ದಟ್ಟ ಅರಣ್ಯದ ನಡುವೆ ನಿಸರ್ಗದಿಂದಲೇ ನಿರ್ಮಾಣಗೊಂಡಿದೆ ಕವಳಾ ಗುಹೆ…


Team Udayavani, Sep 10, 2022, 5:40 PM IST

ದಟ್ಟ ಅರಣ್ಯದ ನಡುವೆ ನಿಸರ್ಗದಿಂದಲೇ ನಿರ್ಮಾಣಗೊಂಡಿದೆ ಕವಳಾ ಗುಹೆ…

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಪ್ರವಾಸಿಗರಿಗೆ ಹೇಳಿ ಮಾಡಿಸಿದ ಸ್ಥಳ… ಇಲ್ಲಿ ಜಲಪಾತ, ಗಿರಿ ಶಿಖರ, ನದಿಗಳು, ದಟ್ಟ ಅರಣ್ಯ ಪ್ರದೇಶಗಳು, ಐತಿಹಾಸಿಕ ತಾಣಗಳು ಸೇರಿದಂತೆ ಪ್ರವಾಸಿಗರನ್ನು ದಾಂಡೇಲಿಗೆ ಕೈಬೀಸಿ ಕರೆಯುತ್ತದೆ. ದಾಂಡೇಲಿಯಲ್ಲಿ ಪ್ರವಾಸಿ ತಾಣಗಳ ಪಟ್ಟಿ ಮಾಡಿದರೆ ಮುಗಿಯದಷ್ಟು ಸ್ಥಳಗಳು ಇಲ್ಲಿ ಕಾಣಸಿಗುತ್ತವೆ ಆದರೆ ನಾನಿಂದು ದಾಂಡೇಲಿಯಲ್ಲಿ ಬಹಳ ವಿಶೇಷವಾಗಿರುವ ಸ್ಥಳದ ಬಗ್ಗೆ ನಿಮಗೆ ಮಾಹಿತಿ ನೀಡಲಿದ್ದೇನೆ ಅಲ್ಲದೆ ದಾಂಡೇಲಿ ಪ್ರವಾಸ ಕೈಗೊಂಡವರು ಈ ಸ್ಥಳಕ್ಕೂ ಭೇಟಿ ನೀಡಿ. ನಿಜಕ್ಕೂ ಈ ಸ್ಥಳ ನಿಮಗೆ ಒಂದು ಹೊಸ ಅನುಭವ ನೀಡಬಹುದು, ಅಂದ ಹಾಗೆ ನಾನು ಹೇಳ ಹೊರಟಿರುವುದು ದಾಂಡೇಲಿಯ ದಟ್ಟ ಅರಣ್ಯದಲ್ಲಿ ನೈಸರ್ಗಿಕವಾಗಿ ನೆಲೆ ನಿಂತಿರುವ ಕವಳಾ ಗುಹೆ…

ದಾಂಡೇಲಿಯಿಂದ ಸುಮಾರು ಇಪ್ಪತ್ತೈದು ಕಿಲೋಮೀಟರ್ ದೂರದಲ್ಲಿರುವ ಕವಳಾ ಗುಹೆ ದಟ್ಟ ಅರಣ್ಯದ ಮಧ್ಯೆ ಇರುವ ಬೆಟ್ಟದ ಮೇಲಿದ್ದು ಇಲ್ಲಿಗೆ ತಲುಪಬೇಕಾದರೆ ಸುಮಾರು ಮೂನ್ನೂರ ಐವತ್ತಕ್ಕೂ ಹೆಚ್ಚು ಮೆಟ್ಟಿಲುಗಳನ್ನು ಹತ್ತಲೇ ಬೇಕು ಆ ಬಳಿಕ ಗುಹೆಯ ಪ್ರವೇಶ ದ್ವಾರ ಸಿಗುತ್ತದೆ ಅಲ್ಲಿಂದ ಮುಂದುವರೆದಂತೆ ಕಡಿದಾದ ದಾರಿಸಿಗುತ್ತದೆ ಅಲ್ಲಿಂದ ಮುಂದೆ ಪ್ರವೇಶಿಸಿದರೆ ಪ್ರಕೃತಿಯಿಂದಲೇ ನಿರ್ಮಾಣಗೊಂಡ ಐದು ಅಡಿ ಎತ್ತರದ ದುಂಡಾಕಾರದ ಶಿವಲಿಂಗ ಕಾಣಸಿಗುತ್ತದೆ ಈ ಶಿವಲಿಂಗದ ಮೇಲೆ ಬಂಡೆಕಲ್ಲುಗಳು ಆವರಿಸಿಕೊಂಡಿದ್ದು ಇದರಿಂದ ಚಿಮ್ಮುವ ನೀರಿನಿಂದಲೇ ಶಿವಲಿಂಗಕ್ಕೆ ನಿತ್ಯ ಅಭಿಷೇಕ.

ಶಿವರಾತ್ರಿ ಇಲ್ಲಿ ವಿಶೇಷ :

ಪ್ರಕೃತಿಯಿಂದಲೇ ನಿರ್ಮಾಣಗೊಂಡ ಶಿವಲಿಂಗಕ್ಕೆ ಶಿವರಾತ್ರಿಯ ಸಂದರ್ಭ ಇಲ್ಲಿ ವಿಶೇಷ ಪೂಜೆ ನಡೆಯುತ್ತಂತೆ ಅಲ್ಲದೆ ರಾಜ್ಯದ ನಾನಾ ಕಡೆಯಿಂದ ಭಕ್ತರು ಇಲ್ಲಿಗೆ ಬರುತ್ತಾರೆ ಶಿವರಾತ್ರಿಯ ದಿನ ಭಕ್ತರ ಸಂಖ್ಯೆ ಹೆಚ್ಚಾಗಿರುವ ಕಾರಣ ಭಕ್ತರಿಗೆ ದೇವರ ದರ್ಶನ ಆಗಬೇಕಾದರೆ ಸಂಜೆ ವರೆಗೂ ಕಾಯಬೇಕಾಗುತ್ತದೆ ಎಂದು ಇಲ್ಲಿಗೆ ಭೇಟಿ ನೀಡಿದ ಭಕ್ತರ ಮಾತು.ಅಲ್ಲದೆ ಈ ಬೆಟ್ಟದ ಮೇಲೆ ನಿಂತು ನೋಡಿದರೆ ಬೆಟ್ಟದ ಬುಡದಲ್ಲಿ ಹರಿಯುವ ಕಾಳಿ ನದಿ ಹಾಗೂ ಸುತ್ತಮುತ್ತಲ ಪ್ರಕೃತಿ ಸೌಂದರ್ಯವನ್ನು ಕಾಣಬಹುದು.

ಜ್ವಾಲಾಮುಖಿಯಿಂದ ಗುಹೆ ನಿರ್ಮಾಣ :
ಹಲವು ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ಸಂಭವಿಸಿದ ಜ್ವಾಲಾಮುಖಿಯಿಂದ ಈ ಗುಹೆ ನಿರ್ಮಾಣವಾಗಿದೆ ಎಂದು ಇತಿಹಾಸ ಹೇಳುತ್ತದೆ ಅದಕ್ಕೆ ಪೂರಕವೆಂಬಂತೆ ಇಲ್ಲಿನ ಕಲ್ಲು ಬಂಡೆಗಳು ಜ್ವಾಲಾಮುಖಿ ಸ್ಪೋಟಗೊಂಡು ನಿರ್ಮಾಣವಾದಂತೆ ಭಾಸವಾಗುತ್ತದೆ.

ಅರಣ್ಯ ಇಲಾಖೆಯ ಅನುಮತಿ ಅಗತ್ಯ :
ಕವಳಾ ಗುಹೆಗೆ ಶಿವರಾತ್ರಿ ದಿನ ಬಿಟ್ಟು ಉಳಿದ ದಿನಗಳಲ್ಲಿ ಇಲ್ಲಿಗೆ ಭೇಟಿ ನೀಡಬೇಕಾದರೆ ಅರಣ್ಯ ಇಲಾಖೆಯ ಅನುಮತಿ ಕಡ್ಡಾಯ ಅಲ್ಲದೆ ಪ್ರವಾಸಿಗರಿಗೆ ಗುಹೆ ಪ್ರವೇಶಿಸಲು ಪ್ರವೇಶ ಶುಲ್ಕ ಪಾವತಿಸಬೇಕು. ಮುಖ್ಯ ವಿಚಾರ ಏನೆಂದರೆ ಈ ಗುಹೆಗೆ ಭೇಟಿ ನೀಡಲು ಬೆಳಿಗ್ಗೆ 8 ರಿಂದ ಸಂಜೆ 5ರ ವರೆಗೆ ಮಾತ್ರ ಅರಣ್ಯ ಇಲಾಖೆಯ ಅನುಮತಿ ದಟ್ಟ ಅರಣ್ಯ ಪ್ರದೇಶವಾಗಿರುವುದರಿಂದ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ.

ಸ್ವಚ್ಛತೆ ಕಾಪಾಡಿ :
ಯಾವುದೇ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದರು ನಾನು ಅಲ್ಲಿನ ಪರಿಸರವನ್ನು ಸ್ವಚ್ಛವಾಗಿರಿಸುವುದು ನಮ್ಮ ಕರ್ತವ್ಯ ಹಾಗಾಗಿ ನಾವು ಕೊಂಡುಹೋದ ತಿಂಡಿ ತಿನಿಸುಗಳ ಪ್ಯಾಕೆಟ್ ಗಳನ್ನು ಎಲ್ಲೆಂದರಲ್ಲಿ ಎಸೆಯದಿರಿ ಜೊತೆಗೆ ಇತರರಿಗೂ ಈ ವಿಚಾರ ತಿಳಿಸಿ.

ಎಚ್ಚರವೂ ಅಗತ್ಯ :
ಕವಳಾ ಗುಹೆ ಪ್ರದೇಶ ದಟ್ಟ ಅರಣ್ಯ ಪ್ರದೇಶದಿಂದ ಕೂಡಿರುವುದರಿಂದ ಕಾಡು ಪ್ರಾಣಿಗಳು, ಹಾವುಗಳಂತ ವಿಷಕಾರಿ ಜೀವಿಗಳು ಇರುವ ಸಾಧ್ಯತೆ ಹೆಚ್ಚು ಅದೂ ಮಳೆಗಾಲದಲ್ಲಿ ಹಾವುಗಳ ಸಂಚಾರ ಹೆಚ್ಚಾಗಿರುವ ಕಾರಣ ಎಚ್ಚರ ಅಗತ್ಯ.

ಮಾರ್ಗ ಹೇಗೆ :
ಕವಳಾ ಗುಹೆ ಪ್ರವೇಶಿಸಲು ಎರಡು ಮಾರ್ಗಗಳಿವೆ ಮೊದಲನೆಯದು ಜೋಯಿಡಾ ತಾಲೂಕಿನ ಪಣಸೋಲಿಯಿಂದ ದಟ್ಟ ಅರಣ್ಯದ ಮಧ್ಯೆ ಸಾಗುವ ದಾರಿಯಾದರೆ, ಎರಡನೆಯದು ಅಂಬಿಕಾನಗರದ ನಾಗಝರಿಯಿಂದ ನೂರಾರು ಮೆಟ್ಟಿಲುಗಳನ್ನು ಹತ್ತಿ ಹೋಗುವ ಮಾರ್ಗವಾಗಿದೆ.

ನೀವು ಮೂರು ನಾಲ್ಕು ದಿನಗಳ ಲೆಕ್ಕಾಚಾರದಲ್ಲಿ ದಾಂಡೇಲಿ ಪ್ರವಾಸ ಕೈಗೊಂಡರೆ ಇಲ್ಲಿನ ಎಲ್ಲಾ ಪ್ರವಾಸಿ ತಾಣಗಳನ್ನು ಕಣ್ತುಂಬಿಕೊಳ್ಳಬಹುದು. ಇಲ್ಲಿರುವ ಸ್ಕೈ ಪಾಯಿಂಟ್ ಮೂಲಕ ಕಾಳಿ ಕಣಿವೆಯ ರುದ್ರ ರಮಣೀಯ ನೋಟವನ್ನು ನೋಡಬಹುದಾಗಿದೆ. ಅಲ್ಲದೆ ರಿವರ್ ರಾಫ್ಟಿಂಗ್ ಗೂ ಕಾಳಿ ನದಿ ಹೆಸರುವಾಸಿ. ದಾಂಡೇಲಿ ಅಭಯಾರಣ್ಯದಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿದ್ದು ಅರಣ್ಯ ಇಲಾಖೆಯ ಅನುಮತಿ ಪಡೆದು ಎಲ್ಲ ಪ್ರದೇಶವನ್ನು ವೀಕ್ಷಿಸಬಹುದಾಗಿದೆ, ಇಲ್ಲಿ ಪ್ರವಾಸಿಗರಿಗೆ ಉಳಿಯಲು ಹೋಟೆಲ್, ರೆಸಾರ್ಟ್ ಗಳ ವ್ಯವಸ್ಥೆಯೂ ಇದೆ.

– ಸುಧೀರ್ ಆಚಾರ್ಯ 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.