ಕರಾವಳಿ ಹಿನ್ನೀರು ಪ್ರದೇಶದಲ್ಲಿ ಇಕೋ ಟೂರಿಸಂ : ಸಚಿವ ಲಿಂಬಾವಳಿ
Team Udayavani, Jul 11, 2021, 4:05 AM IST
ಕುಂದಾಪುರ: ಕರಾವಳಿ ಭಾಗದ ಹಿನ್ನೀರಿನಲ್ಲಿ ಹಲವಾರು ಸುಂದರ ಪ್ರದೇಶಗಳಿವೆ. ಜಲಚರಗಳಿಗೆ ಆಶ್ರಯ ನೀಡುವ ಮತ್ತು ಪ್ರಾಕೃತಿಕವಾಗಿ ಮನಸೆಳೆಯುವ ಕಾಂಡ್ಲಾ ವನ ಪ್ರದೇಶಗಳನ್ನು ಬಳಸಿಕೊಂಡು “ಇಕೋ ಟೂರಿಸಂ’ ಅಭಿವೃದ್ಧಿಗೊಳಿಸುವ ಚಿಂತನೆಗಳಿದ್ದು, ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ಅವರು ಶನಿವಾರ ಕುಂದಾಪುರದ ಕೋಡಿ ಪಂಚಗಂಗಾವಳಿ ನದಿ ತೀರದ ಹಿನ್ನೀರು ಪ್ರದೇಶಗಳಲ್ಲಿ ಬೋಟ್ ಮೂಲಕ ಸಂಚರಿಸಿ ಕಾಂಡ್ಲಾ ವನಗಳನ್ನು ವೀಕ್ಷಿಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಟೂರಿಸಂ ಆದಾಯ ಕಾಂಡ್ಲಾ ವನಕ್ಕೆ
ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಇಲ್ಲಿನ ರಮಣೀಯ ಪ್ರದೇಶಗಳ ದೃಶ್ಯಾವಳಿ ಗಳನ್ನು ಸೆರೆ ಹಿಡಿದು ಇಕೋ ಟೂರಿಸಂ ಕೇಂದ್ರಗಳನ್ನು ಗುರುತಿಸಲಾಗುವುದು. ಹಿನ್ನೀರು ಪ್ರದೇಶಗಳಲ್ಲಿ ಇನ್ನಷ್ಟು ಕಾಂಡ್ಲಾ ವನಗಳನ್ನು ಬೆಳೆಸುವ ಗುರಿ ಇದೆ. ಇಕೋ ಟೂರಿಸಂ ಮೂಲಕ ಬರುವ ಆದಾಯವನ್ನು ಬಳಸಿಕೊಂಡು ಕಾಂಡ್ಲಾ ವನಗಳನ್ನು ಅಭಿವೃದ್ಧಿ ಪಡಿಸುವ ಯೋಜನೆಗಳಿವೆ ಎಂದರು.
ಶೇ. 33ಕ್ಕೇರಿಸುವ ಗುರಿ
ಯಡಿಯೂರಪ್ಪ ಅವರ ಹಿಂದಿನ ಸರಕಾರದ ಅವಧಿಯಲ್ಲಿ ರೂಪಿಸಲಾದ “ಹಸಿರು ಕವಚ’ ಯೋಜನೆಯಿಂದಾಗಿ ರಾಜ್ಯದಲ್ಲಿ ಶೇ. 13ರಷ್ಟಿದ್ದ ಹಸಿರು ಕವಚ ಪ್ರಸ್ತುತ ಶೇ. 23ಕ್ಕೇರಿದೆ. ಅದನ್ನು ಶೇ. 33ಕ್ಕೆ ಏರಿಸುವ ಗುರಿ ಹೊಂದಲಾಗಿದೆ. ಒಂದೆರಡು ವರ್ಷಗಳಲ್ಲಿ ಮುಗಿಯುವ ಯೋಜನೆ ಇದಲ್ಲ; ಕಾಲಾವಕಾಶ ಬೇಕು ಎಂದ ಅವರು, ಬಂಡೀಪುರ ಸೇರಿದಂತೆ ಹಾಗೂ ಇತರ ಅರಣ್ಯ ಇಲಾಖೆಯ ಪ್ರವಾಸ ಸ್ಥಳಗಳಿಗೆ ಕೋವಿಡ್ ಕಾರಣದಿಂದ ವಿಧಿಸಲಾಗಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಆದರೆ ದಟ್ಟಾರಣ್ಯ ಪ್ರದೇಶಗಳಿಗೆ ಪ್ರವಾಸಿಗ ರಿಗೆ ಅನುಮತಿ ಇಲ್ಲ ಎಂದು ತಿಳಿಸಿದರು.
ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಂ. ಸುಕುಮಾರ ಶೆಟ್ಟಿ, ಹಿರಿಯ ಅಧಿಕಾರಿ ಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಜಿಲ್ಲೆಯಾದ್ಯಂತ ಸಚಿವರ ಪ್ರವಾಸ
ಉಡುಪಿ: ಸಚಿವ ಲಿಂಬಾವಳಿ ಶನಿವಾರ ಕುಂದಾಪುರ, ಉಡುಪಿ ಮತ್ತು ಕಾರ್ಕಳದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಬೆಳಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನ ಮಾಡಿ ಕೋಡಿ ಪಂಚಗಂಗಾವಳಿ ನದಿ ತೀರದ ಹಿನ್ನೀರು ಪ್ರದೇಶಗಳಲ್ಲಿ ಬೋಟ್ ಮೂಲಕ ಕಾಂಡ್ಲಾ ವನಗಳನ್ನು ವೀಕ್ಷಿಸಿದರು. ಬಳಿಕ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದ ಲ್ಲದೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖಾ ಸಭೆ ನಡೆಸಿದರು. ಹೆಬ್ರಿಯಲ್ಲಿ ಸಾಲು ಮರದ ತಿಮ್ಮಕ್ಕ ವೃಕ್ಷೊàದ್ಯಾನ ಉದ್ಘಾಟನೆ, ಕಾರ್ಕಳದಲ್ಲಿ ವನ್ಯಜೀವಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಉದ್ಘಾಟನೆ ನೆರವೇರಿಸಿ ಕೋಟಿ ಚೆನ್ನಯ ಥೀಂ ಪಾರ್ಕ್ಗೆ ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ