ಬಿಟ್ ಕಾಯಿನ್ ವಿರುದ್ಧ ಕಠಿಣ ನಿಲುವು ಅಸಂಭವ: ಕೇಂದ್ರ ಸರ್ಕಾರ
ಬಿಟ್ ಕಾಯಿನ್ ನಿಯಂತ್ರಣಕ್ಕೆ ಕರಡು ವಿಧೇಯಕ ಸಿದ್ಧ
Team Udayavani, Nov 9, 2021, 10:16 AM IST
ನವದೆಹಲಿ: ವರ್ಚುವಲ್ ಕರೆನ್ಸಿ ಎಂದು ಕರೆಯಿಸಿಕೊಳ್ಳುವ ಬಿಟ್ ಕಾಯಿನ್ ವಿರುದ್ಧ ಕೇಂದ್ರ ಸರ್ಕಾರ ಕಠಿಣ ನಿಲುವು ತಾಳುವುದು ಅಸಂಭವ ಎಂದು ಹೇಳಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದೇಶವಾಸಿಗಳು ಬಿಟ್ಕಾಯಿನ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೂಡಿಕೆ ಮಾಡುತ್ತಿರುವುದರಿಂದ ಒಂದು ರೀತಿಯ ಸಮತೋಲಿತ ನಿಲುವು ಅನುಸರಿಸಲು ಯೋಚಿಸುತ್ತಿದೆ ಸರ್ಕಾರ.
ಇದನ್ನೂ ಓದಿ:ಚೆನ್ನೈನಲ್ಲಿ ಮತ್ತೆ ಮಳೆ ಅಬ್ಬರ,ನಾಲ್ವರು ಬಲಿ: ಆರೆಂಜ್ ಅಲರ್ಟ್
ಬಿಟ್ ಕಾಯಿನ್ ನಿಯಂತ್ರಣಕ್ಕೆ ಕರಡು ವಿಧೇಯಕ ಸಿದ್ಧಗೊಂಡಿದ್ದು, ಅದನ್ನು ಸಂಸತ್ನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆದು ಕೊಳ್ಳುವುದು ಕೇಂದ್ರದ ಇರಾದೆಯಾಗಿದೆ. ಡಿಜಿಟಲ್ ಕರೆನ್ಸಿಗೆ ಯಾವ ರೀತಿ ತೆರಿಗೆ ವಿಧಿಸಬೇಕು, ಅದರ ಮೇಲೆ ನಿಯಂತ್ರಣ ಅಥವಾ ಕಠಿಣ ನಿಲುವು ತಾಳುವುದರಿಂದ ಪ್ರತಿಕೂಲ ಪರಿಣಾಮ ಏನು, ಇತರ ದೇಶಗಳಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಈಗಾಗಲೇ ಒಂದು ಸುತ್ತಿನ ಸಮಾಲೋಚನೆಯನ್ನು ಕೇಂದ್ರ ವಿತ್ತ ಸಚಿವಾಲಯ ಪೂರ್ತಿಗೊಳಿಸಿದೆ.
ಹಿಂದೆ ಸಿದ್ಧಪಡಿಸಲಾಗಿದ್ದ ಕರಡು ವಿಧೇಯಕದಲ್ಲಿ ಬಿಟ್ ಕಾಯಿನ್ಗೆ ಪೂರ್ಣ ಪ್ರಮಾಣದ ನಿಷೇಧ ಹೇರುವ ಬಗ್ಗೆ ಸಲಹೆ ಮಾಡಲಾಗಿತ್ತು. ಆದರೆ, ದೇಶವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅದರ ಮೇಲೆ ಹೂಡಿಕೆ ಮಾಡುತ್ತಿರುವುದರಿಂದ ತೊಂದರೆ ಯಾಗದ ರೀತಿಯಲ್ಲಿ ಕಾನೂನು ರೂಪಿಸಲಾಗುತ್ತದೆ. ಪರಾಮರ್ಶೆ ಪೂರ್ತಿಗೊಂಡ ನಂತರ ಕರಡು ವಿಧೇಯ ಕವನ್ನು ಕೇಂದ್ರ ಸಂಪುಟಕ್ಕೆ ಸಲ್ಲಿಸಲಾಗುತ್ತದೆ ಎಂದು ಮೂಲಗಳನ್ನು ಉಲ್ಲೇಖೀಸಿ ” ದ ಇಕನಾಮಿಕ್ ಟೈಮ್ಸ್’ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ