿದೆ.
ಇದನ್ನೂ ಓದಿ:ಐಪಿಎಲ್ ಗೆ ವಿದಾಯ ಹೇಳಿದ ಚೆನ್ನೈ ಆಟಗಾರ ಅಂಬಾಟಿ ರಾಯುಡು; ಕೆಲ ಕ್ಷಣದಲ್ಲೇ ಟ್ವೀಟ್ ಡಿಲೀಟ್!
ಟೊಮ್ಯಾಟೊ ಜ್ವರ: ಸೋಂಕು ನಿವಾರಣೆಗೆ ಈ ಕ್ರಮ ಅನುಸರಿಸಿ
1)ಟೊಮ್ಯಾಟೊ ಜ್ವರಕ್ಕೆ ತುತ್ತಾದ ಮಕ್ಕಳಿಗೆ ಅತೀ ಹೆಚ್ಚು ನೀರನ್ನು ಕುಡಿಸಬೇಕು. ಅದು ಕುದಿಸಿ ಆರಿಸಿದ ನೀರನ್ನು ನೀಡಬೇಕು.
2)ಕೆಂಪು ಗುಳ್ಳೆ ಅಥವಾ ದದ್ದುಗಳನ್ನು ಯಾವುದೇ ಕಾರಣಕ್ಕೂ ತಿಕ್ಕಿ ಗಾಯ ಮಾಡಿಕೊಳ್ಳಬೇಡಿ.
3)ಈ ಜ್ವರದಿಂದ ದೂರು ಉಳಿಯಲು ಹೆಚ್ಚು ಶುದ್ಧತೆ ಕಾಪಾಡಿಕೊಳ್ಳಬೇಕು. ರೋಗದ ಸೋಂಕು ಹರಡುವುದನ್ನು ತಪ್ಪಿಸಲು ಸೋಂಕಿಗೆ ಒಳಗಾದ ವ್ಯಕ್ತಿಯು ಬಳಸಿದ ಪಾತ್ರೆ, ಬಟ್ಟೆ ಮತ್ತು ಇತರ ವಸ್ತುಗಳನ್ನು ಸ್ಯಾನಿಟೈಸ್ ಮಾಡಬೇಕು.
4) ಉಗುರು ಬೆಚ್ಚಗಿನ ನೀರಿನಲ್ಲಿ ರೋಗಾಣು ನಿರೋಧಕ ಬೆರೆಸಿ ಸ್ನಾನ ಮಾಡಬೇಕು.
5)ಒಂದು ವೇಳೆ ಇಂತಹ ಜ್ವರದ ರೋಗ ಲಕ್ಷಣ ಕಂಡು ಬಂದಲ್ಲಿ, ಅದನ್ನು ನಿರ್ಲಕ್ಷಿಸಬೇಡಿ, ಕೂಡಲೇ ವೈದ್ಯರಲ್ಲಿ ಹೋಗಿ ತಪಾಸಣೆ ಮಾಡಿಸಿಕೊಳ್ಳಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ